ಪತ್ರಕರ್ತರ ಆರೋಗ್ಯ ತಪಾಸಣೆ
Team Udayavani, Apr 25, 2020, 12:12 PM IST
ಕಲಬುರಗಿ:ನಗರದ ಪತ್ರಕರ್ತರಿಗೆ ತಪಾಸಣೆ ನಡೆಸಿದ ವೈದ್ಯರ ತಂಡ.
ಕಲಬುರಗಿ: ಜಿಲ್ಲಾ ಮಾಧ್ಯಮ ಪ್ರತಿನಿಧಿಗಳು, ಪತ್ರಕರ್ತರಿಗೆ ನಗರದ ಡಿಎಚ್ಒ ಕಚೇರಿ ಹಿಂಭಾಗದಲ್ಲಿರುವ ಎಚ್ಐಟಿ ಹಾಲ್ನಲ್ಲಿ ಕೊವಿಡ್-19 ಕುರಿತು ತಪಾಸಣೆ ನಡೆಸಲಾಯಿತು.
ಆರೋಗ್ಯ ಇಲಾಖೆಯ ವಿಭಾಗೀಯ ಉಪನಿರ್ದೇಶಕ ಹಬೀಬ್ ಉಸ್ಮಾನ್ ಅವರ ಉಸ್ತುವಾರಿಯಲ್ಲಿ ಜಿಮ್ಸ್ ಪ್ರಯೋಗಾಲಯದ ತಂತ್ರಜ್ಞರು ಗಂಟಲು ದ್ರವದ ಮಾದರಿ ಸಂಗ್ರಹಿಸಿದರು. ಶುಕ್ರವಾರ 114 ಮಾಧ್ಯಮ ಪ್ರತಿನಿಧಿಗಳು, ಪತ್ರಕರ್ತರ ತಪಾಸಣೆ ನಡೆದಿದ್ದು, ಉಳಿದ ಎಲ್ಲಾ ಪತ್ರಕರ್ತರು ನಾಳೆ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಜಿ.ಬಿ.ಸಿದ್ದೇಶ್ವರಪ್ಪ ಕೋರಿದ್ದಾರೆ.
ಫೀಲ್ಡ್ (ಕ್ಷೇತ್ರ)ನಲ್ಲಿ ಕಾರ್ಯನಿರ್ವಹಿಸುವ ವರದಿಗಾರರು ಹಾಗೂ ಕ್ಯಾಮರಾಮನ್ ಗಳು ಕಡ್ಡಾಯವಾಗಿ ಕೊವಿಡ್ -19 ಆರೋಗ್ಯ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ
Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…
Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ
Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್ ರೇವಣ್ಣನಂಥವರಾ?; ಜಿಗ್ನೇಶ್
Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು