ಆತಂಕ ಮೂಡಿಸಿದ ಸೋಂಕಿತನ ಹಿಸ್ಟರಿ

ಗುಜರಾತ್‌ ಮೂಲದ ಧರ್ಮಪ್ರಚಾರಕನಿಂದ ಜಿಲ್ಲೆಗೆ ಮತ್ತೆ ಬಂದ ಕೋವಿಡ್

Team Udayavani, Apr 27, 2020, 5:35 PM IST

ಆತಂಕ ಮೂಡಿಸಿದ ಸೋಂಕಿತನ ಹಿಸ್ಟರಿ

ತುಮಕೂರು: ಇಡೀ ಜಗತ್ತನ್ನೇ ಭೀತಿಗೊಳಿಸಿ ನಮ್ಮ ದೇಶದಲ್ಲಿಯೂ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೋವಿಡ್ ವೈರಸ್‌ ರಾಜ್ಯದಲ್ಲಿ ಕದಂಬ ಬಾಹು ಹೆಚ್ಚಿಸಿ ಕೊಳ್ಳುತ್ತಿರುವ ಈ ಮಹಾ ಮಾರಿಯಿಂದ ಕಲ್ಪತರು ನಾಡು ಮುಕ್ತಿ ಹೊಂದಿತು ಎಂದು ನಿರಾಳರಾಗಿದ್ದ ಜನರಿಗೆ ಮತ್ತೆ ಆತಂಕ ಸೃಷ್ಟಿಸುವಂತೆ ಕೋವಿಡ್‌-19ರ ಸೋಂಕಿತ ಪಿ-447 ವ್ಯಕ್ತಿ ನಗರದ ಮರಳೂರು ದಿಣ್ಣೆ ಮತ್ತು ಮಂಡಿಪೇಟೆಯಲ್ಲಿ ಹಲವು ಬಾರಿ ಸುತ್ತಾಡಿರುವುದು ನಗರದ ನಾಗರಿಕರಲ್ಲಿ ಆತಂಕ ಹೆಚ್ಚುವಂತೆ ಮಾಡಿದೆ.

ಜಿಲ್ಲೆಯಲ್ಲಿ ಮೊದಲ ಬಾರಿಗೆ ದೆಹಲಿಗೆ ಹೋಗಿಬಂದಿದ್ದ ಶಿರಾ ವೃದ್ಧನಿಗೆ ಕೋವಿಡ್ ಕಾಣಿಸಿಕೊಂಡು ಆತ ಮೃತಪಟ್ಟ, ಆನಂತರ ಅವರ 13 ವರ್ಷದ ಮಗನಿಗೆ ಸೋಂಕು ಕಾಣಿಸಿ ಕೊಂಡಿತು, ಆತ ಗುಣಮುಖನಾಗಿ ಬಂದು 25 ದಿನಗಳವರೆಗೂ ಯಾವುದೇ ಸೋಂಕು ಜಿಲ್ಲೆಯಲ್ಲಿ ಕಂಡು ಬರದ ಹಿನ್ನೆಲೆಯಲ್ಲಿ ಜಿಲ್ಲೆಯ ಜನ ಕೋವಿಡ್  ತೊಲಗಿತು ಎಂದು ನಿರಾಳರಾಗಿದ್ದರು. ಆದರೆ ಗುಜರಾತ್‌ ಮೂಲದ ಧರ್ಮ ಪ್ರಚಾರಕ ನಗರದ ಪಿ.ಎಚ್‌.ಕಾಲೋನಿ ಮಸೀದಿಯಲ್ಲಿ ತಂಗಿದ್ದ ಆತನಿಗೆ ಸೋಂಕು ತಗಲಿರು ವುದೇ ಈಗ ನಗರದ ಜನರನ್ನು ಬೆಚ್ಚಿ ಬೀಳಿ ಸುತ್ತಿದೆ. ಈ ಧರ್ಮಪ್ರಚಾರಕ ಪಿ-447ರ ಸೋಂಕಿತ ನಗರದ ವಿವಿಧ ಕಡೆ ಪ್ರವಾಸ ಮಾಡಿದ್ದಾರೆ. ಪ್ರಮುಖವಾಗಿ ಮರಳೂರು ದಿಣ್ಣೆ ಮತ್ತು ಮಂಡಿಪೇಟೆಗೆ ಹೆಚ್ಚು ಸಂಚಾರ ಮಾಡಿರುವುದೇ ಜನರಲ್ಲಿ ಭೀತಿ ಹೆಚ್ಚಲು ಕಾರಣವಾಗಿದೆ ಎಂದರು.

ಈ ಎರಡು ಪ್ರದೇಶಗಳಿಗೆ ಆಶಾ ಮತ್ತು ಆರೋಗ್ಯ ಸಿಬ್ಬಂದಿ ಪ್ರತಿನಿತ್ಯ ಮನೆಮನೆಗೆ ತೆರಳಿ ಜ್ವರ, ಕೆಮ್ಮು ಮತ್ತು ಶೀತ ಸೇರಿದಂತೆ ರೋಗ ಲಕ್ಷಣಗಳಿರುವ ಬಗ್ಗೆ ಸಮೀಕ್ಷೆ ನಡೆಸ
ಲಿದ್ದಾರೆ. ಸಂಪೂರ್ಣ ಸೀಲ್‌ಡೌನ್‌ ಆಗಿರುವ ಪಿ.ಎಚ್‌.ಕಾಲೋನಿಯನ್ನು ಕಂಟೈನ್‌ಮೆಂಟ್‌ ಝೋನ್‌ ಆಗಿ ಪರಿವರ್ತಿಸಲಾಗಿದೆ. ಈ ಪ್ರದೇಶ ದಲ್ಲಿ 452 ಮನೆಗಳಿವೆ. 1900ಕ್ಕೂ ಹೆಚ್ಚು ಜನರು ವಾಸವಾಗಿದ್ದಾರೆ. ಇನ್ನು ಈತ ಪ್ರವಾಸ ಮಾಡಿರುವ ಮಂಡಿ ಪೇಟೆ ಮತ್ತು ಮರಳೂರು ದಿಣ್ಣೆ ಹೆಚ್ಚು ಜನ ನಿಬಿಡ ಪ್ರದೇಶವಾಗಿದೆ ಇದನ್ನು ಬಫ‌ರ್‌ ಜೋನ್‌ ಎಂದು ಪರಿಗಣಿಸಲಾಗಿದ್ದು ಇಲ್ಲಿದ್ದ
ಕೆಲವರನ್ನು ತಪಾಸಣೆಗೆ ಒಳಪಡಿಸಲಾಗಿದೆ ಇದು ಜನರಲ್ಲಿ ಹೆಚ್ಚು ಆತಂಕ ಮೂಡಲು ಕಾರಣವಾಗಿದೆ.

ಜಿಲ್ಲೆಯಲ್ಲಿಗ ಹೋಂ ಕ್ವಾರೆಂಟೈನ್‌ನಲ್ಲಿ 370, ಐಸೋಲೇಷನ್‌ನಲ್ಲಿ 480, ಆಸ್ಪತ್ರೆಯ ಐಸೋಲೇಷನ್‌ನಲ್ಲಿ 90 ಮಂದಿ ಇದ್ದಾರೆ. ಇದುವರೆಗೆ 1437 ಜನರ ಗಂಟಲುಸ್ರಾವ ಮಾದರಿ ಸಂಗ್ರಹಿಸಿ ತಪಾಸಣೆಗೊಳಪಡಿಸಿದ್ದು, ಆ ಪೈಕಿ 1170 ಮಾದರಿಗಳು ನೆಗೆಟಿವ್‌ ಎಂದು ದೃಢಪಟ್ಟಿದೆ. ಇನ್ನೂ 252 ತಪಾಸಣೆಯ ವರದಿ ಬಾಕಿ ಇದ್ದು ಯಾರಲ್ಲಿ ಕೋವಿಡ್ ವಕ್ಕರಿಸಿದೆ
ಎನ್ನುವ ಭೀತಿ ಜಿಲ್ಲೆಯ ಜನರನ್ನು ಕಾಡುತ್ತಿದೆ.

ಕೋವಿಡ್ ಸೋಂಕಿತ ಪಿ-447 ಇದ್ದ ಪಿ.ಎಚ್‌. ಕಾಲೋನಿಯನ್ನು ಕಂಟೈನ್‌ಮೆಂಟ್‌ ಜೋನ್‌ ಆಗಿ ಪರಿವರ್ತಿಸಿದ್ದು, ಈ ಪ್ರದೇಶದಲ್ಲಿ 452 ಮನೆಗಳಿವೆ. 1900ಕ್ಕೂ ಹೆಚ್ಚು ಜನರು ವಾಸವಿದ್ದು ಜನರು ಹೆಚ್ಚು ಸಹಕಾರ ನೀಡಬೇಕು. ನಿಮಗೆ ಅಗತ್ಯವಿರುವ ವಸ್ತುಗಳನ್ನು ಹೊರಗಡೆಯಿಂದ ಪೂರೈಸಲಾಗುತ್ತದೆ. ಈ ವಸ್ತುಗಳನ್ನು ಕಂಟೈನ್‌ಮೆಂಟ್‌ ವಲಯದಲ್ಲಿಯೇ ಇರುವ 15 ಮಂದಿ ಸ್ವಯಂ ಸೇವಕರ ಮೂಲಕ ಹಂಚಿಕೆ ಮಾಡಲಾಗುತ್ತದೆ.
●ಡಾ.ಕೆ.ರಾಕೇಶ್‌ಕುಮಾರ್‌, ಡೀಸಿ

●ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.