ಪೊಲೀಸರ ಗೋಳು ಕೇಳೋರ್ಯಾರು?

ಮನೆಗೆ ತೆರಳಿದರೆ ವೈರಸ್‌ ಜತೆಗೇ ಬಂದೀತೆಂಬ ಭಯ; ರಜೆ ಇದ್ದರೂ ಠಾಣೆಯಲ್ಲೇ ವಾಸ್ತವ್ಯ

Team Udayavani, Apr 25, 2020, 8:43 AM IST

ಪೊಲೀಸರ ಗೋಳು ಕೇಳೋರ್ಯಾರು?

ಸಾಂದರ್ಭಿಕ ಚಿತ್ರ

ಬೆಂಗಳೂರು:
ಪ್ರಸಂಗ-1:
ಪಾದರಾಯನಪುರದಲ್ಲಿ ಕಳೆದೊಂದು ವಾರದಿಂದ ಕೆಲಸ ಮಾಡುತ್ತಿದ್ದೇವೆ. ಗಲಾಟೆ ವೇಳೆ ಕೆಲವರನ್ನು ಹಿಡಿದು ಎಳೆದೊಯ್ದಿದ್ದೇವೆ. ಮನೆಯಲ್ಲಿ ಎರಡೂವರೆ ವರ್ಷದ ಮಗಳಿರುವ ಕಾರಣ ನಾಲ್ಕು ದಿನಗಳಿಂದ ಮನೆಗೆ ಹೋಗಿಲ್ಲ. ಠಾಣೆ, ಸಮುದಾಯ ಭವನದಲ್ಲೇ ಸ್ನಾನ, ನಿದ್ರೆ. ಇನ್ನು ರಜೆ ಸಿಕ್ಕರೂ ಊರಿಗೆ ಹೋಗುವಂತಿಲ್ಲ. ಊರಿನಲ್ಲಿರುವ ತಂದೆ, ತಾಯಿಗೆ ಫೋನ್‌ನಲ್ಲಿ ಸಮಾಧಾನ ಹೇಳುತ್ತಿದ್ದೇವೆ. ಒಂದು ರೀತಿ ನಾನೂ ಕ್ವಾರಂಟೈನ್‌ನಲ್ಲಿದ್ದೇನೆ.  – ಕಾನ್‌ ಸ್ಟೇಬಲ್‌ ತಿಮ್ಮಪ್ಪ.

ಪ್ರಸಂಗ-2
ಬೆಳಗ್ಗೆ 7 ಗಂಟೆಗೆ ಕರ್ತವ್ಯಕ್ಕೆ ಹಾಜರಾಗಿದ್ದೇನೆ. ಮಧ್ಯಾಹ್ನ ಮೂರು ಅಥವಾ ನಾಲ್ಕು ಗಂಟೆವರೆಗೂ ಕೆಲಸ ಮಾಡಬೇಕು. ಈ ವೇಳೆ ನೂರಾರು ವಾಹನಗಳ ತಪಾಸಣೆ, ಜತೆಗೆ ಸೋಂಕಿತರ ಪತ್ತೆಗಾಗಿ ಮನೆಗಳಿಗೂ ಹೋಗುತ್ತೇವೆ. ಸೋಂಕಿತರ ಭೀತಿಯಿಂದ ಮನೆಗೆ ಹೋಗಲು ಭಯ. ಮನೆಗೆ ಹೋಗುತ್ತಿದ್ದಂತೆ ಬಿಸಿ ನೀರಿನಲ್ಲಿ ಸ್ನಾನ, ಬಟ್ಟೆಗಳನ್ನು ತೊಳೆದು ಹಾಕುತ್ತೇವೆ…

ಇದೇ ನಮ್ಮ ಪ್ರಾಥಮಿಕ ಚಿಕಿತ್ಸೆ..
– ಕೇಂದ್ರ ವಿಭಾಗದ ಠಾಣೆಯೊಂದರ ಹೆಡ್‌ ಕಾನ್‌ ಸ್ಟೇಬಲ್‌ ನರಸಿಂಹ ಇದು ಕೇವಲ ಒಂದಿಬ್ಬರು ಪೊಲೀಸ್‌ ಸಿಬ್ಬಂದಿ ಸಮಸ್ಯೆಗಳಲ್ಲ. ನಗರದಲ್ಲಿರುವ ಬಹುತೇಕ ಸಿಬ್ಬಂದಿ, ಅಧಿಕಾರಿಗಳ ಪರಿಸ್ಥಿತಿ. ಒಂದೂವರೆ ತಿಂಗಳಿಂದ ನಗರದ ಪೊಲೀಸರು ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ನಿರಂತರವಾಗಿ ಸೋಂಕಿತರ ಜತೆ ಒಡನಾಟ ಹೊಂದಿದ್ದಾರೆ. ಶಂಕಿತರ ಮನೆಗಳಿಗೆ ಭೇಟಿ ನೀಡುವುದು, ಕಾನೂನು ಸುವ್ಯವಸ್ಥೆ ಕಾಪಾಡುವುದು, ವಾಹನಗಳ ತಪಾಸಣೆ ಮಾಡುತ್ತಿದ್ದಾರೆ. ಹೀಗಾಗಿ ಇಡೀ ನಗರದಲ್ಲಿ ಪೊಲೀಸ್‌ ಇಲಾಖೆಯಲ್ಲಿ ಆತಂಕ ಎದುರಾಗಿದ್ದು,
ಭಯದಲ್ಲೇ ಕೆಲಸ ಮಾಡುತ್ತಿದ್ದಾರೆ. ಈ ಸಂಬಂಧ ನಗರದ ಪೊಲೀಸ್‌ ಆಯುಕ್ತರು ಪದೇ ಪದೆ ಕೈತೊಳೆಯಬೇಕು. ವಾರದ ರಜೆ ಕೊಡಬೇಕು ಎಂದು ಸೂಚಿಸಿದ್ದಾರೆ. ಅದರಂತೆ ಪೊಲೀಸ್‌ ಸಿಬ್ಬಂದಿಗೆ ವಾರದ ರಜೆ ಮಾತ್ರವಲ್ಲ. ಠಾಣೆಯ ಶೇ.30ರಷ್ಟು ಸಿಬ್ಬಂದಿಗೆ ಒಂದು ವಾರ ರಜೆ ಕೊಡಲಾಗಿದೆ. ಠಾಣಾ ಮಟ್ಟದಲ್ಲಿ ವೈದ್ಯಕೀಯ ತಪಾಸಣೆ ನಡೆಯುತ್ತಿದೆ ಎಂದು ಹಿರಿಯ
ಅಧಿಕಾರಿಯೊಬ್ಬರು ಹೇಳಿದರು

ಮನೆ, ಸಂಬಂಧಿಕರಲ್ಲಿ ಆತಂಕ: ಇತ್ತೀಚೆಗೆ ದೂರು ನೀಡಲು ಬರುವ ಸಾರ್ವಜನಿಕರು ಕೂಡ ನಮ್ಮನ್ನು ಅನುಮಾನದಿಂದ ನೋಡುವಂತಾಗಿದೆ. ಅಲ್ಲದೆ, ಮನೆಗೆ ಹೋದಾಗಲೂ ಪತ್ನಿ, ತಂದೆ, ತಾಯಿ, ಸಂಬಂಧಿಕರು ಆತಂಕದಿಂದಲೇ ಬಾಗಿಲು ತೆರೆಯುತ್ತಾರೆ. ಮನೆಯೊಳಗೆ ಕಾಲಿಡುತ್ತಿದ್ದಂತೆ ನೇರವಾಗಿ ಸ್ನಾನ ಮಾಡಿಕೊಂಡು, ಬಟ್ಟೆಯನ್ನು ಬಿಸಿ ನೀರಿನಲ್ಲಿ
ತೊಳೆಯುವಂತೆ ಸೂಚಿಸುತ್ತಾರೆ. ಇನ್ನು ಊರಿನಲ್ಲಿರುವ ಪತ್ನಿ ಹಾಗೂ ನಮ್ಮ ಸಂಬಂಧಿಕರು ನಿತ್ಯ ಕರೆ ಮಾಡಿ ಆರೋಗ್ಯದ ಬಗ್ಗೆ ವಿಚಾರಿಸುತ್ತಾರೆ. ಎಲ್ಲರಿಗೂ ಧೈರ್ಯ ಹೇಳುವುದೇ
ದೊಡ್ಡ ಕೆಲಸವಾಗಿದೆ. ಒಂದು ವಾರ ರಜೆ ಇದ್ದರೂ ಊರಿಗೆ ಹೋಗುವಂತಿಲ್ಲ. ಕೆಲ ಊರುಗಳಲ್ಲಿ ಸ್ವಯಂ ದಿಗ್ಬಂಧನ ಹಾಕಿದ್ದಾರೆ. ಹೊರಗಿನವರ ಪ್ರವೇಶಕ್ಕೆ ಅವಕಾಶವಿಲ್ಲ. ಬೇರೆಯವರು ಬಂದರೂ ಪೊಲೀಸರು ಮಾತ್ರ ಊರಿನೊಳಗೆ ಬರುವುದು ಬೇಡ. ಸೇರಿಸುವುದು ಬೇಡ ಎಂದು ನಿರ್ಧರಿಸಿದ್ದಾರೆ ಎಂದು ತುಮಕೂರು ರಸ್ತೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಎಸ್‌ಐ ವಾಸುದೇವ್‌ ಬೇಸರ ವ್ಯಕ್ತಪಡಿಸಿದರು.

ವಸತಿ ಗೃಹಗಳಲ್ಲೇ ಬಂಧಿ
ಪೊಲೀಸ್‌ ವಸತಿ ಗೃಹಗಳಲ್ಲಿ ಪೊಲೀಸ್‌ ಸಮುದಾಯವೇ ಇದ್ದರೂ ಪರಸ್ಪರ ಒಬ್ಬರನ್ನೊಬ್ಬರು ಅನುಮಾನದಿಂದಲೇ ಮಾತಿಗಿಳಿಯುತ್ತೇವೆ. ಸಂಜೆಯಾಗುತ್ತಲೇ ಮನೆ ಬಾಗಿಲು, ಹೊರಗಡೆ ಕುಳಿತು ಹರಟೆ ಹೊಡೆಯುತ್ತಿದ್ದ ಮಹಿಳೆಯರು, ಇದೀಗ ಹೊರಗಡೆ ಬರುತ್ತಿಲ್ಲ. ಮಕ್ಕಳನ್ನು ಹೊರಗಡೆ ಕಳುಹಿಸುತ್ತಿಲ್ಲ. ಹೇಗೊ ಕೆಲಸ ಮುಗಿಸಿಕೊಂಡು ಅಕ್ಕ-ಪಕ್ಕದ ಮನೆ ಮಂದಿ ಜತೆ ಕಾಲ
ಕಳೆಯುತ್ತಿದ್ದೆವು. ಕೋವಿಡ್ ದಿಂದ ಅದು ತಪ್ಪಿದೆ ಎನ್ನುತ್ತಾರೆ ಪಿಎಸ್‌ಐ ರೇಣುಕಾದೇವಿ.

ಕ್ವಾರೆಂಟೈನ್ ಗೆ ಸಿದ್ಧತೆ
ಹೊರಗಡೆ ನಿರಂತರವಾಗಿ ಕೆಲಸ ಮಾಡುತ್ತಿರುವ ಸಿಬ್ಬಂದಿಯ ಪಟ್ಟಿಯನ್ನು ಸಿದ್ಧಪಡಿಸಿ ಆರೋಗ್ಯ ತಪಾಸಣೆ ನಡೆಸಿ, ಅಂತಹವರಿಗೆ ಕನಿಷ್ಠ ಏಳರಿಂದ ಹದಿನಾಲ್ಕು ದಿನ ಕ್ವಾರೆಂಟೈನ್‌ ಮಾಡಲು ಸಿದ್ಧತೆ ನಡೆಸಲಾಗಿತ್ತು. ಆದರೆ, ಪರಿಣಾಮಕಾರಿಯಾಗಿ ಮಾಡಲು ಸಾಧ್ಯವಾಗಲಿಲ್ಲ ಎಂದು ಹಿರಿಯ ಪೊಲೀಸರು ಹೇಳಿದರು.

●ಮೋಹನ್‌ ಭದ್ರಾವತಿ,

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.