ಕುಟುಂಬ ಆರೋಗ್ಯ ಸಮೀಕ್ಷೆ ಕಾರ್ಯಕ್ಕೆ ಸಹಕರಿಸಲು ಮನವಿ
Team Udayavani, Apr 30, 2020, 4:30 PM IST
ಬಳಗಾನೂರು: ಪಪಂ ಪ್ರಭಾರಿ ಮುಖ್ಯಾಧಿಕಾರಿ, ನೋಡಲ್ ಅಧಿಕಾರಿ ರಡ್ಡಿ ರಾಯನಗೌಡ ಆರೋಗ್ಯ ಸಮೀಕ್ಷೆ ಕುರಿತು ಮಾಹಿತಿ ಪಡೆದರು.
ಬಳಗಾನೂರು: ಕೋವಿಡ್ 19 ನಿಯಂತ್ರಿಸಲು ಪರಿಣಾಮಕಾರಿ ಮಾರ್ಗವಾಗಿರುವ ಕುಟುಂಬ ಆರೋಗ್ಯ ಸಮೀಕ್ಷೆಗಾಗಿ ಮತಗಟ್ಟೆ ಅಧಿಕಾರಿಗಳಾದ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತರು ಮನೆಗೆ ಭೇಟಿ ನೀಡಿದಾಗ ಕುಟುಂಬದ ಸದಸ್ಯರ ಸಂಪೂರ್ಣ ವಿವರ ಮತ್ತು ಆರೋಗ್ಯ ಸ್ಥಿತಿಗಳಿಗಳ ಬಗ್ಗೆ ಮಾಹಿತಿ ನೀಡಿ ಸಹಕರಿಸಿ ಎಂದು ಪಪಂ ಪ್ರಭಾರಿ ಮುಖ್ಯಾಧಿಕಾರಿ, ನೋಡಲ್ ಅಧಿಕಾರಿ ರಡ್ಡಿ ರಾಯನಗೌಡ ಹೇಳಿದರು.
ಪಟ್ಟಣದ 4ನೇ ವಾರ್ಡ್ಗೆ ಬುಧವಾರ ಭೇಟಿ ನೀಡಿದ ಅವರು ಮತಗಟ್ಟೆ ಅಧಿಕಾರಿಗಳು ನಡೆಸುವ ಕುಟುಂಬ ಆರೋಗ್ಯ ಸಮೀಕ್ಷಾ ವರದಿ ಮಾಡುವುದರ ಕುರಿತು ಮಾಹಿತಿ ಪಡೆದುಕೊಂಡು ಮಾತನಾಡಿದ ಅವರು, ಮತದಾರ ಪಟ್ಟಿಯಂತೆ ಮನೆ ಯಜಮಾನನ ಹೆಸರು, ವಯಸ್ಸು, ಮನೆ ಸಂಖ್ಯೆ, ವಿಳಾಸ, 60 ವರ್ಷ ಮೇಲ್ಪಟ್ಟವರ ಸಂಖ್ಯೆ, ಅವರಿಗಿರುಬಹುದಾದ ಖಾಯಿಲೆಗಳ ಮಾಹಿತಿ, ಗರ್ಭಿಣಿಯರ ಮಾಹಿತಿ ಮತ್ತು ಇತರರಿಗೆ ನೆಗಡಿ, ಕೆಮ್ಮು, ಉಸಿರಾಟದ ರೋಗ ಲಕ್ಷಣಗಳಿರು ಕುರಿತು ಸರಿಯಾಗಿ ಮಾಹಿತಿ ನೀಡುವಂತೆ ಮನವಿ ಮಾಡಿದರು. ಮತಗಟ್ಟೆ ಅಧಿಕಾರಿ ಸಿದರಾಯ, ಬಿರಾದಾರ, ಪಪಂ ಸದಸ್ಯರಾದ ಮುದುಕಪ್ಪ ಮುಖಂಡ ಅಮರೇಶ ಲಡ್ಡಿನ, ಎಸ್ಡಿಎ ತಿರುಪತಿ, ಪಂಪಾಪತಿ ನಾಯಕ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್
Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್ ವಂಚನೆ: ನಾರಾಯಣಸ್ವಾಮಿ
Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…