ರಾಜ್ಯದಲ್ಲಿ ಹೊಸ ಎಂಟು ಸೋಂಕಿತ ಪ್ರಕರಣ ದೃಢ: ಸೋಂಕಿತರ ಸಂಖ್ಯೆ 511ಕ್ಕೆ ಏರಿಕೆ
Team Udayavani, Apr 27, 2020, 12:45 PM IST
ಬೆಂಗಳೂರು: ರಾಜ್ಯದಲ್ಲಿ ಹೊಸ ಎಂಟು ಕೋವಿಡ್-19 ಸೋಂಕು ಪ್ರಕರಣಗಳು ದೃಢವಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 511ಕ್ಕೆ ಏರಿಕೆಯಾಗಿದೆ.
ದಕ್ಷಿಣ ಕನ್ನಡ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ತಲಾ ಎರಡು ಸೋಂಕು ಪ್ರಕರಣಗಳು ದೃಢವಾಗಿದ್ದರೆ, ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯದಲ್ಲಿ ತಲಾ ಒಂದು ಪ್ರಕರಣ ಖಚಿತವಾಗಿದೆ.
ಮಂಡ್ಯದ ನಾಗಮಂಗಲದ 50 ವರ್ಷದ ವ್ಯಕ್ತಿ ಮುಂಬೈ ಪ್ರಯಾಣದ ಇತಿಹಾಸ ಹೊಂದಿದ್ದು, ಸೋಂಕು ದೃಢವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ 13 ವರ್ಷದ ಬಾಲಕನಿಗೆ ಸೋಂಕು ದೃಢವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಸೋಂಕು ಪ್ರಕರಣಗಳು ಖಚಿತವಾಗಿದ್ದು, ಸೋಂಕಿತ ಸಂಖ್ಯೆ 432ರ ಸಂಪರ್ಕದಿಂದ 80 ವರ್ಷದ ಮಹಿಳೆ ಮತ್ತು 45 ವರ್ಷದ ಪುರುಷನಿಗೆ ಸೋಂಕು ತಾಗಿದೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಸೋಂಕಿತ ಸಂಖ್ಯೆ 456ರ ಸಂಪರ್ಕದಿಂದ ಇಬ್ಬರು ಮಹಿಳೆಯರಿಗೆ ಸೋಂಕು ದೃಢವಾಗಿದೆ.
ವಿಜಯಪುರದಲ್ಲಿ ಇಬ್ಬರಿಗೆ ಸೋಂಕು ತಾಗಿರುವುದು ದೃಢವಾಗಿದ್ದು, 221 ಸಂಖ್ಯೆ ಸೋಂಕಿತನಿಂದ 45 ವರ್ಷದ ಪುರುಷನಿಗೆ ಸೋಂಕು ತಾಗಿದ್ದರೆ, 27 ವರ್ಷದ ವ್ಯಕ್ತಿಯ ಸೋಂಕು ಮೂಲ ಪತ್ತೆ ಮಾಡಲಾಗುತ್ತಿದೆ.
ಓರ್ವ ಸಾವು
ಸೋಂಕಿತ ಸಂಖ್ಯೆ 466- 50 ವರ್ಷದ ವ್ಯಕ್ತಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವರು ಇಂದು ಸಾವನ್ನಪ್ಪಿದ್ದು ಸಾವಿಗೆ ಕೋವಿಡ್-19 ಅಲ್ಲದ ಅನ್ಯ ಕಾರಣ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
MUST WATCH
ಹೊಸ ಸೇರ್ಪಡೆ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್