ಕರುನಾಡ ಕಣ್ಮಣಿಯ 92ನೇ ಹುಟ್ಟುಹಬ್ಬ: ಅಣ್ಣಾವ್ರ ಅಭಿಮಾನಿಗಳಿಗೆ ಸರ್ ಪ್ರೈಸ್ ನೀಡಲಿರುವ ಅಪ್ಪು
Team Udayavani, Apr 24, 2020, 8:55 AM IST
ಬೆಂಗಳೂರು: ಕನ್ನಡ ಚಿತ್ರರಂಗ ಮಾತ್ರವಲ್ಲ, ಭಾರತೀಯ ಚಿತ್ರರಂಗ ಮರೆಯಲಾಗದ ವ್ಯಕ್ತಿತ್ವ ಇವರು. ಕನ್ನಡ ನಾಡು ನುಡಿ ಜಲ ನೆಲ ಮತ್ತು ಹೋರಾಟ ಎಂದಾಗ ಮೊದಲು ನೆನಪಾಗುವ ಹೆಸರೇ ಡಾ. ರಾಜ್ ಕುಮಾರ್. ಕನ್ನಡ ಚಿತ್ರರಂಗಕ್ಕೆ ಡಾ. ರಾಜ್ ಕುಮಾರ್ ಹಾಕಿಕೊಟ್ಟ ಭದ್ರ ಬುನಾದಿ ಆಳವಾಗಿ ಬೇರೂರಿದೆ. ಏಪ್ರಿಲ್ 24 ಕನ್ನಡಿಗರಿಗೆ ವಿಶೇಷವಾದ ದಿನ. ಅದರಲ್ಲೂ ಡಾ.ರಾಜ್ ಅಭಿಮಾನಿಗಳಿಗೆ ಸಂಭ್ರಮ.
ಹೌದು. ಇಂದು ವರನಟ, ನಟಸಾರ್ವಭೌಮ ಡಾ.ರಾಜ್ ಕುಮಾರ್ ಅವರ 92ನೇ ಹುಟ್ಟುಹಬ್ಬ. ಪ್ರತೀವರ್ಷ ರಾಜ್ ಕುಮಾರ್ ಹುಟ್ಟುಹಬ್ಬವನ್ನು ರಾಜ್ಯದಾದ್ಯಂತ ಮತ್ತು ಕಂಠೀರವ ಸ್ಟುಡಿಯೋದಲ್ಲಿ ಅಭಿಮಾನಿಗಳು ಅದ್ದೂರಿಯಾಗಿ ಆಚರಣೆ ಮಾಡುತ್ತಿದ್ದರು. ಆದರೇ ಕೋವಿಡ್ 19 ಪರಿಣಾಮದಿಂದ ಯಾರು ಕೂಡ ಮನೆಯಿಂದ ಹೊರಬರದೇ. ಇದ್ದ ಜಾಗದಲ್ಲಿಯೇ ನೆಚ್ಚಿನ ನಟನ ಸ್ಮರಣೆ ಮಾಡಿ ಎಂದು ರಾಜ್ ಕುಟುಂಬ ಮನವಿ ಮಾಡಿದೆ.
ಇಂದು ನಮ್ಮ ಮೂರೂ ಕುಟುಂಬ ಮಾತ್ರ ಸೇರಿಕೊಂಡು ಅಪ್ಪಾಜಿಯವರ ಫೋಟೋಗೆ ಪೂಜೆ ಮಾಡಿ ಸಿಹಿ ತಿಂದು ಆಚರಿಸುತ್ತೇವೆ. ದಯಮಾಡಿ ಅಭಿಮಾನಿಗಳಾರೂ ಹೊರಗೆ ಬರದೆ ಲಾಕ್ಡೌನ್ ಪಾಲಿಸಿ ತಮ್ಮ ತಮ್ಮ ಆರೋಗ್ಯ ಕಾಪಾಡಿಕೊಳ್ಳಿ. ಮಾತ್ರವಲ್ಲದೆ ಅಪ್ಪಾಜಿಯವರ ಸಿನಿಮಾಗಳನ್ನು ನೋಡುತ್ತಾ ಹುಟ್ಟುಹಬ್ಬ ಆಚರಿಸಿ. ಇದೇ ಅಪ್ಪಾಜಿಯವರಿಗೆ ನಾವು ಕೊಡುವ ಗೌರವ ಎಂದು ನಟ ರಾಘವೇಂದ್ರ ರಾಜ್ಕುಮಾರ್ ಮನವಿ ಮಾಡಿದ್ದಾರೆ.
ನಾನು ಮಧ್ಯಾಹ್ಯ 12.30ಕ್ಕೆ ನನ್ನ ಇನ್ ಸ್ಟಾಗ್ರಾಂ ಅಕೌಂಟ್ನಿಂದ ಲೈವ್ ಬಂದು ಅಪ್ಪಾಜಿಯವರ ಅಭಿಮಾನಿಗಳಿಗೆ ಮತ್ತು ಕನ್ನಡ ಪ್ರೇಕ್ಷಕರಿಗೆ ಚಿಕ್ಕ ಸರ್ಪ್ರೈಸ್ ನೀಡುತ್ತಿದ್ದೇನೆ. ನಾವೆಲ್ಲರೂ ಈ ಸಂಕಷ್ಟದಿಂದ ಹೊರಬಂದ ಮೇಲೆ ಸಂಭ್ರಮಪಡಬಹುದು ಎಂದು ಪುನೀತ್ ರಾಜ್ ಕುಮಾರ್ ಇದೇ ವೇಳೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್