ಮೇ 3ರವರೆಗೆ ಎಂಜಿ ರಸ್ತೆ ಮಾರುಕಟ್ಟೆ ಬಂದ್‌


Team Udayavani, Apr 24, 2020, 5:54 PM IST

ಮೇ 3ರವರೆಗೆ ಎಂಜಿ ರಸ್ತೆ ಮಾರುಕಟ್ಟೆ ಬಂದ್‌

ಮೈಸೂರು:  ಕೋವಿಡ್ 19 ಸೋಂಕು ಹರಡುವುದನ್ನು ತಪ್ಪಿಸಲು ಮುಂಜಾಗ್ರತಾ ಕ್ರಮವಾಗಿ ನಗರದ ಎಂ.ಜಿ. ರಸ್ತೆಯಲ್ಲಿರುವ ಮಾರುಕಟ್ಟೆಯನ್ನು ಲಾಕ್‌ಡೌನ್‌ ಮುಗಿಯುವವರೆಗೆ ಬಂದ್‌ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ ಹೇಳಿದರು.

ಜಿಲ್ಲಾ ಪಂಚಾಯಿತಿಯ ಡಿ.ದೇವರಾಜ ಅರಸ್‌ ಸಭಾಂಗಣದಲ್ಲಿ ಕೋವಿಡ್‌-19 ಸಂಬಂಧಪಟ್ಟಂತೆ ನಗರಪಾಲಿಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಕರೆದಿದ್ದ ಸಭೆಯಲ್ಲಿ ಮಾತನಾಡಿದರು.

ಪರ್ಯಾಯ ವ್ಯವಸ್ಥೆ ಮಾಡಿ: ಶಾಸಕ ಎಸ್‌.ಎ. ರಾಮದಾಸ್‌ ಮಾತನಾಡಿ, ನಿತ್ಯ ನೂರಾರು ಮಂದಿ ಎಂ.ಜಿ. ರಸ್ತೆಯಲ್ಲಿ ಸೇರುತ್ತಿದ್ದಾರೆ. ಇದರಿಂದ ಕೋವಿಡ್‌-19 ಸೋಂಕು ಹರಡುವ ಆತಂಕವಿದೆ. ಕೂಡಲೇ ಪರ್ಯಾಯ ವ್ಯವಸ್ಥೆ ಮಾಡಿ ಎಂದು ತಿಳಿಸಿದರು. ಇದಕ್ಕೆ ಶಾಸಕ ಎಲ್.ನಾಗೇಂದ್ರ ಅವರು ಧ್ವನಿಗೂಡಿಸಿದರು. ಎಂ.ಜಿ. ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರವೇ ಇಲ್ಲವಾಗಿದೆ. ಹೆಚ್ಚು ಜನ ಇಲ್ಲಿ ಸೇರುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಬಂದ್‌ ಮಾಡಿ: ಎಲ್ಲವನ್ನೂ ಕೇಳಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಮಾರುಕಟ್ಟೆ ಬಂದ್‌ ಮಾಡುವಂತೆ ಸೂಚಿಸಿದರು. ದಸರಾ ವಸ್ತು ಪ್ರದರ್ಶನ ಪ್ರದೇಶಕ್ಕೆ ಮಾರುಕಟ್ಟೆಯನ್ನು ಸ್ಥಳಾಂತರಿಸುವಂತೆ ತಿಳಿಸಿದರು. ಇದೇ ವೇಳೆ ದೇವರಾಜ ಮಾರುಕಟ್ಟೆಯ ಪಕ್ಕದಲ್ಲಿರುವ ಬಾಳೆಮಂಡಿಯಲ್ಲೂ ಕಿರಿದಾದ ಜಾಗದಲ್ಲೇ ಸಾಕಷ್ಟು ಜನ ಸೇರುತ್ತಿದ್ದಾರೆ. ಹಾಗಾಗಿ ಬನ್ನಿಮಂಟಪಕ್ಕೆ ಸ್ಥಳಾಂತರಿಸುವಂತೆ ಶಾಸಕ ರಾಮದಾಸ್‌ ತಿಳಿಸಿದರು. ಇದಕ್ಕೆ ಡೀಸಿ ಹಾಗೂ ಪಾಲಿಕೆ ಆಯುಕ್ತರು ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಸ್ಥಾಪನೆ ಆಗಿರುವ ಸೋಡಿಯಂ ಹೈಪೋ ಕ್ಲೋರೈಡ್‌ ಟನಲ್‌ ತೆರವುಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಹಾಲಿನ ಪೂರೈಕೆಗೆ ಕ್ರಮ: ಇದೇ ವೇಳೆ ಶಾಸಕರಾದ ಜಿ.ಟಿ.ದೇವೇಗೌಡ, ಎಸ್‌.ಎ.ರಾಮದಾಸ್‌, ಎಲ್ .ನಾಗೇಂದ್ರ ತಮ್ಮ ತಮ್ಮ ಕ್ಷೇತ್ರಕ್ಕೆ ಹಾಲಿನ ಸರಬರಾಜು ಸರಿಯಾಗಿ ಪೂರೈಕೆ ಆಗುತ್ತಿಲ್ಲ ಎಂದು ದೂರಿದರು. ಈ ಸಂದರ್ಭದಲ್ಲಿ ಮಾತನಾಡಿದ ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ, ನಿತ್ಯ 30 ಸಾವಿರ ಹಾಲನ್ನು ವಿತರಿಸಲಾಗುತ್ತಿದೆ. ಕೆಲವು ಕಡೆ ಸಮಸ್ಯೆ ಆಗಿರಬಹುದು. ದಿನ ಬಿಟ್ಟು ದಿನ ಹಾಲು ಸರಬರಾಜು ಮಾಡುವ ಮೂಲಕ ಎಲ್ಲಾ ಬಡಾವಣೆಗಳಿಗೂ ತಲುಪುವಂತೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ರಿಂಗ್‌ ರಸ್ತೆ ಬಳಿ ಅಶುಚಿತ್ವ ತಾಂಡವವಾಡುತ್ತಿದೆ. ಕೆಲವರು ಕಟ್ಟಡ ನಿರ್ಮಾಣಕ್ಕೆ ಸಂಬಂಧಪಟ್ಟ ಇಟ್ಟಿಗೆ ಚೂರು, ಮರಳು, ಕಸವನ್ನು ಎಸೆದು ಹೋಗುತ್ತಿದ್ದಾರೆ. ಇದೇ ರಸ್ತೆಯಲ್ಲಿ ವಿದೇಶಿ ಪ್ರವಾಸಿಗರು, ಗಣ್ಯರು ಓಡಾಡುತ್ತಿರುತ್ತಾರೆ. ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಿ ಎಂದರು. ಉಸ್ತುವಾರಿ ಸಚಿವ ಸೋಮಶೇಖರ್‌ ಮಾತನಾಡಿ, ಕಟ್ಟಡ ಸಾಮಗ್ರಿ ಎಸೆಯುವ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಿ. ವಾಹನ ವಶಪಡಿಸಿಕೊಂಡು ಮಾಲೀಕರನ್ನು ಜೈಲಿಗೆ ಕಳುಹಿಸಿ ಎಂದು ಸೂಚಿಸಿದರು.  ಸಭೆಯಲ್ಲಿ ಜಿಲ್ಲಾಧಿಕಾರಿ ಅಭಿರಾಮ್‌ ಜಿ. ಶಂಕರ್‌ ಸೇರಿದಂತೆ ಇತರ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.