ಮೀನು ಹರಾಜಿಗೆ ಪ್ರತ್ಯೇಕ ವ್ಯವಸ್ಥೆ
Team Udayavani, Apr 24, 2020, 5:15 AM IST
ಗಂಗೊಳ್ಳಿ: ಹೊಸಾಡು ಗ್ರಾಮದ ಕಂಚುಗೋಡು ಪ್ರದೇಶದಲ್ಲಿ ದೋಣಿಗಳಿಂದ ಮೀನು ಇಳಿಸಲು, ಹರಾಜು ಹಾಕುವ ಸ್ಥಳದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಗಂಗೊಳ್ಳಿಯ ಕರಾವಳಿ ಕಾವಲು ಪಡೆ ಹಾಗೂ ಗಂಗೊಳ್ಳಿ ಠಾಣೆಯ ಪೊಲೀಸರು ಪ್ರತ್ಯೇಕ ವ್ಯವಸ್ಥೆಯನ್ನು ಮಾಡಿದ್ದಾರೆ.
ಕಂಚುಗೋಡು ಹಾಗೂ ಗಂಗೊಳ್ಳಿ ಲೈಟ್ಹೌಸ್ನಲ್ಲಿ ಮೀನುಗಾರಿಕೆ ಮುಗಿಸಿ ಬರುವ ದೋಣಿಗಳಿಂದ ಮೀನು ಇಳಿಸಲು ಹಾಗೂ ಮಾರಾಟಗಾರರಿಗೆ ಹರಾಜು ಹಾಕಲು ಅವಕಾಶ ಮಾಡಿಕೊಡಲಾಗಿದೆ. ಆದರೆ ಇಲ್ಲಿ ಮೀನು ಮಾರಾಟಗಾರರು ಮಾತ್ರವಲ್ಲದೆ ಜನರು ಕೂಡ ಗುಂಪು – ಗುಂಪಾಗಿ ಬಂದು ಖರೀದಿಸುತ್ತಿದ್ದಾರೆ ಎನ್ನುವ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ.
ಮೀನು ಖರೀದಿ ವೇಳೆ ದೈಹಿಕ ಅಂತರ ಕಾಯ್ದುಕೊಳ್ಳಲು ಅನುಕೂಲವಾಗುವಂತೆ, ಒಂದು ಸ್ಥಳದಲ್ಲಿ ಸುತ್ತ ಹಗ್ಗ ಕಟ್ಟಿ, ಅದರೊಳಗೆ ಹರಾಜು ಹಾಕುವ ವ್ಯವಸ್ಥೆ ಮಾಡಲಾಗಿದೆ. ಅದರೊಳಗೆ ಸಂಬಂಧವಿಲ್ಲದವರು ಯಾರೂ ಕೂಡ ಅಲ್ಲಿಗೆ ಹೋಗುವಂತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !