ಸಡಿಲಿಕೆ ಮಾಡಿದ್ರೂ ಅಂಗಡಿ ತೆರೆಯುತ್ತಿಲ್ಲ!

ಅಂಗಡಿ ತೆರೆಯಲು ಅನುಮತಿ ನೀಡಿಲ್ಲ ; ತರಕಾರಿ , ಹಣ್ಣಿನ ವ್ಯಾಪಾರ ಎಂದಿನಂತೆ

Team Udayavani, Apr 30, 2020, 5:10 PM IST

ಸಡಿಲಿಕೆ ಮಾಡಿದ್ರೂ ಅಂಗಡಿ ತೆರೆಯುತ್ತಿಲ್ಲ!

ಸಾಂದರ್ಭಿಕ ಚಿತ್ರ

ಕೋಲಾರ: ಲಾಕ್‌ಡೌನ್‌ ನಿಯಮಗಳ ಸಡಿಲಿಕೆಯಾಗಿದ್ದರಿಂದ ಜಿಲ್ಲಾ ಕೇಂದ್ರ ಕೋಲಾರದಲ್ಲಿ ಬುಧವಾರ ಹಲವಾರು ವ್ಯಾಪಾರಿಗಳು ಬೆಳಗ್ಗಿಯೇ ಅಂಗಡಿ ತೆರೆಯಲು ಮುಂದಾದರು. ಆದರೆ, ಪೊಲೀಸರು ಇದಕ್ಕೆ ಅವಕಾಶ ನೀಡಲಿಲ್ಲ. ಮಧ್ಯಾಹ್ನದವರೆಗೂ ಕೆಲವು ವ್ಯಾಪಾರಿಗಳು ತಮ್ಮ ಅಂಗಡಿಗಳ ಮುಂದೆಯೇ  ನಿಂತು ಕಾದು ಪೊಲೀಸ್‌ ಬಂದೋಬಸ್ತ್ ಕಂಡು ವಾಪಸ್‌ ಹೋದರು. ಕೆಲವರು ಅರ್ಧ ಬಾಗಿಲು ಅಂಗಡಿ ತೆರೆದು ಸ್ವಚ್ಛತಾ ಕಾರ್ಯ ನಡೆಸಿದರು.

ನಗರದ ಎಂ.ಜಿ.ರಸ್ತೆಯಲ್ಲಿ ಮಧ್ಯಾಹ್ನದ ವೇಳೆಗೆ ಬಹುತೇಕ ಲಾಕ್‌ಡೌನ್‌ ದೃಶ್ಯವೇ ಕಂಡು ಬಂದಿತು. ಎಂದಿನಂತೆ ಹಣ್ಣು, ಹಾಲು, ತರಕಾರಿ, ದಿನಸಿ ಅಂಗಡಿ, ಹಾರ್ಡ್ ವೇರ್‌ ಅಂಗಡಿಗಳು ತೆರೆದಿದ್ದು ಕಂಡು ಬಂದಿತು. ಬುಧವಾರದಿಂದ ಪ್ರಭಾತ್‌ ಚಿತ್ರಮಂದಿರ ಸಮೀಪದಲ್ಲಿ 40ಕ್ಕೂ ಹೆಚ್ಚು ಜೆರಾಕ್ಸ್‌ ಮತ್ತು ಕಂಪ್ಯೂಟರ್‌ ಅಂಗಡಿಗಳ ಪೈಕಿ ಮೂರು 4 ಅಂಗಡಿಗಳನ್ನು ಮಾತ್ರವೇ ತೆರೆಯಲಾಗಿತ್ತು.

ಕೈಗಾರಿಕೆಗಳಿಗೆ ಅನುಮತಿ: ಕೋಲಾರ ನಗರ ಸಭೆ ವ್ಯಾಪ್ತಿಗೊಳಪಡದ ಹೊರ ವಲಯದಲ್ಲಿರುವ ಕೈಗಾರಿಕೆಗಳನ್ನು ತೆರೆಯಲು ಅನುಮತಿ ಸಲಾಗಿದೆ ಈ ಬಗ್ಗೆ ಡಿ.ಸಿ. ನೇತೃತ್ವದಲ್ಲಿ ಸಭೆ ನಡೆದು ಮಾರ್ಗ ಸೂಚಿ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ನರಸಾಪುರ, ವೇಮಗಲ್‌ ಪ್ರದೇಶದ ಕೈಗಾರಿಕೆ ತೆರೆಯಲು ಮಾಲಿಕರು ಸಿದ್ಧತೆ ನಡೆಸುತ್ತಿದ್ದು, ಒಂದರೆಡು ದಿನಗಳಲ್ಲಿ ತೆರೆಯಲಾಗುತ್ತಿದೆ. ಆಹಾರ ಸಂಸ್ಕರಣೆ ಕೈಗಾರಿಕೆಗಳು ಕಾರ್ಯ ನಿರ್ವಹಿಸುತ್ತಿವೆ.

ಹೋಟೆಲ್‌ – ಸಾರಿಗೆ: ಹಿಂದಿನ ನಿರ್ಧಾರದಂ ತೆಯೇ ಕೆಲವು ಹೋಟೆಲ್‌ಗಳಲ್ಲಿ ಪಾರ್ಸಲ್‌ಗ‌ಳಿಗಷ್ಟೇ ಅನುಮತಿಸಲಾಗಿದ್ದು, ಇದೇ ಪದ್ಧತಿ ಬುಧವಾರವೂ ಮುಂದುವರಿಯಿತು. ಸಾರಿಗೆ ಸಂಸ್ಥೆಯ ಮತ್ತು ಖಾಸಗಿ ಬಸ್‌ ಕಾರು ಆಟೋಗಳಿಗೆ ಅನುಮತಿ ನೀಡಿಲ್ಲ.

ಮುಂಜಾನೆ ಕೆಲ ಅಂಗಡಿಗಳನ್ನು ಪೊಲೀಸರು ಮುಚ್ಚಿಸಿದ್ದರಿಂದ ವರ್ತಕರು ಸಾಮೂಹಿಕವಾಗಿ ಅಂಗಡಿ ತೆರೆಯುವ ಪ್ರಯತ್ನ ಮಾಡಿಲ್ಲ.
●ಎಸ್‌.ಸಚ್ಚಿದಾನಂದ, ಎಂ.ಜಿ.ರಸ್ತೆ ವರ್ತಕ

ಷರತ್ತು ಮೇರೆಗೆ ಹೊರ ವಲಯದ ಕೈಗಾರಿಕೆ ತೆರೆಯಲು ಅನುಮತಿಸಲಾಗಿದೆ. ಆಹಾರ ಸಂಸ್ಕರಣಾ ಕೈಗಾರಿ ಕೆಗಳು ತೆರೆದಿದ್ದು, ಇನ್ನುಳಿದವು ನಿಯಮಾವಳಿಗಳ ಪ್ರಕಾರ
ತೆರೆಯಲು ಸಿದ್ಧತೆ ನಡೆಯುತ್ತಿದೆ.
●ರವಿಚಂದ್ರ, ಉಪ ನಿರ್ದೇಶಕರು, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ.

ಲಾಕ್‌ಡೌನ್‌ ಸಡಿಲಿಕೆಯಿಂದಾಗಿ ಅಂಗಡಿ ಮುಂಗಟ್ಟು ತೆರೆಯಬಹುದಾಗಿದೆ. ಆದರೂ, ಬುಧವಾರ ಸಂಜೆ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌ ಹಾಗೂ ಡಿ.ಸಿ. ಸತ್ಯಭಾಮ ನೀಡುವ ನಿರ್ದೇಶನಗಳ ಮೇರೆಗೆ ವ್ಯಾಪಾರ ವಹಿವಾಟು ಆರಂಭವಾಗಬಹುದು.
●ಶ್ರೀಕಾಂತ್‌, ಪೌರಾಯುಕ್ತ, ನಗರಸಭೆ ಕೋಲಾರ.

●ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.