ಮೇ 3ರ ನಂತರ ಹಾಂಕಾಂಗ್‌ ಮಾದರಿ ಜಾರಿಗೊಳಿಸಲು ಕೇಂದ್ರ ಚಿಂತನೆ

ಯೂರೋಪ್‌, ಅಮೆರಿಕಕ್ಕೂ ಮಾದರಿಯಾಗಿರುವ ಹಾಂಕಾಂಗ್‌

Team Udayavani, Apr 30, 2020, 6:30 AM IST

ಮೇ 3ರ ನಂತರ ಹಾಂಕಾಂಗ್‌ ಮಾದರಿ ಜಾರಿಗೊಳಿಸಲು ಕೇಂದ್ರ ಚಿಂತನೆ

ಭಾರತದಲ್ಲಿ ಎರಡನೇ ಹಂತದ ಕೋವಿಡ್ ಲಾಕ್‌ಡೌನ್‌ ಕೊನೆಗೊಳ್ಳಲು ಇನ್ನು ನಾಲ್ಕೇ ದಿನ ಬಾಕಿ ಇವೆ. ಹೀಗಿರುವಾಗ ದೇಶದಲ್ಲಿ ಲಾಕ್‌ಡೌನ್‌ ತೆರವು ಮಾಡಬೇಕೆ, ಬೇಡವೇ ಎಂಬ ಬಗ್ಗೆ ತಜ್ಞರ ವಲಯದಲ್ಲಿ ಚರ್ಚೆಗಳು ಆರಂಭವಾಗಿವೆ.

ಈ ನಡುವೆ ಸೋಂಕನ್ನು ಪರಿಣಾಮಕಾರಿಯಾಗಿ ಕಟ್ಟಿಹಾಕಲು ಹಾಗೂ ಲಾಕ್‌ಡೌನ್‌ನಿಂದ ಹೊರಬರಲು ಹಾಂಗ್‌ಕಾಂಗ್‌ ಮಾದರಿ ಅನುಸರಣೆ ಸೂಕ್ತ ಎಂಬ ಮಾತುಗಳೂ ಕೇಳಿಬರುತ್ತಿವೆ.

ಮೇ 3ರ ನಂತರ, ಲಾಕ್‌ಡೌನ್‌ ತೆರವಾದ ಬಳಿಕ ಹಾಟ್‌ಸ್ಪಾಟ್‌ಗಳಲ್ಲಿ ಮಾತ್ರ ಈಗಿರುವಂಥ ಎಲ್ಲ ನಿರ್ಬಂಧಗಳೂ ಮುಂದುವರಿಯಲಿವೆ ಎಂದು ಕೇಂದ್ರ ಸರಕಾರ ತಿಳಿಸಿದೆ.

ಜತೆಗೆ ಈಗಾಗಲೇ ಗುರುತಿಸಿರುವ ವಲಯಗಳ ಆಧಾರದಲ್ಲಿ ಲಾಕ್‌ಡೌನ್‌ನ ನಿರ್ಬಂಧಗಳನ್ನು ಸಡಿಲಿಸುವ ನಿರ್ಧಾರವೂ ಕೇಂದ್ರದ ಮುಂದಿದೆ. ಈಗಾಗಲೇ ಹಸಿರು ವಲಯದಯಲ್ಲಿರುವ ಹಲವು ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಸಡಿಲಿಸಿ, ಕೆಲ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ.

ಆದರೆ, ಕೆಂಪು ವಲಯ ಮತ್ತು ಹಾಟ್‌ಸ್ಪಾಟ್‌ಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗದಂತೆ ಎಚ್ಚರ ವಹಿಸುವ ಚಿಂತೆ ಸರಕಾರವನ್ನು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಹಾಂಗ್‌ಕಾಂಗ್‌ ಮಾದರಿ ಹೆಚ್ಚು ಚರ್ಚೆಗೆ ಗ್ರಾಸವಾಗಿದೆ. ಭಾರತ ಮಾತ್ರವಲ್ಲದೆ, ಯುರೋಪ್‌ ರಾಷ್ಟ್ರಗಳು ಮತ್ತು ಅಮೆರಿಕ ಕೂಡ ಈ ಮಾದರಿ ಮೊರೆ ಹೋಗಲು ಚಿಂತನೆ ನಡೆಸುತ್ತಿವೆ.

ಅಲ್ಲಿ ಇಬ್ಬರೇ ಮೃತರು!: ಚೀನದ ವುಹಾನ್‌ನಿಂದ ಬಂದಿದ್ದ ಕೇರಳದ ಮೂವರು ಯುವಕರಲ್ಲಿ ಕೋವಿಡ್ ಸೋಂಕು ದೃಢಪಡುವ ಮೂಲಕ ಭಾರತದಲ್ಲಿ ವೈರಸ್‌ ತನ್ನ ಖಾತೆ ತೆರೆದಿತ್ತು. ಅದಕ್ಕೂ ಒಂದು ವಾರ ಹಿಂದಷ್ಟೇ ಹಾಂಗ್‌ಕಾಂಗ್‌ನಲ್ಲಿ ಮೊದಲ ಪ್ರಕರಣ ಬೆಳಕಿಗೆ ಬಂದಿತ್ತು.

ಆದರೆ, ಭಾರತ ಲಾಕ್‌ಡೌನ್‌ ಜಾರಿಗೊಳಿಸುವ ಮೂಲಕ ಚೀನದ ಹಾದಿಯಲ್ಲಿ ನಡೆದರೆ, ಹಾಂಗ್‌ಕಾಂಗ್‌ ಆಡಳಿತ ಮಾತ್ರ ಲಾಕ್‌ಡೌನ್‌ ಜಾರಿಯ ಯೋಚನೆ ಕೂಡ ಮಾಡಲಿಲ್ಲ.

ಆದಾಗ್ಯೂ ಅಲ್ಲಿ ವೈರಸ್‌ ಅನ್ನು ಪರಿಣಾಮಕಾರಿಯಾಗಿ ಕಟ್ಟಿಹಾಕಲಾಯಿತು. ಈವರೆಗೆ ಅಲ್ಲಿ ಕೇವಲ 1,038 ಸೋಂಕಿತರಿದ್ದು, ಕೇವಲ ಇಬ್ಬರು ಮೃತಪಟ್ಟಿದ್ದಾರೆ. ಲಾಕ್‌ಡೌನ್‌ ಜಾರಿ ಹೊರತಾಗಿಯೂ ಭಾರತದಲ್ಲಿಂದು 30 ಸಾವಿರಕ್ಕೂ ಹೆಚ್ಚು ಸೋಂಕಿತರಿದ್ದಾರೆ.

ಅದ್ಭುತವಾಗಿತ್ತು ಜನಸ್ಪಂದನೆ: ಜನಸಂಖ್ಯೆ ದೃಷ್ಟಿಯಿಂದ ನೋಡುವುದಾದರೆ ಭಾರತ ಮತ್ತು ಹಾಂಗ್‌ಕಾಂಗ್‌ ಅನ್ನು ಒಂದೇ ತಕ್ಕಡಿಯಲ್ಲಿಟ್ಟು ತೂಗಲು ಆಗುವುದಿಲ್ಲ. ಏಕೆಂದರೆ ಅಲ್ಲಿನ ಜನಸಂಖ್ಯೆ ನಮ್ಮ ಬೆಂಗಳೂರಿಗಿಂತಲೂ ಕಡಿಮೆ.

ಆದರೆ, ಸೋಂಕು ಹರಡದಂತೆ ತಡೆಯಲು ಅಲ್ಲಿನ ಜನ ತೋರಿದ ಪ್ರಬುದ್ಧತೆ ಮಾತ್ರ ಅದ್ಭುತ. ಹಾಂಗ್‌ಕಾಂಗ್‌ ಆಡಳಿತ, ಜನರು ತಪ್ಪದೇ ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದಷ್ಟೇ ಹೇಳಿತು.

ಇದಕ್ಕೆ ಜನ ಸ್ಪಂದಿಸಿದ ರೀತಿ ಕಂಡು ಜಗತ್ತೇ ಬೆರಗಾಯಿತು. ಏಕೆಂದರೆ ಹಾಂಗ್‌ಕಾಂಗ್‌ನ ಶೇ. 99 ಜನ ಮಾಸ್ಕ್ ಧರಿಸಿ ಓಡಾಡುತ್ತಿದ್ದರು. ಶೇ. 88 ಮಂದಿ ಸಾಮಾಜಿಕ ಅಂತರದ ನಿಯಮ ಪಾಲಿಸಿದರು.

ಏನಿದು ಹಾಂಗ್‌ಕಾಂಗ್‌ ಮಾದರಿ?
ಚೀನ ಹಾಗೂ ಭಾರತದಂತೆ ಲಾಕ್‌ಡೌನ್‌ ಜಾರಿಗೊಳಿಸದೆ, ಕೋವಿಡ್ ಸೋಂಕಿತರನ್ನು ಪರಿಣಾಮಕಾರಿಯಾಗಿ ಪತ್ತೆಹಚ್ಚುವುದು, ಸೋಂಕಿತರ ಸಂಪರ್ಕಕ್ಕೆ ಒಳಗಾದವರ ಕಟ್ಟುನಿಟ್ಟಿನ ಕ್ವಾರೆಂಟೈನ್‌ ಮತ್ತು ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ನಿಯಮದ ಶಿಸ್ತಿನ ಪಾಲನೆ; ರೀತಿಯ ಮೂರು ಅಂಶಗಳ ಕಾರ್ಯಕ್ರಮದ ಮೂಲಕ ಸೋಂಕು ಹರಡುವುದನ್ನು ತಡೆಗಟ್ಟುವುದೇ ಹಾಂಗ್‌ಕಾಂಗ್‌ ಮಾದರಿ.

ಯುಕೆ ಮೂಲದ ದಿ ಲ್ಯಾನ್ಸೆಟ್‌ ವೈದ್ಯಕೀಯ ವಾರಪತ್ರಿಕೆಯ ಏಪ್ರಿಲ್‌ ಎರಡನೇ ವಾರದ ಸಂಚಿಕೆಯಲ್ಲಿ ಪ್ರಕಟವಾಗಿದ್ದ ವಿಶ್ಲೇಷಣೆ ಮೂಲಕ ಜಗತ್ತಿಗೆ ಹಾಂಗ್‌ಕಾಂಗ್‌ ಮಾದರಿ ಪರಿಚಯವಾಯಿತು. ಸರ್ಕಾರದ ಆದೇಶಕ್ಕೆ ಕಾಯದೆ ಸಾರ್ವಜನಿಕರೇ ಸ್ವಯಂಪ್ರೇರಣೆಯಿಂದ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡಿದ್ದು ಈ ಮಾದರಿ ಯಶಸ್ವಿಯಾಗಲು ಪ್ರಮುಖ ಕಾರಣವಾಗಿತ್ತು.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.