ಪರಿಷತ್ತು ಸದಸ್ಯರ ಪಾಸ್ ದುರ್ಬಳಕೆ; ಪೊಲೀಸ್ ಆಯುಕ್ತರ ಎಚ್ಚರಿಕೆ ಛಾಟಿ
Team Udayavani, Apr 29, 2020, 2:00 PM IST
ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ: ವಿಧಾನಸಭೆ-ವಿಧಾನ ಪರಿಷತ್ತು ಸದಸ್ಯರ ವಾಹನ ಪಾಸ್ಗಳನ್ನು ದುರುಪಯೋಗ ಪಡಿಸಿಕೊಳ್ಳುವ ಕುರಿತಂತೆ ಮಹಾನಗರ ಪೊಲೀಸ್ ಆಯುಕ್ತ ಆರ್. ದಿಲೀಪ ಅವರು ಮಂಗಳವಾರ ಒಂದಿಬ್ಬರಿಗೆ ಎಚ್ಚರಿಕೆಯ ಛಾಟಿ ಬೀಸಿದ್ದಾರೆ.
ಮಂಗಳವಾರ ಸಂಜೆ ಬಸವವನದ ಬಳಿ ಅನಗತ್ಯವಾಗಿ ತಿರುಗಾಡುತ್ತಿದ್ದ ವಾಹನಗಳನ್ನು ತಡೆದು ವಾಹನಗಳ ಪರಿಶೀಲನೆ ಹಾಗೂ ವಾಹನ ಸೀಜ್ ಮಾಡುವ ಸಂದರ್ಭದಲ್ಲಿ, ವಿಧಾನ ಪರಿಷತ್ತು ಸದಸ್ಯರ ಪಾಸ್ ಹೊಂದಿದ ವಾಹನವೊಂದು ಬಂದಿದೆ. ಅದನ್ನು ಪರಿಶೀಲಿಸಿದಾಗ, ಅದು ಕಾಂಗ್ರೆಸ್ ಮುಖಂಡರೊಬ್ಬರಿಗೆ ಸೇರಿದ ವಾಹನವಾಗಿತ್ತು.
ಅದು ವಿಧಾನ ಪರಿಷತ್ತು ಸದಸ್ಯರಿಗೆ ಸೇರಿದ ವಾಹನ ಅಲ್ಲ ಎಂಬುದನ್ನು ಅರಿತ ಪೊಲೀಸ್ ಆಯುಕ್ತರು ಪಾಸ್ಗಳ ದುರ್ಬಳಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ಧ್ವನಿವರ್ಧಕದಲ್ಲೇ ಇದು ಪಾಸ್ಗಳ ದುರ್ಬಳಕೆ ಎಂದು ಕಾಂಗ್ರೆಸ್ ಮುಖಂಡನಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.
ಮಹಾನಗರದಲ್ಲಿ ಕೆಲವರು ವಿಧಾನಸಭೆ, ವಿಧಾನ ಪರಿಷತ್ತು ಸದಸ್ಯರ ಪಾಸ್ಗಳನ್ನು ತಮ್ಮ ವಾಹನಗಳಿಗೆ ಬಳಕೆ ಮಾಡುತ್ತಿದ್ದು, ಇನ್ನಾದರೂ ಪೊಲೀಸರು ಈ ಬಗ್ಗೆ ಸ್ಪಷ್ಟ ರೀತಿಯ ಕ್ರಮ ಕೈಗೊಳ್ಳಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
MUST WATCH
ಹೊಸ ಸೇರ್ಪಡೆ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ