ಬಾಗೂರಿಗೆ ನೀರು ಶುದ್ಧೀಕರಣ ಘಟಕ ಮಂಜೂರು: ಗೂಳಿಹಟ್ಟಿ
Team Udayavani, Apr 26, 2020, 5:28 PM IST
ಹೊಸದುರ್ಗ: ತಾಲೂಕಿನ ಬಾಗೂರು ಗ್ರಾಮದಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ಶುದ್ಧ ಕುಡಿಯುವ ನೀರಿನ ಘಟಕ ಪರಿಶೀಲಿಸಿದರು
ಹೊಸದುರ್ಗ: ಬಾಗೂರು ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿದೆ. ಹಾಗಾಗಿ ಎರಡು ಕುಡಿಯುವ ನೀರು ಶುದ್ಧೀಕರಣ ಘಟಕಗಳನ್ನು ಮಂಜೂರು ಮಾಡುವುದಾಗಿ ಶಾಸಕ ಗೂಳಿಹಟ್ಟಿ ಶೇಖರ್ ಭರವಸೆ ನೀಡಿದರು.
ಬಾಗೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಬಹು ದಿನಗಳಿಂದ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಯಲ್ಲಿರುವ ಕಾರಣ ಬಹು ಬೇಡಿಕೆಯಾದ ಶುದ್ಧ ಕುಡಿಯುವ ನೀರಿನ ಘಟಕ ಶೀಘ್ರದಲ್ಲಿ ಸ್ಥಾಪಿಸುವುದಾಗಿ ಹೇಳಿದರು. ಗ್ರಾಮದಲ್ಲಿ ಎರಡು ಕಡೆ ನೀರು ಕೆರೆ ಇರುವುದರಿಂದ ಭದ್ರಾ ಮೇಲ್ದಂಡೆ ಯೋಜನೆ ಅಡಿ ನೀರು ತುಂಬಿಸಲಾಗುವುದು.ನೀರು ಬಸಿಯುವಿಕೆಯಿಂದ ಬರುವ ನೀರನ್ನು ಹೊರ ಹಾಕಲು ರಾಜಕಾಲುವೆ ನಿರ್ಮಾಣ ಮಾಡಲಾಗುವುದು. ಗ್ರಾಮದ ಮೂಡಲ ಕೆರೆ ಏರಿ ದುರಸ್ತಿ ಅಗತ್ಯವಿದ್ದು ಸಣ್ಣ ನೀರಾವರಿ ಇಲಾಖೆಯಿಂದ ಮಣ್ಣು ಹಾಕುವುದು, ಕಲ್ಲು ಪಿಚ್ಚಿಂಗ್ ಮಾಡಿಸುವ ಮೂಲಕ ಏರಿ ಭದ್ರತೆಗೆ ಆದ್ಯತೆ ನೀಡುವುದಾಗಿ ತಿಳಿಸಿದರು.
ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುತ್ತಿದ್ದ ಆಶಾ ಕಾರ್ಯಕರ್ತೆಯರಾದ ಶೋಭಾ ಹಾಗೂ ಪದ್ದಮ್ಮ ಅವರನ್ನು ಅಭಿನಂದಿಸಿದ ಶಾಸಕರು, ಅವರಿಂದ ಬಾಗೂರು ಗ್ರಾಮದ ಮಾಹಿತಿ ಪಡೆದರು. ನಿಮ್ಮೆಲ್ಲರ ಸೇವೆಯನ್ನು ದೇಶದ ಜನತೆ ಅಭಿನಂದಿಸುತ್ತಿದೆ ಎಂದರು. ಇದೇ ಸಂದರ್ಭದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಬಾಗೂರಿನ ನೀರಗಂಟಿ ರಾಘವೇಂದ್ರ ಮನೆಗೆ ಭೇಟಿ ನೀಡಿದ ಗೂಳಿಹಟ್ಟಿ, ಚಿಕಿತ್ಸೆಗಾಗಿ 50 ಸಾವಿರ ರೂ. ನೀಡಿದರು. ಪರಪ್ಪಸ್ವಾಮಿ ಗ್ರಾಮಾಂತರ ಪ್ರೌಢಶಾಲೆ ಅಧ್ಯಕ್ಷ ವಾಸುದೇವ್, ಮುಖಂಡರಾದ ಪುರುಷೋತ್ತಮ, ವಿಜಯಕುಮಾರ್, ಭಜರಂಗದಳದ ಅರುಣ್, ಬಿ.ಟಿ. ಸುರೇಶ್, ಆಂಜಿನಪ್ಪ, ರುದ್ರೇಶ್, ರಾಜು ಹೋವಳೆ, ಮಧು, ರಂಗನಾಥ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ
Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ