“ಇ-ಸಾರ್ವಜನಿಕ ಗ್ರಂಥಾಲಯ’ದೆಡೆಗೆ ಓದುಗರ ಚಿತ್ತ
15 ಸಾವಿರಕ್ಕೂ ಹೆಚ್ಚು ಮಂದಿಯಿಂದ ಆ್ಯಪ್ ಡೌನ್ಲೋಡ್
Team Udayavani, Apr 25, 2020, 6:39 AM IST
ಸಾಂದರ್ಭಿಕ ಚಿತ್ರ..
ಮಂಗಳೂರು: ದೇಶದಲ್ಲೇ ಮೊದಲ ಬಾರಿಗೆ ರಾಜ್ಯ ಗ್ರಂಥಾಲಯ ಇಲಾಖೆ ಸಿದ್ಧಪಡಿಸಿದ ಇ-ಪುಸ್ತಕ ಒದಗಿಸುವ ಇ-ಸಾರ್ವಜನಿಕ ಗ್ರಂಥಾಲಯಕ್ಕೆ ಒಂದೂವರೆ ತಿಂಗಳಲ್ಲೇ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಲಾಕ್ಡೌನ್ ಅವಧಿಯಲ್ಲಿ 15 ಸಾವಿರಕ್ಕೂ ಅಧಿಕ ಮಂದಿ ಈ ಆ್ಯಪ್ ಡೌನ್ಲೋಡ್ ಮಾಡಿಕೊಂಡಿದ್ದಾರೆ.
ಸ್ಮಾರ್ಟ್ಫೋನ್ನಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗ್ರಂಥಾಲಯ ಇಲಾಖೆಫೆ. 26ರಂದು ಇ-ಪುಸ್ತಕ ಓದುವ ಯೋಜನೆಗೆ ಚಾಲನೆ ನೀಡಿತ್ತು. ಇದಕ್ಕಾಗಿ ಕರ್ನಾಟಕ ಸರಕಾರದ ಲೋಗೋ ಹೊಂದಿರುವ ಇ-ಸಾರ್ವಜನಿಕ ಗ್ರಂಥಾಲಯ ಎಂಬ ಆ್ಯಪ್ನ್ನು ಸಿದ್ಧಪಡಿಸಲಾಗಿತ್ತು. ಮೊದಲ ಒಂದೂವರೆ ತಿಂಗಳ ಅವಧಿಯಲ್ಲಿ ಒಟ್ಟು 16,500ಕ್ಕೂ ಹೆಚ್ಚು ಮಂದಿ ಈ ಆ್ಯಪ್ನ್ನು ಡೌನ್ಲೋಡ್ ಮಾಡಿಕೊಂಡಿದ್ದಾರೆ. ಅದರಲ್ಲೂ ಲಾಕ್ಡೌನ್ ಆರಂಭವಾದ ಮಾ. 22ರ ಅನಂತರ 15 ಸಾವಿರಕ್ಕೂ ಹೆಚ್ಚು ಮಂದಿ ಡೌನ್ಲೋಡ್ ಮಾಡಿಕೊಂಡಿದ್ದಾರೆ.
ರಜೆ ಸದುಪಯೋಗಕ್ಕೆ ಇ- ಪುಸ್ತಕ
ಲಾಕ್ಡೌನ್ ಅವಧಿಯಲ್ಲಿ ಕೆಲವರಿಗೆ ಮನೆಯಲ್ಲೇ ಕೆಲಸ ನಿರ್ವಹಿಸಲು ಅವಕಾಶ ವಿದ್ದರೆ, ಇನ್ನು ಕೆಲವರಿಗೆ ರಜೆ ನೀಡಲಾಗಿದೆ. ಇ-ಸಾರ್ವಜನಿಕ ಗ್ರಂಥಾಲಯ ಆ್ಯಪ್ ಡೌನ್ಲೋಡ್ ಮಾಡಿಕೊಂಡು ಕೆಲವರು ಪುಸ್ತಕ ಗಳನ್ನು ಓದುತ್ತಿದ್ದಾರೆ. ಇ-ಸಾರ್ವಜನಿಕ ಗ್ರಂಥಾಲಯ ಆ್ಯಪ್ನಲ್ಲಿ ಬುದ್ಧಿ ಮತ್ತೆಯನ್ನು ಪ್ರಚೋದಿಸುವ ಎಲ್ಲ ರೀತಿಯ ಪುಸ್ತಕಗಳು ಲಭ್ಯವಿವೆ. ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳು, ಸ್ಪರ್ಧಾತ್ಕಕ ಪರೀಕ್ಷೆಗಳಿಗೆ ತಯಾರಾಗುತ್ತಿರುವವರಿಗೆ ಪಠ್ಯ, ಕನ್ನಡ, ಇಂಗ್ಲಿಷ್ ಸಹಿತ ಹಲವು ಭಾಷೆಗಳ ಕ್ಲಾಸಿಕ್ ಕಾದಂಬರಿಗಳು- ಹೀಗೆ ಎಲ್ಲ ಓದುಗರಿಗೆ ಬೇಕಾದ ಇ-ಪುಸ್ತಕಗಳು ಈ ಆ್ಯಪ್ನಲ್ಲಿ ಇವೆ.
ಆ್ಯಪ್ ಬಳಕೆ ಹೆಚ್ಚುತ್ತಿದೆ
ಇ-ಸಾರ್ವಜನಿಕ ಗ್ರಂಥಾಲಯ ಆ್ಯಪ್ ಪರಿಚಯಿಸಿದ ಮೇಲೆ ಒಂದೂವರೆ ತಿಂಗಳಿನಲ್ಲಿ ಆ್ಯಪ್ ಡೌನ್ಲೋಡ್ ಮಾಡಿಕೊಂಡವರ ಸಂಖ್ಯೆ ಹೆಚ್ಚಿದೆ. ಲಾಕ್ಡೌನ್ ಅವಧಿಯಲ್ಲಿ 15 ಸಾವಿರಕ್ಕೂ ಹೆಚ್ಚು ಮಂದಿ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಈ ಆ್ಯಪ್ ಬಳಕೆ ಹೆಚ್ಚುತ್ತಿರುವುದನ್ನು ನೋಡಿದಾಗ ಇದು ಕನ್ನಡ ಪುಸ್ತಕೋದ್ಯಮಕ್ಕೂ ಹೊಸದಾದ ಆಲೋಚನೆ ಮಾಡಲು ಸದವಕಾಶ ಎನ್ನುವುದು ನನ್ನ ಭಾವನೆ.
-ಎಸ್. ಸುರೇಶ್ಕುಮಾರ್
ಶಿಕ್ಷಣ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ