ಬಸವ ಜಯಂತಿ ಸರಳ ಆಚರಣೆಗೆ ಮನವಿ
Team Udayavani, Apr 26, 2020, 10:37 AM IST
ಕಲಬುರಗಿ: ವೀರಶೈವ ಮಹಾಸಭಾದ ಪದಾಧಿಕಾರಿಗಳು ಬಸವೇಶ್ವರ ಪ್ರತಿಮೆ ಆವರಣ ಸ್ವಚ್ಛಗೊಳಿಸಿದರು.
ಕಲಬುರಗಿ: ರವಿವಾರ ಸರಳವಾಗಿ ನಡೆಯುವ ಬಸವ ಜಯಂತಿ ಹಿನ್ನೆಲೆಯಲ್ಲಿ ಅಖೀಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಪದಾಧಿಕಾರಿಗಳು ಜಗತ್ ವೃತ್ತದಲ್ಲಿರುವ ಬಸವೇಶ್ವರ ಪುತ್ಥಳಿಯ ಆವರಣವನ್ನು ಸ್ವತ್ಛತಾ ಕಾರ್ಯ ಕೈಗೊಂಡರು.
ಬಸವೇಶ್ವರ ಜಯಂತಿ ಉತ್ಸವವನ್ನು ಅತಿ ಸರಳ ರೂಪದಲ್ಲಿ ಆಚರಿಸುವ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಮಹಾನಗರಪಾಲಿಕೆ ಮತ್ತು ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಮಹಾಸಭಾದ ಅಧ್ಯಕ್ಷ ಶರಣಕುಮಾರ ಮೋದಿ ಹಾಗೂ ಇತರ ಪದಾಧಿಕಾರಿಗಳು ಚರ್ಚಿಸಿದರು. ಬಸವೇಶ್ವರ ಪುತ್ಥಳಿ ಕೆಳಭಾಗದಲ್ಲೇ ಅನುಕೂಲವಾಗುವ ನಿಟ್ಟಿನಲ್ಲಿ ಬಸವೇಶ್ವರ ಪ್ರತಿಮೆ ಅನಾವರಣಗೊಳಿಸಲಾಯಿತು.
ಬಸವ ಭಕ್ತರು ಜಗತ್ ವೃತ್ತದಲ್ಲಿ ಜನ ಸೇರದೆ ತಮ್ಮ ತಮ್ಮ ಮನೆಗಳಲ್ಲಿ ಸರಳ ರೂಪದಲ್ಲಿ ಜಯಂತಿ ಆಚರಿಸುವ ಮೂಲಕ ಆದರ್ಶ ಮೆರೆಯಬೇಕು ಎಂದು ಮನವಿ ಮಾಡಿದರು. ಪ್ರಧಾನ ಕಾರ್ಯದರ್ಶಿ ಡಾ. ಶರಣ್ ಬಿ ಪಾಟೀಲ್ , ಪ್ರಶಾಂತ್ ಗುಡ್ಡ, ಸಿದ್ದು ಪಾಟೀಲ್, ಅಣವೀರ ಪಾಟೀಲ್, ಶಂಭು ಪಾಟೀಲ್ ಬಳಬಟ್ಟಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ