ಲಾಕ್ಡೌನ್ ಸಡಿಲಿಕೆ ಸರಿಯಲ್ಲ
ಆರೋಗ್ಯ ಸಮಸ್ಯೆ ಲಘುವಾಗಿ ಪರಿಗಣಿಸದಿರಿ: ಕುಮಾರಸ್ವಾಮಿ
Team Udayavani, Apr 25, 2020, 12:53 PM IST
ಕೆಆರ್ಎಸ್ ವ್ಯಾಪ್ತಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅಕ್ಕಿ, ತರಕಾರಿ ವಿತರಿಸಿದರು.
ಶ್ರೀರಂಗಪಟ್ಟಣ: ಲಾಕ್ಡೌನ್ ಸಡಿಲಿಕೆ ವಿಚಾರದಲ್ಲಿ ಸರ್ಕಾರ ಜನಸಾಮಾನ್ಯರ ಪ್ರಾಣದ ಜೊತೆ ಚಲ್ಲಾಟವಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.
ತಾಲೂಕಿನ ಕೆಆರ್ಎಸ್ನಲ್ಲಿ ಬಡವರಿಗೆ ದಿನಸಿ ಹಾಗೂ ತರಕಾರಿ ವಿತರಿಸಿ ಮಾತನಾಡಿದ ಅವರು, ಆರೋಗ್ಯದ ಸಮಸ್ಯೆಯನ್ನು ಸರ್ಕಾರ ಲಘುವಾಗಿ ತೊಗೆದುಕೊಳ್ಳದೆ ಮುಂಜಾಗ್ರತೆ ವಹಿಸುವುದು ಅತ್ಯಗತ್ಯ. ಇದೊಂದು ಸಾಂಕ್ರಾಮಿಕ ಸೋಂಕು ಎಂದು ಹೇಳಿದರು.
ರಾಮನಗರಕ್ಕೆ ಪಾದರಾಯನಪುರ ಆರೋಪಿಗಳ ಶಿಫ್ಟ್ ವಿಚಾರದಲ್ಲಿ ಆರಂಭದಲ್ಲೇ ಕರೆತರುವುದನ್ನು ವಿರೋಧ ಮಾಡಿದ್ದೆ. ಈ ಬಗ್ಗೆ ಸರ್ಕಾರಕ್ಕೂ ತಿಳಿಸಿದ್ದೇನೆ. ಮುಖ್ಯಮಂತ್ರಿ, ಗೃಹಮಂತ್ರಿ ಶಿಫ್ಟ್ ಮಾಡದಿರಲು ಇದಕ್ಕೆ ಒಪ್ಪಿದ್ದರೂ ರಾಮನಗರಕ್ಕೆ ಅವರನ್ನು ಕರೆತರುವ ಪ್ರಮೇಯವೇನಿತ್ತು. ಬೆಂಗಳೂರಿನಲ್ಲಿ ಕ್ವಾರಂಟೈನಲ್ಲಿಟ್ಟು ನಿಗಾ ವಹಿಸಬಹುದಿತ್ತಲ್ಲವಾ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಈಗ ರಾಮನಗರ ಕಾರಾಗೃಹವನ್ನು ಸಂಪೂರ್ಣ ಕ್ವಾರಂಟೈನ್ ಮಾಡಬೇಕಿದೆ.
ಕಾರಾಗೃಹದ ಸಿಬ್ಬಂದಿ ಮೇಲೂ ನಿಗಾ ವಹಿಸಬೇಕಿದೆ. ಸರ್ಕಾರವನ್ನು ತಪ್ಪು ದಾರಿಗೆ ಎಳೆದ ಅಧಿಕಾರಿಗಳ ಬಗ್ಗೆ ಎಚ್ಚರ ವಹಿಸಬೇಕಿದೆ ಎಂದರು. ಮಂಡ್ಯದಲ್ಲಿ ಆಶಾ ಕಾರ್ಯಕರ್ತೆ ಮೇಲೆ ದೌರ್ಜನ್ಯ ನಡೆದಿದೆ. ಆಶಾ ಕಾರ್ಯಕರ್ತೆಯನ್ನು ಸರ್ಕಾರ ಇಲ್ಲಿವರೆಗೆ ಭೇಟಿ ಮಾಡಿ ವಿಚಾರಿಸಿಲ್ಲ. ಪತ್ರಿಕೆಗಳಿಗೆ ಹೇಳಿಕೆ ನೀಡುವುದಕ್ಕಷ್ಟೇ ಸೀಮಿತವಾಗಿರುವ ಸರ್ಕಾರ, ಕೋವಿಡ್ ಶ್ರಮಿಕರ ಮೇಲೆ ದೌರ್ಜನ್ಯವೆಸಗಿದರೆ 3 ವರ್ಷ ಜೈಲು ಶಿಕ್ಷೆ ಪ್ರಕಟಿಸಿದ್ದರೂ ಪೊಲೀಸ್ ಠಾಣೆಯಲ್ಲಿ ಬೇಲ್ ನೀಡಿ ಆರೋಪಿಗಳನ್ನು ಮನೆಗೆ ಕಳುಹಿಸಿದ್ದಾರೆ.
ಪರಿಜ್ಞಾನವಿದೆಯಾ: ಸರ್ಕಾರ ಮೈ
ಮರೆತಿಲ್ಲವೆಂದಿದ್ದ ಡಿಸಿಎಂ ಅಶ್ವತ್ಥನಾರಾಯಣಗೌಡ ಕಾರಾಗೃಹದಲ್ಲಿರುವ ಕೈದಿಗಳನ್ನು ತಪಾಸಣೆ ಮಾಡಿ ಶಿಫ್ಟ್ ಮಾಡಲಾಗಿದೆ ಎಂಬ ಹೇಳಿಕೆ ನೀಡುತ್ತಾರೆ. ಸರ್ಕಾರಕ್ಕೆ ಮೆದುಳೇ ಇಲ್ಲ. ಕೋವಿಡ್ ಹೆಸರಿನಲ್ಲಿ ದುಡ್ಡು ಮಾಡಿಕೊಳ್ಳುತ್ತಿದ್ದಾರೆ ಎಂದು ಕುಮಾರಸ್ವಾಮಿ ಕಿಡಿಕಾರಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಸಾ.ರಾ. ಮಹೇಶ್, ಶಾಸಕ ರವೀಂದ್ರ ಶ್ರೀಕಂಠಯ್ಯ ಟಿ.ನರಸೀಪುರ ಶಾಸಕ ಅಶ್ವಿನ್ ಕುಮಾರ್, ಜಿಪಂ ಸದಸ್ಯೆ ಸವಿತಾ ಹಾಗೂ ಪಕ್ಷದ ಮುಖಂಡರು ಹಾಜರಿದ್ದರು.
ಆಶಾ ಕಾರ್ಯಕರ್ತೆ ಯೋಗಕ್ಷೇಮ ವಿಚಾರಿಸಿದ ಎಚ್ಡಿಕೆ
ತಾಲೂಕಿನ ಹುರುಳಿ ಕ್ಯಾತನಹಳ್ಳಿ ಗ್ರಾಮದ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ನಡೆಸಿದ್ದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಶಾ ಕಾರ್ಯಕತೆಯನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಶುಕ್ರವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಗ್ರಾಮದಲ್ಲಿ ಇನ್ನು ಮುಂದೆ ನಿಮಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗುವುದೆಂದರು. ಈ ಸಂಬಂಧ ಗೃಹ ಸಚಿವರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sugar ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು
Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ
HD ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್ ಶಾಸಕ ಉದಯ್
Protest: ಕೆರಗೋಡು ಹನುಮ ಧ್ವಜ ವಿವಾದ; ಜೆಡಿಎಸ್, ಭಜರಂಗದಳ, ವಿ.ಹಿಂ.ಪ. ಪ್ರತಿಭಟನೆ
Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?
ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ
Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ
Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!
ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !