ಕಲಬುರಗಿಯಲ್ಲಿ ಮತ್ತಿಬ್ಬರು ಕೋವಿಡ್-19 ಸೋಂಕಿತರು ಗುಣಮುಖ; ಆಸ್ಪತ್ರೆಯಿಂದ ಬಿಡುಗಡೆ
Team Udayavani, May 1, 2020, 11:49 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿರುವ ನಡುವೆಯೂ ಮಹಾಮಾರಿ ಸೋಂಕಿನಿಂದ ರೋಗಿಗಳು ಗುಣಮುಖರಾಗುತ್ತಿದ್ದು, ನಾಗರಿಕರು ತುಸು ಸಮಾಧಾನ ಪಡುವಂತೆ ಆಗಿದೆ.
ಹೌದು, ದೇಶದಲ್ಲೇ ಮೊದಲ ಕೋವಿಡ್ ಸಾವಿನ ಆಘಾತ ಅನುಭವಿಸಿದ್ದೇ ಕಲಬುರಗಿ ಜನತೆ. ನಂತರದಲ್ಲಿ ಹೆಮ್ಮಾರಿ ಸೋಂಕು ಸ್ವಲ್ಪ ನಿಯಂತ್ರಣಕ್ಕೂ ಬಂದಿತ್ತು.
ಆದರೆ, ಕಳೆದ 20 ದಿನಗಳಲ್ಲಿ 45 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಭೀತಿ ಹೆಚ್ಚಾಗುವಂತೆ ಮಾಡಿದೆ. ಇದೇ ವೇಳೆ ಗುಣಮುಖರಾಗಿ 12 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಶುಕ್ರವಾರ ಕಲಬುರಗಿ ನಗರದ ಇಬ್ಬರು ಕೋವಿಡ್ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಮೋಮಿನಪುರ ಪ್ರದೇಶದ 51 ವರ್ಷದ ಪುರುಷ (ಪಿ-255) ಮತ್ತು ಸಂತ್ರಾಸವಾಡಿ ಪ್ರದೇಶದ 35 ವರ್ಷದ ಮಹಿಳೆ (ಪಿ-256) ಸೋಂಕು ಮುಕ್ತರಾಗಿದ್ದಾರೆ. ಇವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ ತಿಳಿಸಿದ್ದಾರೆ.
51 ವರ್ಷದ ವ್ಯಕ್ತಿ ಮೃತ 55 ವರ್ಷದ ಬಟ್ಟೆ ವ್ಯಾಪಾರಿ ಸಹೋದರನಾಗಿದ್ದು, ಏ.14ರಂದು ಸೋಂಕು ದೃಢವಾಗಿತ್ತು. ಅದೇ ರೀತಿ ಮಹಿಳೆಗೆ ಮೃತ 65 ವರ್ಷದ ಹಣ್ಣಿನ ವ್ಯಾಪಾರಿಯಿಂದ ಸೋಂಕು ಹರಡಿತ್ತು. ಈಕೆಗೂ ಏ.14ರಂದು ಸೋಂಕು ಖಚಿತವಾಗಿತ್ತು.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 55 ಜನರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ಇದರಲ್ಲಿ 14 ಜನ ರೋಗಿಗಳು ಸೋಂಕಿನಿಂದ ಗುಣಮುಖರಾದಂತೆ ಆಗಿದೆ. ಉಳಿದಂತೆ ಐವರು ಸೋಂಕಿಗೆ ಬಲಿಯಾಗಿದ್ದು, ಇನ್ನೂ 36 ಜನ ಸೋಂಕಿತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ