ಗಲ್ಫ್ ವಾಸಿ ಭಾರತೀಯರ ಕರೆತರಲು ನೌಕಾಪಡೆ ಸಜ್ಜು

ಐಎನ್‌ಎಸ್‌ ಜಲಾಶ್ವ ಸಹಿತ 3 ಹಡಗುಗಳ ಮೂಲಕ ಲಕ್ಷಕ್ಕೂ ಅಧಿಕ ಮಂದಿ ವಾಪಸ್‌

Team Udayavani, Apr 30, 2020, 6:12 AM IST

ಗಲ್ಫ್ ವಾಸಿ ಭಾರತೀಯರ ಕರೆತರಲು ನೌಕಾಪಡೆ ಸಜ್ಜು

ಭಾರತೀಯ ನೌಕಾದಳದ ಎರಡನೇ ದೈತ್ಯ ಹಡಗು ಐಎನ್‌ಎಸ್‌ ಜಲಾಶ್ವ ಈ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ.

ಹೊಸದಿಲ್ಲಿ: ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿರುವ ಸಹಸ್ರಾರು ಭಾರತೀಯ ವಲಸೆ ಕಾರ್ಮಿಕರನ್ನು ತಾಯ್ನಾಡಿಗೆ ಕರೆತರಲು ನೌಕಾಪಡೆ, ವಾಯುಪಡೆಗಳು ಸಜ್ಜಾಗಿವೆ.

ನೌಕಾಪಡೆಯು ಕನಿಷ್ಠ ಮೂರು ಹಡಗುಗಳನ್ನು ಇದಕ್ಕಾಗಿ ಸಿದ್ಧಪಡಿಸುತ್ತಿದ್ದು, ವೈದ್ಯಕೀಯ ಸೌಲಭ್ಯಗಳ ಜತೆಗೆ ಸಾಮಾಜಿಕ ಅಂತರದಲ್ಲಿ ಆಸನ ವ್ಯವಸ್ಥೆಯನ್ನೂ ಮಾಡಿಕೊಳ್ಳುತ್ತಿದೆ.

ಡಜನ್‌ಗಟ್ಟಲೆ ಯುದ್ಧ ಟ್ಯಾಂಕ್‌ಗಳನ್ನು ಸಾಗಿಸಬಲ್ಲ, ಭಾರತೀಯ ನೌಕಾದಳದ ಎರಡನೇ ದೈತ್ಯ ಹಡಗು ಐಎನ್‌ಎಸ್‌ ಜಲಾಶ್ವ ಈ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ.

ಇದಕ್ಕೆ ನಿಯೋಜಿಸಲ್ಪಟ್ಟ ಪ್ರತೀ ಹಡಗಿನಲ್ಲೂ ವೈದ್ಯಕೀಯ ತಂಡಗಳು ಇರಲಿವೆ. ಭಾರತ ಹಿಂದೆಂದೂ ಕೈಗೊಂಡಿರದಂಥ ಬಹುದೊಡ್ಡ ಸ್ಥಳಾಂತರ ಪ್ರಕ್ರಿಯೆ ಇದಾಗಿದ್ದು, ಸುಮಾರು 1 ಲಕ್ಷಕ್ಕೂ ಅಧಿಕ ಮಂದಿಯನ್ನು ಕರೆತರಲಾಗುತ್ತದೆ.

ವ್ಯವಸ್ಥೆ ಹೇಗಿದೆ?
ಪ್ರತೀ ಹಡಗಿನಲ್ಲಿ ಸಾಮಾಜಿಕ ಅಂತರ ನೀಡಿ, ತಲಾ 500 ಮಂದಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ. ಮೇಲ್ಭಾಗದ ಡೆಕ್‌ಗಳಲ್ಲಿ, ತೆರೆದ ಸ್ಥಳಗಳಲ್ಲಿ ಪುರುಷರಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗಿದ್ದರೆ, ಮಹಿಳೆಯರು, ಮಕ್ಕಳು, ವೃದ್ಧರಿಗೆ ಕೆಳಗಿನ ಡೆಕ್‌ಗಳಲ್ಲಿ ವಸತಿ ವ್ಯವಸ್ಥೆ ಇರುತ್ತದೆ. ಆಹಾರ, ಔಷಧ ಸಂಗ್ರಹ ಕಾರ್ಯ ಭರದಿಂದ ಸಾಗಿದೆ. ಕೊಚ್ಚಿ, ವಿಶಾಖಪಟ್ಟಣ, ಕಾರವಾರದಿಂದ ಈ ಹಡಗುಗಳು ಹೊರಡಲಿವೆ.

ಸ್ಥಳಾಂತರಕ್ಕೂ ಮುನ್ನ ಆರೋಗ್ಯ ಪರೀಕ್ಷೆ ನಡೆಸಲಾಗುತ್ತದೆ. ಕೋವಿಡ್ ನೆಗೆಟಿವ್‌ ಇದ್ದವರನ್ನು ವಿಮಾನಗಳಲ್ಲೂ ಕರೆತರಲಾಗುತ್ತದೆ. ಏರ್‌ ಇಂಡಿಯಾ, ಏರ್‌ಫೋರ್ಸ್‌ನ ವಿಮಾನಗಳು ಈ ಕಾರ್ಯಾಚರಣೆಗೆ ಸಜ್ಜಾಗುತ್ತಿವೆ.

ತಾಯ್ನಾಡಿಗೆ ಬಂದ ಪ್ರತಿಯೊಬ್ಬರನ್ನೂ ಮತ್ತೆ ಆರೋಗ್ಯ ಪರೀಕ್ಷೆಗೊಳಪಡಿಸಿ, 14 ದಿನಗಳ ಕ್ವಾರಂಟೈನ್‌ಗೆ ಕಳುಹಿಸಲಾಗುತ್ತದೆ. ಇಂಥವರಿಗೆ ಕ್ವಾರಂಟೈನ್‌ ವ್ಯವಸ್ಥೆ ಕಲ್ಪಿಸಲು ಕೇರಳ ಈಗಾಗಲೇ ಮುಂದೆ ಬಂದಿದೆ. ಕರಾವಳಿ ತೀರಗಳನ್ನು ಹೊಂದಿರುವ ಇತರ ರಾಜ್ಯಗಳನ್ನೂ ಇದಕ್ಕಾಗಿ ಕೇಂದ್ರ ಸರಕಾರ ಒಪ್ಪಿಸುವ ಸಾಧ್ಯತೆ ಇದೆ.

ಕಾರ್ಮಿಕರಿಗೆ ಮೊದಲ ಆದ್ಯತೆ
ಯುಎಇ, ಸೌದಿ ಅರೇಬಿಯಾ, ಕುವೈಟ್‌, ಒಮಾನ್‌, ಕತಾರ್‌, ಬಹ್ರೈನ್‌ಗಳಲ್ಲಿ ನೆಲೆಸಿರುವ ಶೇ.70 ಭಾರತೀಯರು ತಾಯ್ನಾಡಿಗೆ ಮರಳಲು ತುದಿಗಾಲಿನಲ್ಲಿ ನಿಂತಿದ್ದಾರೆ. ಅಲ್ಲಿನ ರಾಯಭಾರಿ ಕಚೇರಿಗಳನ್ನು ಸಂಪರ್ಕಿಸಿ ಸ್ಥಳಾಂತರಿಸಬೇಕಾದವರ ವಿವರಗಳನ್ನು ಒಟ್ಟುಗೂಡಿಸುವ ಪ್ರಕ್ರಿಯೆ ಆರಂಭಗೊಂಡಿದೆ.

ಮೂಲಗಳ ಪ್ರಕಾರ, ವಲಸೆ ಕಾರ್ಮಿಕರಿಗೆ ಮೊದಲ ಆದ್ಯತೆ ನೀಡಲು ಕೇಂದ್ರ ಸರಕಾರ ನಿರ್ಧರಿಸಿದೆ. ಕೆಲಸದ ಅವಧಿಯ ವೀಸಾ ಮುಗಿದಿರುವ, ಇನ್ನೇನು ಮುಗಿಯಲಿರುವ, ಹಸಿವಿನಿಂದ ಕಂಗೆಟ್ಟಿರುವ ವಲಸೆ ಕಾರ್ಮಿಕರನ್ನು ಮೊದಲ ಹಂತದಲ್ಲಿಯೇ ಕರೆತರಲಾಗುತ್ತದೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.