ಕುವೈಟ್‌: ಸೇವೆಯಲ್ಲಿ ಭಾರತೀಯರೇ ಮುಂದು


Team Udayavani, Apr 27, 2020, 6:45 AM IST

ಕುವೈಟ್‌: ಸೇವೆಯಲ್ಲಿ ಭಾರತೀಯರೇ ಮುಂದು

ಉಡುಪಿ/ ಬಂಟ್ವಾಳ: ಕೇವಲ 50ರಿಂದ 60 ಲಕ್ಷ ಜನಸಂಖ್ಯೆ ಹೊಂದಿರುವ ಪುಟ್ಟ ದೇಶ ಕುವೈಟ್‌. ಕೋವಿಡ್‌-19 ಸೋಂಕು ಈ ದೇಶವನ್ನೂ ಬಿಟ್ಟಿಲ್ಲ. ಇಲ್ಲಿ ಕೋವಿಡ್‌-19 ಸೋಂಕಿತರಲ್ಲಿ ಭಾರತೀಯ ಮೂಲದವರೇ ಹೆಚ್ಚು ಅನ್ನುವುದು ಬೇಸರದ ವಿಷಯ. ಶೇ. 70ರಷ್ಟು ಭಾರತೀಯರು ಸೋಂಕಿಗೆ ಒಳಗಾಗಿದ್ದಾರೆ.

ಹೀಗೆಂದು ಮಾಹಿತಿ ನೀಡಿದವರು ಅಲ್ಲಿನ ಸಾಲಿ¾ಯಾ ನಗರದಖಾಸಗಿ ಆರೋಗ್ಯ ಸಂಸ್ಥೆಯಲ್ಲಿ ಮೇಲ್ವಿಚಾರಕರಾದ‌ ಬ್ರಹ್ಮಾವರದ ಮಟಪಾಡಿಯ ಸತ್ಯನಾರಾಯಣ ಭಂಡಾರಿ ಮತ್ತು ಕುವೈಟ್‌ನಲ್ಲಿ ಅಟೋಮೊಬೈಲ್‌ ಟೆಕ್ನಿಶಿಯನ್‌ ಉದ್ಯೋಗದಲ್ಲಿರುವ ಬಂಟ್ವಾಳ ಮೂಲದ ಜಯಂತ್‌ ನಾಯ್ಕ ಸರಪಾಡಿ.

ಲಾಕ್‌ಡೌನ್‌ ಹೇಗೆ ಜಾರಿಯಲ್ಲಿದೆ ಅನ್ನುವ ಬಗ್ಗೆ ಅವರಿಬ್ಬರು ದೂರವಾಣಿ ಮೂಲಕ ಅನಿಸಿಕೆ ತಿಳಿಸಿದ್ದಾರೆ. ಕುವೈಟ್‌ನಲ್ಲಿ ಭಾರತಮೂಲದವರು ಹೆಚ್ಚಾಗಿ ಉದ್ಯೋಗದಲ್ಲಿದ್ದಾರೆ. ಮಿನಿಸ್ಟ್ರಿಯಲ್‌ ಆಫ್ ಹೆಲ್ತ್‌ ತಂಡದಲ್ಲಿ ಕೇರಳ, ಉಡುಪಿ, ಮಂಗಳೂರು ಭಾಗದ ವೈದ್ಯರು, ನರ್ಸ್‌ಗಳು ಹೆಚ್ಚು.
ರಾತ್ರಿ ಕರ್ಫ್ಯೂ ಕುವೈಟ್‌ನಲ್ಲಿ ಬೆಳಗ್ಗೆ 6ರಿಂದ ಸಂಜೆ 5ರ ತನಕ ಸಣ್ಣ ದಿನಸಿ ಅಂಗಡಿಗಳು, ಸೂಪರ್‌ ಮಾರ್ಕೆಟ್‌ ಇತ್ಯಾದಿ ತೆರೆದಿರುತ್ತವೆ. ಬಳಿಕ ಬೆಳಗ್ಗೆ5ರ ವರೆಗೂ ಕರ್ಫ್ಯೂ.

ಈ ಹೊತ್ತಿನಲ್ಲಿ ಮನೆಯಿಂದ ಹೊರಗೆ ಹೋದರೆ ಪೊಲೀಸರು ಬಂಧಿಸು ತ್ತಾರೆ.ನಿಯಮ ಉಲ್ಲಂಘಿಸಿದರೆ 1,000 ಕೆಡಿ (ಸುಮಾರು 2 ಲಕ್ಷ ರೂ.) ದಂಡ ಹಾಗೂ 3 ವರ್ಷ ಜೈಲು ಶಿಕ್ಷೆ. ಅನ್ಯ ದೇಶದವರಾಗಿದ್ದರೆ ಸುದೀರ್ಘ‌ ಅವಧಿ ಜೈಲಿನಲ್ಲಿರಿಸುತ್ತಾರೆ. ಶಿಕ್ಷೆಯ ಬಳಿಕ ಆವರು ಅಲ್ಲಿ ಇರುವಂತಿಲ್ಲ, ಸ್ವದೇಶಕ್ಕೆ ತೆರಳಬೇಕು.

ಕಾರ್ಮಿಕರು ಸಂಕಷ್ಟದಲ್ಲಿ
ಸರಕಾರಿ ಸಿಬಂದಿ, ಅಧಿಕಾರಿಗಳಿಗೆ ಮನೆಯಿಂದಲೇ ಕೆಲಸದ ಹೊಣೆ. ಕಾರ್ಖಾನೆ ಇತ್ಯಾದಿ ಉತ್ಪಾದನ ಕ್ಷೇತ್ರಗಳ ಕಾರ್ಮಿಕರಿಗೆ ಕಡ್ಡಾಯ ರಜೆ ನೀಡಿದ್ದು, ಈ ಅವಧಿಯಲ್ಲಿ ಅರ್ಧ ಸಂಬಳ ನೀಡಲಾಗುತ್ತದೆ. ಅಂಥ ಕಾರ್ಮಿಕರು ಹೆಚ್ಚು ಸಮಸ್ಯೆಗೆ ಸಿಲುಕಿದ್ದಾರೆ.

ಭಾರತೀಯರ ಸೇವೆ
ಸೋಂಕು ಪೀಡಿತರ ಸೇವೆಯಲ್ಲಿ ಭಾರತೀಯರೇ ಹೆಚ್ಚಾಗಿ ತೊಡಗಿಸಿ ಕೊಂಡಿದ್ದಲ್ಲದೆ ಸೋಂಕಿತರಲ್ಲಿ ಭಾರತೀಯರೇ ಹೆಚ್ಚಿರುವುದರಿಂದ ಕೆಲ ದಿನಗಳ ಹಿಂದೆ ಭಾರತದ ವೈದ್ಯರು, ಶುಶ್ರೂಷಕಿಯರು, ಟೆಕ್ನೀಶಿಯನ್‌ ಒಳಗೊಂಡ 15 ಮಂದಿಯ ತಂಡ ಕುವೈಟ್‌ಗೆ ಆಗಮಿಸಿ ವೈದ್ಯಕೀಯ ಸೇವೆ ಒದಗಿಸುತ್ತಿದೆ. ಭಾರತ ಸರಕಾರ ಕುವೈಟ್‌ನಲ್ಲಿರುವ ಭಾರತೀಯರ ಜೀವ ರಕ್ಷಣೆಗೆ ಕೈಗೊಂಡ ಕಾಳಜಿಗೆ ನಾವೆಲ್ಲರೂ ಹೆಮ್ಮೆಪಡಬೇಕು ಎಂದು ಹೇಳುತ್ತಾರೆ ಅವರು.

ಕೋವಿಡ್‌-19 ವಿರುದ್ಧ ಭಾರತ ಸಮರ್ಥವಾಗಿ ಹೋರಾಡುತ್ತಿದೆ. 130 ಕೋಟಿ ಜನಸಂಖ್ಯೆ ಇರುವ ದೇಶದಲ್ಲಿ ನಿಯಂತ್ರಣ ಸವಾಲು. ಉಳಿದ ದೇಶಗಳಿಗೆ ಹೋಲಿಸಿದಾಗ ಭಾರತ ಉತ್ತಮ ಸ್ಥಿತಿಯಲ್ಲಿದೆ. ಭಾರತೀಯರು ಆಯುರ್ವೇದಕ್ಕೆ ಹೆಚ್ಚು ಒತ್ತು ಕೊಡುವ ಕಾರಣ ಅವರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿದ್ದು ಸೋಂಕಿನ ಪ್ರಮಾಣ ಕಡಿಮೆಯಾಗಲು ಕಾರಣವಾಗಿರಬಹುದು.
– ಜಯಂತ್‌ ನಾಯ್ಕ ಸರಪಾಡಿ

ಕುವೈಟ್‌ ಜನತೆ ಲಾಕ್‌ಡೌನ್‌ ನಿಯಮಗಳನ್ನು ಚೆನ್ನಾಗಿ ಪಾಲನೆ ಮಾಡುತ್ತಿದ್ದಾರೆ. ಭಾರತದಲ್ಲಿ ಜನರು ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ನಿಯಮ ಪಾಲಿಸಿ ಸರಕಾರದ ಜತೆ ನಿಲ್ಲಬೇಕು.
– ಸತ್ಯನಾರಾಯಣ ಭಂಡಾರಿ, ಮಟಪಾಡಿ

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.