ಅಬಕಾರಿ ದಾಳಿ: 15 ಲೀ. ಕಳ್ಳ ಭಟ್ಟಿ ಜಪ್ತಿ- ಪ್ರಕರಣ ದಾಖಲು
Team Udayavani, Apr 24, 2020, 1:08 PM IST
ಕಲಬುರಗಿ: ಅಬಕಾರಿ ಇಲಾಖೆಯವರು ದಾಳಿ ನಡೆಸಿ ಕಳ್ಳಭಟ್ಟಿ ಜಪ್ತಿ ಮಾಡಿರುವುದು.
ಕಲಬುರಗಿ: ಕೋವಿಡ್ ವೈರಸ್ ಹರಡದಂತೆ ಮುಂಜಾಗ್ರತೆಗಾಗಿ ಜಿಲ್ಲೆಯಾದ್ಯಂತ ಮದ್ಯ ಉತ್ಪಾದನೆ, ಸಾಗಾಣಿಕೆ ಹಾಗೂ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ಕಲಬುರಗಿ ವಿಭಾಗದ ಅಬಕಾರಿ ಅಧಿಕಾರಿ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ಸಣ್ಣೂರ ತಾಂಡಾದ ಹೊರಗಡೆ ವಿವಿಧ ಹೊಲಗಳಲ್ಲಿ ದಾಳಿ ನಡೆಸಿ ಒಟ್ಟು 350 ಲೀ ಬೆಲ್ಲದ ಕೊಳೆ ಹಾಗೂ 15 ಲೀ. ಕಳ್ಳಭಟ್ಟಿ ಜಪ್ತಿಪಡಿಸಿಕೊಂಡು 3 ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕಲಬುರಗಿ ವಿಭಾಗದ ಅಬಕಾರಿ ಜಂಟಿ ಆಯುಕ್ತರ ಆದೇಶ ಹಾಗೂ ಉಪ ಆಯುಕ್ತರ ನಿರ್ದೇಶನದ ಮೇರೆಗೆ ಭಾಗದ ಅಬಕಾರಿ ಉಪ ಅಧಿಧೀಕ್ಷಕ ಮಹ್ಮದ್ ಇಸ್ಮಾಯಿಲ್ ಇನಾಮದಾರ ನೇತೃತ್ವದಲ್ಲಿ ಡಿಸಿಇಐಬಿ ವಲಯ ನಂ.1ರ ಅಬಕಾರಿ ನಿರೀಕ್ಷಕ ಹಾಗೂ ಉಪ ವಿಭಾಗದ ಸಿಬ್ಬಂದಿಯೊಂದಿಗೆ ದಾಳಿ ನಡೆಸಲಾಗಿದೆ.
ಕಲಬುರಗಿ ಉಪವಿಭಾಗದ ಅಬಕಾರಿ ಉಪ ನಿರೀಕ್ಷಕ ಸಂತೋಷ ಕುಮಾರ ಹಾಗೂ ಕಲಬುರಗಿ ವಲಯ ನಂ.1ರ ಅಬಕಾರಿ ಉಪ ನಿರೀಕ್ಷಕ ದಾವಲಸಾಬ ಹಾಗೂ ಡಿಸಿಇಐಬಿ ಅಬಕಾರಿ ನಿರೀಕ್ಷಕ ಪಂಡಿತ ಅವರು ತಲಾ ಒಂದು ಸೇರಿದಂತೆ ಒಟ್ಟು ಮೂರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. ಜಪ್ತಿ ಮಾಡಲಾದ ಒಟ್ಟು ಮದ್ಯದ ಅಂದಾಜು ಮೌಲ್ಯ 8000 ರೂ. ಇರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಸ್ಟೇಟ್ಸ್ ಮ್ಯಾನ್ ಅಲ್ಲ, ಸೇಲ್ಸ್ಮ್ಯಾನ್: ಬಿ.ಕೆ ಹರಿಪ್ರಸಾದ್
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ