ಆರ್‌ಟಿಪಿಎಸ್‌ಗೆ ಹಾರುಬೂದಿ ಚಿಂತೆ

ಸಿಮೆಂಟ್‌ ಕಾರ್ಖಾನೆಗಳಿಗೆ ರೈಲು ರೇಕ್‌ಗಳಲ್ಲಿ ಸಾಗಿಸಲು ಅಧಿಕಾರಿಗಳ ಚಿಂತನೆ

Team Udayavani, Apr 25, 2020, 11:46 AM IST

25-April-05

ರಾಯಚೂರು: ಲಾಕ್‌ಡೌನ್‌ ವಿನಾಯಿತಿಯಲ್ಲಿ ಸರ್ಕಾರ ಸಿಮೆಂಟ್‌ ಉತ್ಪಾದನೆಗೂ ಅವಕಾಶ ನೀಡಿರುವ ಕಾರಣ ಅದಕ್ಕೆ ಬೇಕಾದ ಹಾರುಬೂದಿಯನ್ನು ರೈಲು ರೇಕ್‌ ಗಳ ಮೂಲಕವೇ ಕಳುಹಿಸಲು ಚಿಂತನೆ ನಡೆಸಲಾಗಿದೆ.

ಇಷ್ಟು ದಿನ ಲಾರಿ ಟ್ಯಾಂಕರ್‌ಗಳ ಮೂಲಕ ಹಾರುಬೂದಿ ಸಾಗಿಸಲಾಗುತ್ತಿತ್ತು. ಆದರೆ, ಬಹುತೇಕ ಸಿಮೆಂಟ್‌ ಕಾರ್ಖಾನೆಗಳು ಕಲಬುರಗಿ ಜಿಲ್ಲೆಯಲ್ಲಿದ್ದು, ಅಲ್ಲಿ ಕೋವಿಡ್ ಅಟ್ಟಹಾಸವಿದೆ. 36 ಪಾಸಿಟಿವ್‌ ಪ್ರಕರಣಗಳಿದ್ದರೆ, ನಾಲ್ವರು ಮೃತಪಟ್ಟಿದ್ದಾರೆ. ಹೀಗಾಗಿ ಅಲ್ಲಿಂದ ವಾಹನಗಳ ಓಡಾಟ ಹೆಚ್ಚಾದರೆ ಈವರೆಗೆ ಪಾಸಿಟಿವ್‌ ಪ್ರಕರಣಗಳಿಲ್ಲದ ರಾಯಚೂರು ಜಿಲ್ಲೆಗೂ ಸೋಂಕು ಹರಡುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ. ಹೀಗಾಗಿ ಆರ್‌ಟಿಪಿಎಸ್‌ ಅಧಿಕಾರಿಗಳು ರೈಲ್ವೆ ರೇಕ್‌ಗಳನ್ನು ಕಳುಹಿಸಿದರೆ ಹಾರುಬೂದಿ ಕಳುಹಿಸುವ ಚಿಂತನೆಯಲ್ಲಿದ್ದಾರೆ.

ವಿಲೇವಾರಿಗೆ ಒತ್ತಡ: ಆರ್‌ಟಿಪಿಎಸ್‌ನ ಎಂಟು ಘಟಕಗಳು ಸಕ್ರಿಯವಾಗಿದ್ದು, ಬೂದಿ ಉತ್ಪಾದನೆ ಹೆಚ್ಚಾಗಿದೆ. ಒದ್ದೆ ಬೂದಿಯನ್ನು ಹೊಂಡದಲ್ಲಿ ಸಂಗ್ರಹಿಸುತ್ತಿದ್ದು, ಎರಡು ಹೊಂಡಗಳಲ್ಲಿ 20 ಮಿಲಿಯನ್‌ ಟನ್
ಗಿಂತ ಅಧಿಕ ಬೂದಿ ಸಂಗ್ರಹವಿದೆ. ಆರ್‌ ಟಿಪಿಎಸ್‌ ಆರಂಭದ ವೇಳೆ 565 ಎಕರೆ ಪ್ರದೇಶದಲ್ಲಿ 22 ದಶಲಕ್ಷ ಕ್ಯೂಬಿಕ್‌ ಮೀಟರ್‌ ಸಾಮರ್ಥ್ಯದ ಹೊಂಡ ನಿರ್ಮಿಸಲಾಗಿತ್ತು. ಅದು ಭರ್ತಿಯಾಗುತ್ತಿದ್ದಂತೆ 2002ರಲ್ಲಿ 600 ಎಕರೆ ಪ್ರದೇಶದಲ್ಲಿ 26 ದಶಲಕ್ಷ ಕ್ಯೂಬಿಕ್‌ ಮೀಟರ್‌ ಸಾಮರ್ಥ್ಯದ ಮತ್ತೂಂದು ಹೊಂಡ ನಿರ್ಮಿಸಲಾಗಿದೆ. ಇದು ಕೂಡ ತುಂಬುವ ಹಂತಕ್ಕೆ ಬಂದಿದ್ದು, ಅದರ ಎತ್ತರವನ್ನು 5 ಮೀಟರ್‌ ಎತ್ತರಿಸುವ ಕಾರ್ಯ ನಡೆಯುತ್ತಿದೆ.

ವೈಟಿಪಿಎಸ್‌ ಕೂಡ ಉತ್ಪಾದನೆ ಆರಂಭಿಸಿದೆ. ಅದಕ್ಕೆ ಪ್ರತ್ಯೇಕ ಹೊಂಡ ಇಲ್ಲದ ಕಾರಣ ಅಲ್ಲಿನ ಬೂದಿ ಇಲ್ಲಿಗೇ ರವಾನಿಸುವ ಚಿಂತನೆ ಇದೆ. ಇಲ್ಲಿನ ಒತ್ತಡ ನಿವಾರಣೆಗಾಗಿ ñ ‌ಳಬೂದಿಯನ್ನು ಬ್ರಿಕ್ಸ್‌ ಫ್ಯಾಕ್ಟರಿಗಳಿಗೆ, ಸಿಮೆಂಟ್‌ ಫ್ಯಾಕ್ಟರಿಗಳು, ಸಿಸಿ ರಸ್ತೆ ನಿರ್ಮಾಣ ಕಾರ್ಯಗಳಿಗೆ ನೀಡಲಾಗಿತ್ತು. 500ಕ್ಕೂ ಅಧಿಕ ಲಾರಿಗಳಿಂದ ಸಾಗಿಸಲಾಗುತ್ತಿತ್ತು. ಆದರೆ, ಲಾಕ್‌ ಡೌನ್‌ ಶುರುವಾಗುತ್ತಿದ್ದಂತೆ ಬೂದಿ ಸಾಗಣೆ ನಿಂತಿದೆ. ಈಗ ಆರ್‌ಟಿಪಿಎಸ್‌ನಲ್ಲಿ ನಿತ್ಯ 8 ರೇಕ್‌ ಕಲ್ಲಿದ್ದಿಲು ಉರಿಸಲಾಗುತ್ತಿದೆ. ಇದರಿಂದ ಬೂದಿ ಉತ್ಪಾದನೆ ಹೆಚ್ಚುತ್ತಿದ್ದು, ವಿಲೇವಾರಿ ಕೂಡ ಅನಿವಾರ್ಯವಾಗಿದೆ.

ಸಿಮೆಂಟ್‌ ಕಾರ್ಖಾನೆಗಳು ಇನ್ನೂ ಉತ್ಪಾದನೆ ಆರಂಭಿಸಿಲ್ಲ. ಆದರೂ ಹಾರುಬೂದಿ ಬೇಕಿದ್ದಲ್ಲಿ ರೈಲು ರೇಕ್‌ಗಳ ಮೂಲಕವೇ ಸಾಗಿಸುವ ಚಿಂತನೆ ಇದೆ. ಕಲಬುರಗಿ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್‌ ಹೆಚ್ಚಾಗಿದ್ದು, ವಾಹನ ಓಡಾಟಕ್ಕೆ ಅವಕಾಶ ನೀಡಿದರೆ ಅಪಾಯ ಆಹ್ವಾನಿಸಿದಂತೆ. ಈ ಬಗ್ಗೆ ಜಿಲ್ಲಾಡಳಿತದ ಜತೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು.
ವೇಣುಗೋಪಾಲ
ಕಾರ್ಯನಿರ್ವಾಹಕ ನಿರ್ದೇಶಕ
ಆರ್‌ಟಿಪಿಎಸ್‌

ಸಿದ್ದಯ್ಯಸ್ವಾಮಿ ಕುಕುನೂರು

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.