ತಂಬಾಕು, ಸಿಗರೇಟ್ ಕದ್ದು ಮುಚ್ಚಿ ಮಾರಾಟ
Team Udayavani, Apr 24, 2020, 6:40 PM IST
ತುಮಕೂರು: ಸಾರ್ವಜನಿಕ ಸ್ಥಳದಲ್ಲಿ ಉಗುಳುವುದು, ಬೀಡಿ ಸಿಗರೇಟ್ ಸೇದುವುದು ಜಿಲ್ಲೆಯಲ್ಲಿ ಸಂಪೂರ್ಣ ನಿಷೇಧವಿದೆ. ಆದರೂ ನಗರವೂ ಸೇರಿದಂತೆ ಜಿಲ್ಲೆಯ ಎಲ್ಲಾ ಕಡೆ ಬೀಡಿ, ಸಿಗರೇಟ್ ತಂಬಾಕು ಉತ್ಪನ್ನಗಳ ಮಾರಾಟ ನಡೆದಿದೆ.
ಕಲ್ಪತರು ನಾಡಿನಲ್ಲಿ ರಕ್ಕಸ ಕೋವಿಡ್ 19 ವ್ಯಾಪಿಸದಂತೆ ಜಿಲ್ಲಾಡಳಿತ ಹಲವು ಬಿಗಿ ಕ್ರಮ ಕೈಗೊಂಡ ಪರಿಣಾಮ ಕಳೆದ 25 ದಿನಗಳಿಂದ ಯಾವುದೇ ಹೊಸ ಕೋವಿಡ್ 19 ಪ್ರಕರಣ ಪತ್ತೆಯಾಗಿಲ್ಲ. ಇದನ್ನು ತಡೆಯಲು ಜಿಲ್ಲಾಡಳಿತ ಹಲವು ಮಾರ್ಗೋಪಾಯ ಕಂಡು ಕೊಂಡಿದ್ದು, ರೋಗ ಹರಡುವ ಪ್ರಮುಖ ಉತ್ಪನ್ನಗಳಾದ ತಂಬಾಕು ಸೇವನೆ ಮಾರಾಟ ವನ್ನು ಸಂಪೂರ್ಣ ನಿಷೇಧ ಮಾಡಿದೆ. ಆದರೂ ಜಿಲ್ಲೆಯಲ್ಲಿ ಸಿಗ ರೇಟ್ ಮತ್ತು ತಂಬಾಕು ಉತ್ಪನ್ನಗಳಮಾರಾಟ ಇನ್ನೂ ನಿಂತಿಲ್ಲ. ಸಾಂಕ್ರಾಮಿಕ ರೋಗಗಳಾದ ಕೋವಿಡ್- 19, ಕ್ಷಯರೋಗ, ನ್ಯುಮೋನಿಯ, ವೈರಸ್ ಒಬ್ಬರಿಂದ ಮತ್ತೂಬ್ಬರಿಗೆ ಹರಡುವುದರಿಂದಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಇದರ ನಿಯಂತ್ರಣಕ್ಕಾಗಿ ಮುಂದಿನ ಆದೇಶದವರೆಗೂ ಈ ಉತ್ಪನ್ನಗಳನ್ನು ತುಮಕೂರು ಜಿಲ್ಲಾದ್ಯಂತ ಅಂಗಡಿಗಳಲ್ಲಿ ಮಾರಾಟ ಮಾಡುವುದು ಮತ್ತು ಬಳಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ಆದೇಶ ಹೊರ ಡಿಸಿದ್ದರೂ ಕೆಲವು ಕಿಡಿಗೇಡಿಗಳು ಇದಕ್ಕೆ ಕ್ಯಾರೇ ಎನ್ನದೇ ಚಾಳಿ ಮುಂದುವರಿಸಿದ್ದಾರೆ.
ಜನರು ತಮ್ಮ ಆರೋಗ್ಯದ ಕಡೆ ಗಮನ ನೀಡಬೇಕಾದ್ದು ಪ್ರತಿಯೊಬ್ಬರ ನಾಗರೀಕರ ಕರ್ತವ್ಯವಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಉಗುಳಬಾರದು ಎನ್ನುವ ನಿಯಮ ಇದೆ. ಇದನ್ನು ಎಲ್ಲರೂ ಪಾಲಿಸಲೇಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು. ಧೂಮಪಾನ ಮಾಡುವುದು ಕಂಡು ಬಂದರೆ ಇನ್ನು ಮುಂದೆ ಕಾನೂನು ಕ್ರಮ ಖಚಿತ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.
ಬೀಡಿ, ಸಿಗರೇಟ್ ಸೇವನೆಯಿಂದ ಕೊರೊನಾ ಸೇರಿದಂತೆ ಹಲವು ಸಾಂಕ್ರಾಮಿಕ ರೋಗ ಹರಡುವುದರಿಂದ ಜಿಲ್ಲೆ ಯಲ್ಲಿ ಇವುಗಳ ಮಾರಾಟ ನಿಷೇಧಿಸಿದೆ. ಅಂಗಡಿಗಳಲ್ಲಿ ಮಾರಾಟ ಮಾಡುವುದು ಕಂಡು ಬಂದರೆ ಸಾಂಕ್ರಾಮಿಕ ರೋಗಗಳ ಕಾಯ್ದೆ 1897ರ ವಿಪತ್ತು ನಿರ್ವಹಣಾ ಕಾಯ್ದೆ 2005 ಐಪಿಸಿ ಕಲಂ 188, 268, 269 ಮತ್ತು 270 ಸಿಆರ್ಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿ ಸಂಬಂಧಿಸಿದವರ ಮೇಲೆ ಕ್ರಮ ಜರುಗಿಸಲಾಗುವುದು. – ಡಾ.ಕೆ.ರಾಕೇಶ್ಕುಮಾರ್, ಜಿಲ್ಲಾಧಿಕಾರಿ
–ಚಿ.ನಿ.ಪುರುಷೋತ್ತಮ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ