ದೇಣಿಗೆ ಸಂಗ್ರಹಕ್ಕೆ ಮೇ 2,3 ಕ್ಕೆ ಆನ್ ಲೈನ್ ಚೆಸ್
Team Udayavani, Apr 28, 2020, 8:51 AM IST
ಬೆಂಗಳೂರು: ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಮೇ2 ಹಾಗೂ 3ಕ್ಕೆ ಆನ್ಲೈನ್ ಚೆಸ್ ಕೂಟವನ್ನು ಏರ್ಪಡಿಸಲಾಗಿದೆ.
ಯುನೈಟೆಡ್ ಕರ್ನಾಟಕ ಚೆಸ್ ಸಂಸ್ಥೆ ಹಾಗೂ ಬೆಂಗಳೂರು ಮೂಲದ ಮೊಬೈಲ್ ಪ್ರೀಮಿಯರ್ ಲೀಗ್ (ಎಂಪಿಎಲ್) ಮೊಬೈಲ್ ಗೇಮಿಂಗ್ ಆ್ಯಪ್ ಕೂಟಕ್ಕೆ ಜಂಟಿ ಪ್ರಯೋಜಕತ್ವ ವಹಿಸಿಕೊಂಡಿವೆ ಎಂದು ಸಂಘಟಕರು ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಕ್ರೀಡಾ ಸಚಿವ ಸಿ.ಟಿ.ರವಿ, “ಎಲ್ಲ ರಾಷ್ಟ್ರೀಯ ಚೆಸ್ ಆಟಗಾರರು ಕೂಟದಲ್ಲಿ ಭಾಗವಹಿಸಬೇಕು. ಹೆಚ್ಚಿನ ದೇಣಿಗೆ ಸಂಗ್ರಹಕ್ಕೆ ನೆರವಾಗಬೇಕು, ಸಂಗ್ರಹವಾದ ಹಣವನ್ನು ಕೋವಿಡ್-19 ವಿರುದ್ಧ ಹೋರಾಟಕ್ಕೆ ಬಳಸಿಕೊಳ್ಳಲಾಗುತ್ತದೆ. ನಾವೆಲ್ಲರು ಒಟ್ಟಾಗಿ ಕೋವಿಡ್ ವಿರುದ್ಧದ ಹೋರಾಟದಲ್ಲಿ ಪಾಲ್ಗೊಳ್ಳುವ’ ಎಂದು ಮನವಿ ಮಾಡಿದ್ದಾರೆ.
ಒಟ್ಟಾರೆ 10 ಲಕ್ಷ ರೂ. ನಗದು ಬಹುಮಾನ ಒಳಗೊಂಡಿದೆ. ಕೂಟದಲ್ಲಿ ಭಾಗವಹಿಸಲು ಇಷ್ಟವಿರುವವರು 50 ರೂ. ಪ್ರವೇಶ ಶುಲ್ಕ ಪಾವತಿಸಬೇಕು. ಆಸಕ್ತರು ಎಂಪಿಎಲ್ ಆ್ಯಪ್ನಲ್ಲಿ ಹೆಸರು ನೋಂದಾಯಿಸಬಹುದಾಗಿದೆ, ಕೂಟ ಎಂಪಿಎಲ್ ಆ್ಯಪ್ ಮೂಲಕ ನಡೆಯಲಿದೆ ಎಂದು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು
Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್ಗೆ ಬೆಂಬಲ ಎಂದ ನಾಯಕರು
Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ
LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ