ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಅಂಜುಮನ್ ಮನವಿ
Team Udayavani, Apr 30, 2020, 12:51 PM IST
ಹುಬ್ಬಳ್ಳಿ: ಕೋವಿಡ್ 19 ಸೋಂಕಿತನ ಸಹೋದರ ಆಸ್ಪತ್ರೆಯಿಂದ ಬಿಡುಗಡೆಯಾದ ಹಿನ್ನೆಲೆಯಲ್ಲಿ ಆತನನ್ನು ಮುಲ್ಲಾ ಓಣಿಯಲ್ಲಿ ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿ ಸ್ವಾಗತ ಮಾಡಿದ್ದಾರೆ ಎನ್ನಲಾದ ಘಟನೆಯನ್ನು ಅಂಜುಮನ್ ಇಸ್ಲಾಂ ಸಂಸ್ಥೆ ಖಂಡಿಸಿದೆ.
ಈ ಕುರಿತು ಜಂಟಿ ಪತ್ರಿಕಾ ಪ್ರಕಟಣೆ ನೀಡಿರುವ ಅಧ್ಯಕ್ಷ ಮಹ್ಮದ್ ಯೂಸೂಫ್ ಸವಣೂರು ಹಾಗೂ ಉಪಾಧ್ಯಕ್ಷ ಅಲ್ತಾಫ್ ಕಿತ್ತೂರು ಅವರು ಮುಲ್ಲಾ ಓಣಿಯಲ್ಲಿ ನಡೆದಿರುವ ಘಟನೆ ಖಂಡಿಸಿ ತಪ್ಪಿಸ್ಥತರ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ. ಕೋವಿಡ್ 19 ಸೋಂಕಿತ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮುಲ್ಲಾ ಓಣಿಯನ್ನು ಸೀಲ್ಡೌನ್ ಮಾಡಲಾಗಿದೆ. ಇಂತಹ ಸಂದರ್ಭದಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾದ ಸೋಂಕಿತನ ಸಹೋದರನನ್ನು ಗುಂಪಾಗಿ ಸೇರಿ ಸ್ವಾಗತ ಕೋರಿರುವುದು ಸರಕಾರದ ನಿಯಮಗಳ ಉಲ್ಲಂಘನೆಯಾಗಿದೆ. ಮೆರವಣಿಗೆ ಮೂಲಕ ಕರೆದುಕೊಂಡು ಹೋಗುವ ಅಗತ್ಯವಿರಲಿಲ್ಲ. ಮುಲ್ಲಾ ಓಣಿಯಿಂದಲೇ ಕೊರೊನಾ ಸೋಂಕು ಓಡಿಸಿದಂತೆ ಬಿಂಬಿಸಿರುವುದು ಸರಿಯಲ್ಲ. ಸೋಂಕಿತರನ್ನು ರಕ್ಷಿಸಲು ವೈದ್ಯಕೀಯ ಸಿಬ್ಬಂದಿ ಸಾಕಷ್ಟು ಶ್ರಮ ವಹಿಸುತ್ತಿದ್ದಾರೆ. ಇನ್ನೂ ಸೋಂಕು ನಿಯಂತ್ರಣಕ್ಕೆ ಪೊಲೀಸ್, ಪೌರ ಕಾರ್ಮಿಕರು ಹಗಲಿರುಳು ದುಡಿಯುತ್ತಿದ್ದಾರೆ. ಹೀಗಾಗಿ ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದರೆ ಜಿಲ್ಲಾಡಳಿತವೇ ನೇರವಾಗಿ ಮನೆಗೆ ತಲುಪಿಸುವ ಕೆಲಸ ಮಾಡುವ ಮೂಲಕ ಇಂತಹ ಘಟನೆಗಳಿಗೆ ಕಡಿವಾಣ ಹಾಕಬೇಕು ಎಂದು ಜಿಲ್ಲಾಧಿಕಾರಿಗೆ ಮನವಿ ಮಾಡಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು