ನೇಕಾರರಿಗೆ ಪರಿಹಾರ ಒದಗಿಸಲು ಆಗ್ರಹ
Team Udayavani, Apr 29, 2020, 5:05 PM IST
ಮುನವಳ್ಳಿ: ಕೋವಿಡ್ 19 ಹಿನ್ನೆಲೆಯಲ್ಲಿ ತಿಂಗಳಿನಿಂದ ಲಾಕಡೌನ್ ಇದ್ದು, ನಷ್ಟ ಅನುಭವಿಸುತ್ತಿರುವ ಪಟ್ಟಣದ 150ಕ್ಕೂ ಹೆಚ್ಚು ನೇಕಾರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುವಂತೆ ಆಗ್ರಹಿಸಿ ನೇಕಾರ ಸಮಾಜದ ವತಿಯಿಂದ ರಾಜ್ಯ ವಿಧಾನಸಭೆ ಉಪಸಭಾಧ್ಯಕ್ಷರಾದ ಆನಂದ ಮಾಮನಿ ಇವರಿಗೆ ಮನವಿ ಸಲ್ಲಿಸಲಾಯಿತು.
ನೇಕಾರಿಕೆಯನ್ನೇ ಮೂಲಕಸಬನ್ನಾಗಿಸಿ ಕೊಂಡು ಜೀವನ ಮಾಡುತ್ತಿರುವ ಬಡ ನೇಕಾರ ಕುಟುಂಬಗಳು ಲಾಕ್ಡೌನ್ ದಿಂದ ಬಹಳ ಸಂಕಷ್ಟ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ದೈನಂದಿನ ಜೀವನ ಮಾಡುವುದು ಕಠಿಣವಾಗಿದೆ. ಇತ್ತೀಚಿಗಷ್ಟೇ ಪ್ರವಾಹದಿಂದ ಮನೆ, ಉದ್ಯೋಗವನ್ನು ಕಳೆದುಕೊಂಡು ಅಪಾರ ನಷ್ಟ ಅನುಭವಿಸಿ ಇನ್ನೇನು ಸ್ವಲ್ಪ ಮಟ್ಟಿಗೆ ಚೇತರಿಸಿಕೊಳ್ಳುತ್ತಿರುವ ಬೆನ್ನಲ್ಲೇ ಮತ್ತೆ ಗಾಯಕ್ಕೆ ಬರೆ ಹಚ್ಚಿದಂತಾಗಿದೆ. ಆದ್ದರಿಂದ ಕೂಡಲೇ ಸರ್ಕಾರ ನೇಕಾರರಿಗೆ ಸೂಕ್ತ ಪರಿಹಾರ ಒದಗಿಸಿ ಕೊಡಬೇಕೆಂದು ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಸುಭಾಸ ಸಣಕಲ್ಲ, ಮಲ್ಲೇಶ ಸೂಳೇಭಾಂವಿ, ವಿಲಾಸ ಸಣಕಲ್ಲ, ವೆಂಕಟೇಶ ದಿನ್ನಿಮನಿ, ಚನ್ನಪ್ಪ ಕಳಸನ್ನವರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Belagavi: ಗಡಿ ಹೋರಾಟದಲ್ಲಿ ಯಶಸ್ವಿಯಾಗಲು ಒಂದಾಗಿ: ಮನೋಜ್ ಜರಾಂಗೆ ಪಾಟೀಲ
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…