ಮಲ್ಯ, ಚೋಕ್ಸಿ,ರಾಮದೇವ್ ಸಾಲ ಮನ್ನಾ: ಕೇಂದ್ರದ ನಡೆಯ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
Team Udayavani, Apr 29, 2020, 1:44 PM IST
ಬೆಂಗಳೂರು: ಕೇಂದ್ರ ಸರ್ಕಾರ ಉದ್ಯಮಿಗಳ ಬಹುಕೋಟಿ ಸಾಲಮನ್ನಾ ಮಾಡಿರುವ ವಿಚಾರವನ್ನು ವಿರೋಧಿಸಿ ರಾಜ್ಯ ಕಾಂಗ್ರಸ್ ನಿಂದ ಮೌನ ಧರಣಿ ನಡೆಸಲಾಯಿತು.
ವಿಜಯ್ ಮಲ್ಯ, ಮೆಹುಲ್ ಚೋಕ್ಸಿ, ರಾಮದೇವ್ ಮುಂತಾದ ಉದ್ಯಮಿಗಳ ಸಾಲವನ್ನು ಕೇಂದ್ರ ಸರಕಾರ ಮನ್ನಾ ಮಾಡಿದೆ, ಆದರೆ ಜನಸಾಮಾನ್ಯರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಿಲ್ಲ ಎಂದು ವಿರೋಧಿಸಿ ಮೂವರು ಉದ್ಯಮಿಗಳ ಫೋಸ್ಟರ್ ಹಿಡಿದುಕೊಂಡು ಮೌನ ಪ್ರತಿಭಟನೆ ನಡೆಸಲಾಗುತ್ತಿದೆ.
ಈ ಬಗ್ಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ಮನೋಹರ್, ರಾಹುಲ್ ಗಾಂಧಿ ಅವರ ಸಾಲದ ಬಗ್ಗೆ ಸಂಸತ್ತಿನಲ್ಲೇ ಪ್ರಸ್ತಾಪಿಸಿದ್ದರು. ಈಗ ಕೇಂದ್ರ ಸರ್ಕಾರ ಅವರ ಸಾಲ ಮನ್ನಾ ಮಾಡಿದೆ. ಇಂತಹ ಸಂದರ್ಭದಲ್ಲಿ 68 ಸಾವಿರ ಕೋಟಿ ಸಾಲ ಮನ್ನಾಮಾಡಿದ್ದೇಕೆ? ಜನಸಾಮಾನ್ಯರು ಸಂಕಷ್ಟದಲ್ಲಿದ್ದಾರೆ. ಜನಸಾಮಾನ್ಯರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಿಲ್ಲ, ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಆದರೆ ಉದ್ಯಮಿಗಳ ಪರವಾಗಿ ಸರ್ಕಾರ ವರ್ತಿಸುತ್ತಿದೆ ಎಂದರು.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನವಾಗಿರುವುದೇಕೆ? ಅವರು ದೇಶದ ಜನತೆಗೆ ಸತ್ಯ ಹೇಳಬೇಕು. ದೇಶಕ್ಕೆ ದ್ರೋಹ ಬಗೆದಿರುವ ಅವರು ರಾಜಿನಾಮೆ ನೀಡಬೇಕು ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ