ಮಹಾರಾಷ್ಟ್ರದಲ್ಲಿ ಸಿಲುಕಿದ ಕಾರ್ಮಿಕರ ಪರದಾಟ

ಇಂಗಳಗೇರಿ-ಭಂಟನೂರಿನ 11 ಕುಟುಂಬಗಳುತವರಿಗೆ ಕರೆಸಿಕೊಳ್ಳಲು ಕಾರ್ಮಿಕರ ಮನವಿ

Team Udayavani, Apr 30, 2020, 1:44 PM IST

30-April-14

ಮುದ್ದೇಬಿಹಾಳ: ಮಹಾರಾಷ್ಟ್ರದ ಉಮರಜದಲ್ಲಿ ಲಾಕ್‌ ಆಗಿ ಪರದಾಡುತ್ತಿರುವ ಮುದ್ದೇಬಿಹಾಳ ತಾಲೂಕಿನ ಕಾರ್ಮಿಕರು

ಮುದ್ದೇಬಿಹಾಳ: ಕೋವಿಡ್ ಲಾಕ್‌ಡೌನ್‌ ನಿಂದಾಗಿ ಮಹಾರಾಷ್ಟ್ರದ ಸಾತಾರ ಜಿಲ್ಲೆಯ ಕರೋಡ ತಾಲೂಕಿನ ಉಮರಜ್‌ ಗ್ರಾಮದಲ್ಲಿ ಮುದ್ದೇಬಿಹಾಳ ತಾಲೂಕಿನ 60 ಜನ ಕೂಲಿ ಕಾರ್ಮಿಕರು ಸಿಕ್ಕಿಕೊಂಡಿದ್ದಾರೆ. ಇವರು ಕೆಲಸ ಇಲ್ಲದೆ, ಇದ್ದ ಹಣವೂ ಖಾಲಿ ಆಗಿದ್ದರಿಂದ ತುತ್ತು ಅನ್ನಕ್ಕೂ ಪರದಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಕರ್ನಾಟಕ-ಮಹಾರಾಷ್ಟ್ರ ಗಡಿಗೆ ಹತ್ತಿರ ಇರುವ ಉಮರಜ್‌ಗೆ 4-5 ತಿಂಗಳ ಹಿಂದೆ ಮುದ್ದೇಬಿಹಾಳ ತಾಲೂಕಿನ ಇಂಗಳಗೇರಿ, ತಾಳಿಕೋಟೆ ತಾಲೂಕಿನ ಭಂಟನೂರ ಗ್ರಾಮದ 11 ಕುಟುಂಬಗಳ ಮಕ್ಕಳು, ಮಹಿಳೆಯರು ಸೇರಿ ಸುಮಾರು 60 ಜನರು ಕೂಲಿ ಅರಸಿ ಹೋಗಿದ್ದರು. ಅಲ್ಲಿನ ಇಟ್ಟಂಗಿ ಭಟ್ಟಿಯಲ್ಲಿ ಇವರಿಗೆ ಕೆಲಸ ಸಿಕ್ಕಿತ್ತು. ಅಲ್ಲೇ ಗುಡಿಸಲು ಹಾಕಿಕೊಂಡು ಕುಟುಂಬ ಸಮೇತ ವಾಸವಾಗಿದ್ದರು. ಲಾಕ್‌ಡೌನ್‌ನಿಂದಾಗಿ ಇಟ್ಟಂಗಿ ಭಟ್ಟಿ ಬಂದ್‌ ಆಗಿದೆ. ಕೆಲ ದಿನ ಹೇಗೋ ಕಾಲ ಕಳೆದರು. ಬಳಿಕ ಲಾಕ್‌ ಡೌನ್‌ ವಿಸ್ತರಣೆ ಆಗಿದ್ದು, ಇವರ ಪಾಲಿಗೆ ಶಾಪವಾಗಿ ಪರಿಣಮಿಸಿತು. ಗ್ರಾಮದ ಹೊಲವೊಂದರಲ್ಲಿ ವಾಸವಾಗಿದ್ದಾರೆ. ಅಲ್ಲಿನ ತಾಲೂಕಾಡಳಿತ, ಜಿಲ್ಲಾಡಳಿತ ತಮ್ಮ ಸಮಸ್ಯೆ, ಕೂಗು ಪರಿಗಣಿಸುತ್ತಲೇ ಇಲ್ಲ ಎಂದು ಹಲವರು ದೂರವಾಣಿ ಮೂಲಕ ಇಲ್ಲಿನ ತಮ್ಮ ಬಂಧುಗಳ ಬಳಿ ಸಂಕಟ ಹಂಚಿಕೊಂಡಿದ್ದಾರೆ.

ಇಂಗಳಗೇರಿಯ ಬಸಪ್ಪ ನಡುವಿನಮನಿ, ಹನುಮಂತ ಮೇಲಿನಮನಿ, ಶಿವಪ್ಪ ನಡುವಿನಮನಿ, ಸದಾಶಿವಪ್ಪ ಮಾದರ, ಶರಣಪ್ಪ ರತ್ನಾಗಿರಿ, ಮಲಿಕಸಾಬ್‌ ಜಮಾದಾರ, ಭಾಷಾಸಾಬ್‌
ಜಮಾದಾರ ಕುಟುಂಬಗಳ 38 ಜನ, ಭಂಟನೂರಿನ ಸಿದ್ದನಗೌಡ ಸಾಸನೂರ, ಬಾಲಪ್ಪ ರತ್ನಾಗಿರಿ, ಜಟ್ಟೆಪ್ಪ ತಳವಾರ, ಬಸವರಾಜ ಪಾಲ್ಕೇಕರ್‌ ಕುಟುಂಬಗಳ 18 ಜನ ಸಹಿತ ಮಹಿಳೆಯರು, ಮಕ್ಕಳು ಸೇರಿ ಒಟ್ಟು 56 ಜನರು ತೀವ್ರ ಸಂಕಷ್ಟದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.