ಅನಾನಸ್‌ ವಿಲೇವಾರಿ; ಜಿಲ್ಲಾಧಿಕಾರಿ ವಿಡಿಯೋ ಸಂವಾದ


Team Udayavani, Apr 24, 2020, 1:58 PM IST

24-April-20

ಶಿವಮೊಗ್ಗ: ಅನಾನಸ್‌ ವಿಲೇವಾರಿ ಕುರಿತಂತೆ ಜಿಲ್ಲಾ ಧಿಕಾರಿ ವಿಡಿಯೋ ಸಂವಾದ ನಡೆಸಿದರು.

ಶಿವಮೊಗ್ಗ: ಲಾಕ್‌ಡೌನ್‌ನಿಂದಾಗಿ ಸಮಸ್ಯೆಗೆ ಸಿಲುಕಿರುವ ಜಿಲ್ಲೆಯ ಅನಾನಸ್‌ ಬೆಳೆಗಾರರ ಹಿತ ಕಾಪಾಡುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಅವರು ಗುರುವಾರ ಮೈಸೂರಿನ ಸಿಎಫ್‌ ಟಿಆರ್‌ಐ (ಸೆಂಟ್ರಲ್‌ ಫುಡ್‌ ಟೆಕ್ನಾಲಜಿ ರೀಸರ್ಚ್‌ ಇನ್ಸ್ಟಿಟ್ಯೂಟ್‌) ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

ಜಿಲ್ಲೆಯಲ್ಲಿ ಅಂದಾಜು 65 ಸಾವಿರ ಟನ್‌ ಅನಾನಸು ಬೆಳೆದಿದ್ದು, ಕಳೆದ 20ದಿನಗಳಲ್ಲಿ ವಿವಿಧ ಮೂಲಗಳನ್ನು ಬಳಸಿಕೊಂಡು ಅನಾನಸು ಮಾರುಕಟ್ಟೆಗೆ ವಿಲೇವಾರಿ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಬೆಳೆಯಲಾಗುವ ರಾಜಾ ತಳಿಯ ಅನಾನಸಿಗೆ ದೆಹಲಿಯ ಜ್ಯೂಸ್‌ ಕಂಪೆನಿಗಳು ಪ್ರಮುಖ ಮಾರುಕಟ್ಟೆಯಾಗಿದ್ದು, ಲಾಕ್‌ ಡೌನ್‌ನಿಂದ ಸಾಗಾಟ ತೊಂದರೆಯಾಗಿದೆ. ಪ್ರಸ್ತುತ ದಿನನಿತ್ಯ 125ರಿಂದ 150 ಟನ್‌ ಮಾತ್ರ ಮಾರುಕಟ್ಟೆಗೆ ಸರಬರಾಜು ಮಾಡಲು ಸಾಧ್ಯವಾಗುತ್ತಿದೆ. ಪ್ರತಿನಿತ್ಯ 250ರಿಂದ 300ಟನ್‌ ಇಳುವರಿ ಬರುತ್ತಿದೆ ಎಂದು ಅವರು ಹೇಳಿದರು.

ಈ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಸ್ವ-ಸಹಾಯ ಸಂಘಗಳನ್ನು ಬಳಸಿಕೊಂಡು ಮಾರುಕಟ್ಟೆ ಕಲ್ಪಿಸಲು, ವಿವಿಧ ಆಹಾರ ಸಂಸ್ಕರಣಾ ತಂತ್ರಗಳನ್ನು ಬಳಸಿಕೊಂಡು ಅನಾನಸು ಉತ್ಪನ್ನಗಳನ್ನು ದಾಸ್ತಾನು ಇರಿಸುವುದು ಸೇರಿದಂತೆ ಬೆಳೆಗಾರರಿಗೆ ಹೊಸ ಮಾರುಕಟ್ಟೆ ಅವಕಾಶಗಳ ಬಗ್ಗೆ ಸಿಎಫ್‌ಟಿಆರ್‌ಐ ತಜ್ಞರಿಂದ ಮಾರ್ಗದರ್ಶನ ಬಯಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಕೋಲ್ಡ್‌ ಸ್ಟೋರೇಜ್‌ ಬಳಸಿಕೊಂಡು ಅನಾನಸು ಗರಿಷ್ಟ ಒಂದು ವಾರಗಳ ಕಾಲ ಮಾತ್ರ ದಾಸ್ತಾನು ಇರಿಸಲು ಸಾಧ್ಯವಿದೆ. ಅದನ್ನು ಪಲ್ಫ್ ಆಗಿ ಪರಿವರ್ತಿಸಿದರೆ ಗರಿಷ್ಠ ಎರಡು ವರ್ಷಗಳ ಕಾಲ ಕಾಪಿಡಬಹುದಾಗಿದೆ. ಹುಬ್ಬಳ್ಳಿ ಮತ್ತು ಚಿತ್ತೂರುಗಳಲ್ಲಿ ಅಂತಹ ಸಂಸ್ಕರಣಾ ಉದ್ಯಮಗಳಿದ್ದು, ಅನಾನಸನ್ನು ಪಲ್ಫ್ ಆಗಿ ಪರಿವರ್ತಿಸಿದ ಬಳಿಕ ಹಾಪ್‌ಕಾಮ್ಸ್‌ ಮೂಲಕ ಮಾರುಕಟ್ಟೆ ವ್ಯವಸ್ಥೆ ಮಾಡಬಹುದಾಗಿದೆ ಎಂದು ಸಿಎಫ್‌ಟಿಆರ್‌ಐ ಅಧಿಕಾರಿಗಳು ಸಲಹೆ ನೀಡಿದರು. ಅತ್ಯಂತ ಕಡಿಮೆ ತಂತ್ರಜ್ಞಾನವನ್ನು ಬಳಸಿಕೊಂಡು ಕಡಿಮೆ ವೆಚ್ಚದಲ್ಲಿ ಅನಾನಸು ಸಂಸ್ಕರಣೆಯನ್ನು ಸ್ಥಳೀಯವಾಗಿ ಮಾಡಲು ಸಾಧ್ಯವಿದೆ. ಸ್ವ-ಸಹಾಯ ಗುಂಪುಗಳ ಸಹಯೋಗದಲ್ಲಿ ಅಂತಹ ಚಟುವಟಿಕೆ ನಡೆಸಲು, ರೈತರಿಗೆ, ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಸೂಕ್ತ ತರಬೇತಿ ನೀಡಲು ಸಂಸ್ಥೆ ಸಿದ್ಧವಿದೆ. ಲಾಕ್‌ ಡೌನ್‌ ಮುಗಿದ ಬಳಿಕ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬಹುದಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಸ್ಥಳೀಯವಾಗಿ ಮಾರುಕಟ್ಟೆಯನ್ನು ವಿಸ್ತರಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಸಿಎಫ್‌ ಟಿಆರ್‌ಐ ಎಲ್ಲಾ ತಾಂತ್ರಿಕ ನೆರವು ನೀಡಲು ಸಿದ್ಧವಿದೆ ಎಂದು ಸಂಸ್ಥೆಯ ನಿರ್ದೇಶಕ ಡಾ| ರಾಘವ ರಾವ್‌ ಹೇಳಿದರು. ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಯೋಗೀಶ್‌, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕಿರಣ್‌ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.