48 ಗಂಟೆ: 150 ತಬ್ಲೀಘಿ ಪತ್ತೆ
ದಿಲ್ಲಿ ಪೊಲೀಸರ ಹುಡುಕಾಟದಲ್ಲಿ ಕೊನೆಗೂ ಸಿಕ್ಕಿಬಿದ್ದ ಶಂಕಿತರು
Team Udayavani, Apr 24, 2020, 12:24 PM IST
ಉ.ಪ್ರ.ದ ಶಾಮ್ಲಿಯಲ್ಲಿರುವ ತಬ್ಲಿ ಜಮಾತ್ ಮುಖ್ಯಸ್ಥ ಮೌಲಾನಾ ಸಾದ್ ನಿವಾಸಕ್ಕೆ ಆಗಮಿಸಿದ್ದ ಪೊಲೀಸರು ತಪಾಸಣೆ ಮುಕ್ತಾಯಗೊಳಿಸಿ ಹೊರಬರುತ್ತಿರುವುದು.
ಉತ್ತರಪ್ರದೇಶದಲ್ಲಿ 48 ಗಂಟೆಗಳ ಅವಧಿಯಲ್ಲಿ ವಿದೇಶಿಗರು ಸೇರಿದಂತೆ ಕನಿಷ್ಠ 150 ತಬ್ಲಿಘಿ ಜಮಾತ್ ಸದಸ್ಯರನ್ನು ದಿಲ್ಲಿ ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಇದರೊಂದಿಗೆ ಇದುವರೆಗೂ 341 ಧರ್ಮಗುರುಗಳು ಸೇರಿದಂತೆ 3,204 ಜಮಾತ್ ಸದಸ್ಯರನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿದೆ.
ದಿಲ್ಲಿಯ ನಿಜಾಮುದ್ದೀನ್ ಮರ್ಕಜ್ನಲ್ಲಿ ಧಾರ್ಮಿಕ ಸಮಾವೇಶದಲ್ಲಿ ಪಾಲ್ಗೊಂಡಿದ್ದ 500 ಮಂದಿ ತಲೆಮರೆಸಿಕೊಂಡಿರುವ ಕುರಿತು ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು ಎನ್ನಲಾಗಿದ್ದು, ಅದರ ಆಧಾರದ ಮೇರೆಗೆ ಕಾನ್ಪುರ ಐಐಟಿ ನೆರವಿನೊಂದಿಗೆ ವಿಶೇಷ ಕ್ಯಾಮೆರಾ, ಡ್ರೋನ್ಗಳನ್ನು ಬಳಸಿಕೊಂಡು ಇವರನ್ನು ಪತ್ತೆ ಹಚ್ಚಲಾಗಿದೆ. ಇದಕ್ಕಾಗಿಯೇ ಪ್ರತಿ ಜಿಲ್ಲೆಯಲ್ಲೂ ವಿಶೇಷ ತಂಡಗಳನ್ನು ನಿಯೋಜಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಮೀರತ್ ವಲಯವೊಂದರಲ್ಲೇ ಇದುವರೆಗೂ 1400 ತಬ್ಲಿಘಿ ಜಮಾತ್ ಸದಸ್ಯರನ್ನು ಪತ್ತೆ ಹಚ್ಚಲಾಗಿದೆ.
21 ವಿದೇಶಿಯರ ಬಂಧನ
ಥಾಣೆ: ಮಾರ್ಚ್ನಲ್ಲಿ ದಿಲ್ಲಿಯಲ್ಲಿ ನಡೆದ ತಬ್ಲೀಘಿಜಮಾತ್ ಸಮಾವೇಶದಲ್ಲಿ ಪಾಲ್ಗೊಂಡಿದ್ದ 21 ವಿದೇಶಿಯರು ಸೇರಿದಂತೆ ಒಟ್ಟು 25 ಮಂದಿಯನ್ನು ಥಾಣೆ ಪೊಲೀಸರು ಬಂಧಿಸಿದ್ದಾರೆ.
ಇವರೆಲ್ಲರ ಕ್ವಾರಂಟೈನ್ ಅವಧಿ ಮುಗಿದಿದ್ದು, ಗುರುವಾರ ಇವರನ್ನು ಬಂಧಿಸಿ, ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಇವರಿಗೆ ಜಾಮೀನು ಮಂಜೂರು ಮಾಡಿದ್ದು, ದೇಶ ಬಿಟ್ಟು ಹೋಗದಂತೆ ತಾಕೀತು ಮಾಡಿದೆ. ಬಂಧಿತರಲ್ಲಿ 13 ಬಾಂಗ್ಲಾದೇಶಿಯರು, 8 ಮಂದಿ ಮಲೇಷ್ಯಾ ಪ್ರಜೆಗಳು ಹಾಗೂ ನಾಲ್ವರು ಸ್ಥಳೀಯರು ಸೇರಿದ್ದಾರೆ. ಈ ವಿದೇಶಿ ಪ್ರಜೆಗಳು ತಮ್ಮ ಪ್ರವಾಸಿ ವೀಸಾವನ್ನು ದುರುಪಯೋಗ ಪಡಿಸಿಕೊಂಡು, ಸಮಾವೇಶದಲ್ಲಿ ಪಾಲ್ಗೊಂಡ ನಂತರ ಇಲ್ಲಿಗೆ ಆಗಮಿಸಿದ್ದರು. ಇಲ್ಲಿನ ತನ್ವೀರ್ ಉಲಮ್ ಮದರಸಾ ಹಾಗೂ ಇತರೆಡೆ ಆಶ್ರಯ ಪಡೆದಿದ್ದರು. ಎ.1ರಂದು ಇವರನ್ನು ಕ್ವಾರಂಟೈನ್ನಲ್ಲಿ ಇಡಲಾಗಿತ್ತು ಎಂದು ಹಿರಿಯ ಇನ್ಸ್ಪೆಕ್ಟರ್ ನಿತಿನ್ ಠಾಕ್ರೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್
BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ
Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ
Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್ ರೇವಣ್ಣನಂಥವರಾ?; ಜಿಗ್ನೇಶ್
MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು