ಕೋವಿಡ್ ಗೆದ್ದ ಕೋಡಿಪಾಳ್ಯದ ವ್ಯಕ್ತಿ
ತಾಲೂಕಲ್ಲಿ ಮೊದಲ ಪ್ರಕರಣವಾದ್ದರಿಂದ ಆತಂಕಕ್ಕೊಳಗಾಗಿದ್ದರು
Team Udayavani, Apr 29, 2020, 11:30 AM IST
ದೊಡ್ಡಬಳ್ಳಾಪುರ: ತಾಲೂಕಿನ ಕೋಡಿಪಾಳ್ಯ ಗ್ರಾಮದಲ್ಲಿ ಕೋವಿಡ್ ಸೋಂಕಿಗೆ ಒಳಗಾಗಿ ಚಿಕಿತ್ಸೆಗೆ ದಾಖಲಾಗಿದ್ದ 39 ವರ್ಷದ ವ್ಯಕ್ತಿ ಪೂರ್ಣ ಗುಣಮುಖರಾಗಿ ಮನೆಗೆ ಮರಳಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾಹಿತಿ ನೀಡಿದ್ದಾರೆ. ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಮಧುರೆ ಹೋಬಳಿ ಕೋಡಿಪಾಳ್ಯದ 39 ವರ್ಷದ ವ್ಯಕ್ತಿಯೊಬ್ಬರಿಗೆ ಏ.13ರಂದು ಕೋವಿಡ್ ಸೋಂಕು ಇರುವುದು ದೃಢಪಟ್ಟು ದೊಡ್ಡಬಳ್ಳಾಪುರ ತಾಲೂಕಿಗೂ ಕೋವಿಡ್ ಕಾಲಿಟ್ಟಿತ್ತು. ಕೋವಿಡ್ ಸೋಂಕು ದೃಢಪಟ್ಟ ಕಾರಣ, ವ್ಯಕ್ತಿಯನ್ನು ಚಿಕಿತ್ಸೆಗೆ ದಾಖಲಿಸಲಾಗಿತ್ತು. ಅಲ್ಲದೆ,
ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕೋಡಿಪಾಳ್ಯ ಗ್ರಾಮವನ್ನು ಸೀಲ್ಡೌನ್ ಮಾಡಿ, ಸೋಂಕಿತ ವ್ಯಕ್ತಿಯೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 27 ಜನರನ್ನು ಇಸ್ತೂರಿನ ಅಂಬೇಡ್ಕರ್ ವಸತಿ ನಿಲಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.
23ಮಂದಿ ತಪಾಸಣೆಗೆ ನೆಗೆಟಿವ್ ಬಂದ ಕಾರಣ ಸೋಮವಾರ ಕ್ವಾರಂಟೈನ್ ನಿಂದ ಮನೆಗೆ ಕಳುಹಿಸಲಾಗಿದ್ದು, ಉಳಿದ ನಾಲ್ಕು ಜನರು ಕ್ವಾರಂಟೈನ್ ಅಲ್ಲಿ ಮುಂದುವರಿದಿದ್ದಾರೆ ಎಂದು ತಿಳಿಸಿದ್ದಾರೆ. ತಾಲೂಕಿನ ಮೊದಲ ಕೋವಿಡ್ ಪ್ರಕರಣವಾದ್ದರಿಂದ ಜನತೆ ತೀವ್ರ ಆತಂಕಕ್ಕೀಡಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ