ಕೈಗಾರಿಕೆ ಪುನರಾರಂಭಕ್ಕೆ ಸಿದ್ಧತೆ ನಡೆಸಿ: ಕೈಗಾರಿಕೋದ್ಯಮಿಗಳಿಗೆ ಬಿಎಸ್ ವೈ ಸಲಹೆ
Team Udayavani, Apr 30, 2020, 6:17 PM IST
ಬೆಂಗಳೂರು: ಕೇಂದ್ರ ಸರಕಾರದಿಂದ ಕೈಗಾರಿಕೆಗಳ ಪುನರಾರಂಭಕ್ಕೆ ಕುರಿತ ಮಾರ್ಗಸೂಚಿಗಳನ್ನು ಮೇ 4ರ ನಂತರ ನಿರೀಕ್ಷಿಸಲಾಗುತ್ತಿದ್ದು, ಅದರಂತೆ ಕೈಗಾರಿಕೆಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೈಗಾರಿಕೋದ್ಯಮಿಗಳಿಗೆ ಸಲಹೆ ನೀಡಿದರು.
ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯದಲ್ಲಿ ಆರ್ಥಿಕ ಚಟುವಟಿಕೆಗಳನ್ನು ಪುನರಾರಂಭಿಸುವ ನಿಟ್ಟಿನಲ್ಲಿ ವಿವಿಧ ವಾಣಿಜ್ಯೋದ್ಯಮ ಸಂಘಟನೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಚರ್ಚಿಸಿದರು.
ಸಭೆಯಲ್ಲಿ ತಮ್ಮ ಅಭಿಪ್ರಾಯಗಳನ್ನು, ಸಲಹೆಗಳನ್ನು ನೀಡಿದ ಉದ್ಯಮಿಗಳು, ರಾಜ್ಯದಲ್ಲಿ ಕೋವಿಡ್ 19 ನಿಯಂತ್ರಣ ನಿರ್ವಹಣೆಗೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಅವರ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿಗಳು, ಕಳೆದ ಒಂದು ತಿಂಗಳ ಅವಧಿಯಲ್ಲಿ ಕೈಗಾರಿಕೋದ್ಯಮಿಗಳೂ ಸಂಕಷ್ಟಕ್ಕೆ ಒಳಗಾಗಿರುವುದು ಸರ್ಕಾರಕ್ಕೆ ಅರಿವಿದೆ. ಆದರೆ ಕಾರ್ಖಾನೆಗಳ ಮಾಲೀಕರು, ಕಾರ್ಮಿಕರ ವೇತನವನ್ನು ತಪ್ಪದೆ ಪಾವತಿಸುವಂತೆ ಮನವಿ ಮಾಡಿದರು.
ಅಲ್ಲದೆ, ಕಾರ್ಖಾನೆಗಳಲ್ಲಿ ಕಾರ್ಮಿಕರು/ ಸಿಬ್ಬಂದಿಯ ಸುರಕ್ಷತೆಗೆ ಆದ್ಯತೆ ನೀಡಬೇಕು ಹಾಗೂ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಮತ್ತಿತರ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಸೂಚಿಸಿದರು.
ರಾಜ್ಯದಲ್ಲಿ ಈಗಾಗಲೇ ಹಸಿರು ವಲಯಗಳಲ್ಲಿ ಕೈಗಾರಿಕೆ ಪ್ರಾರಂಭಕ್ಕೆ ಅನುಮತಿ ನೀಡಲಾಗಿದೆ. ಮೇ 4 ರ ನಂತರ ಕೇಂದ್ರ ಸರ್ಕಾರದಿಂದ ಬರುವ ಮಾರ್ಗಸೂಚಿಗಳ ನಿರೀಕ್ಷಿಸಲಾಗುತ್ತಿದೆ. ಮಾರ್ಗಸೂಚಿಯ ಅನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ನಿಮ್ಮೆಲ್ಲರ ಸಮಸ್ಯೆಗಳನ್ನು ಸರ್ಕಾರ ಸಹಾನುಭೂತಿಯಿಂದ ಪರಿಶೀಲಿಸಲಿದೆ. ಬೇಡಿಕೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ಸರ್ಕಾರದ ಇತಿ ಮಿತಿಯಲ್ಲಿ ಸಾಧ್ಯವಾದಷ್ಟು ಸ್ಪಂದಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ, ಕಾರ್ಖಾನೆ ಮಾಲೀಕರು, ಕೆಲಸಗಾರರ ದುಡಿಮೆಯ ಅವಧಿ ಹೆಚ್ಚಳಕ್ಕೆ ಮನವಿ ಸಲ್ಲಿಸಿದಲ್ಲಿ ಕಾರ್ಮಿಕ ಇಲಾಖೆಯಿಂದ ಅನುಮತಿ ನೀಡಲಾಗುತ್ತಿದೆ ಎಂದು ಸ್ಪಷ್ಟನೆ ನೀಡಲಾಯಿತು.
ಸಭೆಯಲ್ಲಿ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ, ಕಾರ್ಮಿಕ ಸಚಿವ ಅರಬೈಲ್ ಶಿವರಾಮ ಹೆಬ್ಬಾರ್, ಎಫ್ ಕೆ ಸಿ ಸಿ ಐ, ಸಣ್ಣ ಕೈಗಾರಿಕೆಗಳ ಸಂಘ, ಫಿಕ್ಕಿ, ಸಿಐಐ, ಅವೇಕ್, ಅಸೋಚಾಂ, ಬಿಸಿಐಸಿ, ಮಹಿಳಾ ಉದ್ಯಮಿಗಳ ಒಕ್ಕೂಟ ಮತ್ತಿತರ ಸಂಘಟನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ