ಆರ್ಥಿಕ ವಲಯಕ್ಕೆ ಮರುಜೀವ

ಗೊಬ್ಬರ- ಪೈಪ್‌ ಅಂಗಡಿ- ಗ್ಯಾರೇಜ್‌ ಆರಂಭ ಇನ್ನಷ್ಟು ವ್ಯಾಪಾರ ಶುರುವಾಗುವ ನಿರೀಕ್ಷೆ

Team Udayavani, Apr 24, 2020, 12:42 PM IST

24-April-12

ಶಿವಮೊಗ್ಗ: ಹೊಳೆ ಬಸ್‌ ನಿಲ್ದಾಣದ ಬಳಿ ರೈಲ್ವೆ ಹಳಿ ಕೆಲಸ ಆರಂಭವಾಗಿರುವುದು.

ಶಿವಮೊಗ್ಗ: ಈವರೆಗೂ ಕೋವಿಡ್ ವೈರಸ್‌ ಕಾಣಿಸಿಕೊಳ್ಳದೇ ಗ್ರೀನ್‌ ಜೋನ್‌ನಲ್ಲಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಗುರುವಾರದಿಂದ ನೀಡಿರುವ ಸಡಿಲಿಕೆಯು ಆರ್ಥಿಕ ವಲಯಕ್ಕೆ ಚೇತರಿಕೆ ನೀಡಿದೆ. ಬೆಳಗ್ಗೆ 7ರಿಂದ 12 ಗಂಟೆವರೆಗೆ ಕದ್ದು ಮುಚ್ಚಿ ವ್ಯವಹಾರ ನಡೆಸುತ್ತಿದ್ದ ವಾಣಿಜ್ಯ ಮಳಿಗೆಗಳು ಈಗ ನಿರಾಳಗೊಂಡಿವೆ.

ಕೃಷಿ ವಲಯಕ್ಕೆ ಸಂಪೂರ್ಣ ಉತ್ತೇಜನ ನೀಡಿರುವುದರಿಂದ ಕೃಷಿ ಪೂರಕವಾದ ಗೊಬ್ಬರ, ಪೈಪ್‌, ಗ್ಯಾರೇಜ್‌ಗಳು ಆರಂಭಗೊಂಡಿವೆ. ಶಿವಮೊಗ್ಗ- ಭದ್ರಾವತಿ, ಶಿವಮೊಗ್ಗ- ತೀರ್ಥಹಳ್ಳಿ, ಸಾಗರ ನಡುವಿನ ಡಾಬಾಗಳು ಇನ್ನಷ್ಟೇ ಕಾರ್ಯಾರಂಭ ಮಾಡಬೇಕಿದೆ. ಮೊಬೈಲ್‌ ರೀಚಾರ್ಜ್‌ ಮಳಿಗೆ ತೆರೆಯಲು ಅವಕಾಶ ನೀಡಿರುವುದು ಬೇರೆ ರೀತಿ ಚಟುವಟಿಕೆಗೂ ದಾರಿಯಾಗಿದೆ. ಜೆರಾಕ್ಸ್‌, ದಿನಸಿ ಅಂಗಡಿ ಜತೆ ರೀಚಾರ್ಜ್‌ ಸೇವೆ ಮಾಡುತ್ತಿದ್ದ ಅಂಗಡಿಗಳು ಸಹ ಓಪನ್‌ ಆಗಿವೆ. ಮೊದಲಿನಿಂದಲೂ ನಗರ ಭಾಗದಲ್ಲಿ ಹೆಚ್ಚಿನ ಬಿಗಿ ಭದ್ರತೆ ಒದಗಿಸಲಾಗಿದೆ. ಗ್ರಾಮಾಂತರದಲ್ಲಿ ಅಷ್ಟಿಲ್ಲ. ಇದೇ ಅವಕಾಶ ಬಳಸಿಕೊಂಡು ಇನ್ನಷ್ಟು ವ್ಯಾಪಾರ ವಹಿವಾಟು ನಡೆಯುತ್ತಿದೆ.

ಡೋರ್‌ ಹಾಕಿದಂತೆ ಕಾಣುತ್ತಿದ್ದರೂ ಸಲೂನ್‌ಗಳು ಕಾರ್ಯ ನಿರ್ವಹಿಸುತ್ತಿವೆ. ಗ್ರಾಹಕರಿಗೆ ಕರೆ ಮಾಡಿ ಬೆಳಗ್ಗಿನ ಜಾವ ಕರೆದು ಕ್ಷೌರ ಮಾಡಲಾಗುತ್ತಿದೆ. ಅನೇಕ ಬಾರಿ ಪೊಲೀಸರು ಮತ್ತು ಬೀಟ್‌ ಅಧಿಕಾರಿಗಳು ಮೌಖೀಕ ತಿಳಿವಳಿಕೆ ನೀಡಿದರೂ ಕದ್ದು ಮುಚ್ಚಿ ವ್ಯವಹಾರಗಳು ಜೋರಾಗಿವೆ. ಮಧ್ಯಾಹ್ನ 12 ಗಂಟೆವರೆಗೂ ನಗರ ಭಾಗದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಪೊಲೀಸರು ನಿಯಂತ್ರಣ ಮಾಡುತ್ತಿದ್ದಾರೆ. ಕೆಲ ಏರಿಯಾಗಳ ರಸ್ತೆ ಬ್ಲಾಕ್‌ ಮಾಡಿರುವುದರಿಂದ ಮುಖ್ಯ ರಸ್ತೆಗಳು ಜನದಟ್ಟಣೆಯಿಂದ ಕೂಡಿದ್ದವು.

ಹೊಟೇಲ್‌ಗ‌ಳಲ್ಲಿ ಪಾರ್ಸೆಲ್‌ ಸೇವೆಗೆ ಅವಕಾಶ ಇದ್ದರೂ ನಷ್ಟದ ಭೀತಿಯಲ್ಲಿ ಯಾರೂ ಮುಂದೆ ಬರುತ್ತಿಲ್ಲ. ಹೈವೇ ಡಾಬಾಗಳು ಇನ್ನೆರಡು ದಿನಗಳಲ್ಲಿ ಓಪನ್‌ ಆಗಬಹುದು. ಅದೇ ಹೆಚ್ಚು ವಾಣಿಜ್ಯ ಮಳಿಗೆಗಳಿರುವ ಗಾರ್ಡನ್‌ ಏರಿಯಾ, ಗಾಂಧಿ  ಬಜಾರ್‌ನಲ್ಲಿ ಜನರ ಓಡಾಟಕ್ಕೆ ಅವಕಾಶವಿಲ್ಲ. ಸಣ್ಣಪುಟ್ಟ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿರುವುದರಿಂದ ಓಪನ್‌ ಮಾಡುತ್ತಿಲ್ಲ. ಹೊಸ ಆದೇಶದ ನಂತರ ಜನರಲ್ಲಿ ಗೊಂದಲಗಳಿದ್ದು ಹಂತಹಂತವಾಗಿ ಚಟುವಟಿಕೆ ಆರಂಭಗೊಳ್ಳುವ ನಿರೀಕ್ಷೆ ಇದೆ.

ಜನರಲ್ಲಿ ಗೊಂದಲ ಜಿಲ್ಲೆ ಒಳಗೆ ಓಡಾಡಲು ಯಾರಿಗೂ ಪಾಸ್‌ ವ್ಯವಸ್ಥೆ ಮಾಡದ ಕಾರಣ ಕೆಲ ಸಾರ್ವಜನಿಕರು ಗೊಂದಲದಲ್ಲಿದ್ದಾರೆ. ಕೃಷಿ ಸಂಬಂಧಿತ ವಾಣಿಜ್ಯ ಮಳಿಗೆ ಸಿಬ್ಬಂದಿ ಯಾವ ಕಾರ್ಡ್‌ ಇಲ್ಲದೇ ಓಡಾಡಲು ಹಿಂಜರಿಯುತ್ತಿದ್ದಾರೆ. ಪ್ರಮುಖ ಸರ್ಕಲ್‌ಗ‌ಳಲ್ಲಿ ಚೆಕ್‌ಪೋಸ್ಟ್‌ ಮಾಡಿರುವುದರಿಂದ ತಪಾಸಣೆ ಕಡ್ಡಾಯವಾಗಿದೆ. ಪ್ರತಿ ಹಂತದಲ್ಲೂ ವಿಚಾರಣೆಗೆ ಒಳಗಾಗುವುದು ಇರಿಸು ಮುರಿಸು ಉಂಟು ಮಾಡುತ್ತಿದೆ.

ಕಟ್ಟಡ ನಿರ್ಮಾಣ ಸ್ಪೀಡ್‌ ಮಳೆಗಾಲ ಆರಂಭದೊಳಗೆ ಮನೆ ಕಾಮಗಾರಿ ಮುಗಿಸಲು ಅನೇಕರು ಮುಂದಾಗಿದ್ದರು. ಲಾಕ್‌ಡೌನ್‌ ಕಾರಣ
ಸಾಧ್ಯವಾಗಿರಲಿಲ್ಲ. ಬಸವ ಜಯಂತಿಗೆ ಸಿದ್ಧತೆ ಮಾಡಿಕೊಂಡವರು ಮುಂದಿನ ಶುಭ ದಿನಕ್ಕೆ ಯೋಚನೆ ಮಾಡುತ್ತಿದ್ದಾರೆ. ಒಳ ರಸ್ತೆಗಳಲ್ಲಿ ಈಗಾಗಲೇ ಕಡಿಮೆ ಕಾರ್ಮಿಕರಿಟ್ಟುಕೊಂಡು ನಡೆಸುತ್ತಿದ್ದ ಕಾಮಗಾರಿ ಈಗ ಗರಿಗೆದರಿದೆ.

ಟಾಪ್ ನ್ಯೂಸ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

ayanuru-Manjunath

BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

13-ragini-dance

Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್‌ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.