ನೀತು ಕಣ್ಣಲ್ಲಿ ರಾಜಕೀಯ ಕನಸು!
Team Udayavani, Apr 28, 2020, 10:26 AM IST
ಚಿತ್ರರಂಗಕ್ಕೆ ಬರುವ ಪ್ರತಿಯೊಬ್ಬ ನಟ-ನಟಿಯರಿಗೂ ಬೇರೆ ಬೇರೆ ರೀತಿಯ ಪಾತ್ರಗಳನ್ನು ಮಾಡಬೇಕು. ಈ ಮೂಲಕ ಕಲಾವಿದರಾಗಿ ತೃಪ್ತಭಾವ ಪಡಬೇಕು ಎಂಬ ಆಸೆ ಇರುತ್ತದೆ. ಹಾಗಾಗಿಯೇ ಬೇರೆ ಬೇರೆ ಪಾತ್ರಗಳ ತಲಾಶ್ನಲ್ಲಿರುತ್ತಾರೆ. ನಟಿ ನೀತು ಕೂಡಾ ಇಂತಹದ್ದೇ ಆಸೆಯಿಂದಲೇ ಹೊಸ ಪಾತ್ರಗಳತ್ತ ಎದುರುನೋಡುತ್ತಿರುತ್ತಾರೆ. ಈಗ ಅವರಿಗೆ ಸಿಕ್ಕಿರುವ ಪಾತ್ರವೊಂದರ ಕುರಿತು ನೀತು ಎಕ್ಸೈಟ್ ಆಗಿದ್ದಾರೆ.
ಹೌದು, ನೀತು 1888 ಎಂಬ ಚಿತ್ರವೊಂದರಲ್ಲಿ ನಟಿಸುತ್ತಿದ್ದು, ಈ ಚಿತ್ರದಲ್ಲಿ ರಾಜಕಾರಣಿಯಾಗಬೇಕೆಂದು ಕನಸು ಕಂಡು, ಆ ನಿಟ್ಟಿನಲ್ಲಿ ಸಾಗುವ ಪಾತ್ರ ಮಾಡುತ್ತಿದ್ದಾರಂತೆ. ಈ ಪಾತ್ರ ನೀತು ಅವರಿಗೆ ತುಂಬಾ ಖುಷಿ ನೀಡಿದೆಯಂತೆ. ಸಾಮಾನ್ಯವಾಗಿ ನಟಿಯರಿಗೆ ಚಿತ್ರರಂಗದಲ್ಲಿ ಹೆಚ್ಚು ವರ್ಷ ಅವಕಾಶಗಳು ಸಿಗೋದಿಲ್ಲ ಎಂಬ ಮಾತಿದೆ. ಆದರೆ, ನೀತು ವಿಷಯದಲ್ಲಿ ಅದು ಸುಳ್ಳಾಗಿದೆ.
ನೀತು ಕನ್ನಡ ಚಿತ್ರರಂಗ ಪ್ರವೇಶಿಸಿ ಹತ್ತು ವರ್ಷ ಕಳೆದಿದೆ. ಈ ಹತ್ತು ವರ್ಷಗಳಲ್ಲಿ ಸಾಕಷ್ಟು ಪಾತ್ರಗಳನ್ನು ಮಾಡಿದ್ದಾರೆ. ಸೋಲು-ಗೆಲುವು, ಕೆರಿಯರ್ನಲ್ಲಾಗುವ ಏರಿಳಿತಗಳನ್ನು ನೋಡಿದ್ದಾರೆ. ಆದರೆ, ನೀತು ಮಾತ್ರ ಆ ಬಗ್ಗೆ ತಲೆಕೆಡಿಸಿಕೊಳ್ಳದೇ ಸಿಕ್ಕ ಪಾತ್ರಗಳಿಗೆ ನ್ಯಾಯ ಒದಗಿಸುತ್ತಾ ಬಂದಿದ್ದಾರೆ. ಇನ್ನು, 1888 ಎಂಬ ಟೈಟಲ್ ಕೂಡಾ ಭಿನ್ನವಾಗಿದೆ. ಅದಕ್ಕೆ ಕಾರಣವೇನು ಎಂಬುದನ್ನು ತೆರೆಮೇಲೆಯೇ ನೋಡಬೇಕು. ಈ ಚಿತ್ರದ ಟೀಸರ್ ಬಿಡುಗಡೆಗೆ ಚಿತ್ರತಂಡ ತಯಾರಿ ನಡೆಸಿದ್ದು, ಈ ಬಗ್ಗೆ ನಟಿ ನೀತು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಚಿತ್ರದ ಟೀಸರ್ ಶೀಘ್ರದಲ್ಲಿ ಬಿಡುಗಡೆಯಾಗಲಿದೆ ಎಂದು ನಟಿ ನೀತು ಬರೆದುಕೊಂಡಿದ್ದಾರೆ. ಈ ಚಿತ್ರವನ್ನು ಸಾಫ್ಟ್ವೇರ್ ಮಂದಿ ಸೇರಿಕೊಂಡು ಮಾಡಿದ್ದಾರೆ. ಚಿತ್ರದ ಕಥೆ ಬಹುತೇಕ ನೀತು ಸುತ್ತವೇ ಸುತ್ತುವುದರಿಂದ ಈ ಸಿನಿಮಾ ಮೇಲೆ ನೀತು ಅವರ ನಿರೀಕ್ಷೆ ಕೂಡಾ ಹೆಚ್ಚಿದೆ.
ಈ ನಡುವೆಯೇ ನೀತು ಒಂದಷ್ಟು ಮಂದಿ ಸಮಾನ ಮನಸ್ಕರ ಜೊತೆ ಸೇರಿಕೊಂಡು ಕೋವಿಡ್ 19 ದಿಂದ ಸಂಕಷ್ಟಕ್ಕೀಡಾಗಿರುವವರಿಗೆ ಆಹಾರದ ವ್ಯವಸ್ಥೆ ಕೂಡಾ ಮಾಡುತ್ತಾ ತಮ್ಮ ಕೈಲಾದ ಸೇವೆ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Sandalwood: ಶೈನ್ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್ ಮ್ಯಾರೀಡ್” ಟೈಟಲ್
MUST WATCH
ಹೊಸ ಸೇರ್ಪಡೆ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ