ಕ್ವಾರಂಟೈನ್ ವಿರೋಧಿಸಿದವರಿಗೆ ಲಾಠಿ ರುಚಿ
Team Udayavani, May 2, 2020, 11:25 AM IST
ದಾವಣಗೆರೆ: ಶಾಂತಿನಗರ ಹಾಸ್ಟೆಲ್ ಬಳಿ ಜಮಾವಣೆಗೊಂಡಿದ್ದ ಜನರನ್ನು ಪೊಲೀಸರು ಚದುರಿಸಿದರು.
ದಾವಣಗೆರೆ: ಹಾಸ್ಟೆಲ್ನಲ್ಲಿ ಕ್ವಾರಂಟೈನ್ ಗೆ ಶಾಂತಿನಗರದ ಹಾಸ್ಟೆಲ್ ಬಳಿ ಶುಕ್ರವಾರ ಪ್ರತಿಭಟನೆ ನಡೆಸುತ್ತಿದ್ದವರನ್ನು ಪೊಲೀಸರು ಲಾಠಿ ರುಚಿ ತೋರಿಸಿ ಚದುರಿಸಿದ ಘಟನೆ ನಡೆದಿದೆ. ಶಾಂತಿನಗರದ ಹಾಸ್ಟೆಲ್ನಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಪರ್ಕದಲ್ಲಿ ಇದ್ದವರನ್ನು ಕ್ವಾರಂಟೈನ್ ಮಾಡಲಾಗುತ್ತಿದೆ ಎಂದು ಜಮಾವಣೆಗೊಂಡಿದ್ದ ಜನರು ಆರೋಪಿಸಿದರು.
ಈ ಭಾಗದಲ್ಲಿ ಯಾರನ್ನೂ ಯಾವುದೇ ಕಾರಣಕ್ಕೂ ಕ್ವಾರಂಟೈನ್ ಮಾಡಬಾರದು. ಹಾಗೆ ಮಾಡುವುದರಿಂದ ನಮ್ಮ ಭಾಗಕ್ಕೂ ವೈರಸ್ ಹರಡಬಹುದು ಎಂದು ತಿಳಿಸಿದರು. ಹಾಸ್ಟೆಲ್ನಲ್ಲಿ ಯಾರನ್ನೂ ಕ್ವಾರಂಟೈನ್ ಮಾಡಲಾಗುತ್ತಿಲ್ಲ. ಆಶಾ ಕಾರ್ಯಕರ್ತೆಯರು ಮತ್ತು ಇತರರಿಗೆ ಆಹಾರ ತಯಾರಿಸಿ, ಇಲ್ಲಿಂದ ತೆಗೆದುಕೊಂಡು ಹೋಗಲಾಗುತ್ತದೆ ಎಂದು ಅಧಿಕಾರಿಗಳು ಮನವರಿಕೆ ಮಾಡಿಕೊಟ್ಟರು. ಹಾಸ್ಟೆಲ್ನಲ್ಲಿ ಅಡುಗೆ ಮಾಡುವುದು, ಸಾಮಾನುಗಳನ್ನು ಚೆಲ್ಲುವುದರಿಂದ ವೈರಸ್ ಹರಡಬಹುದು. ಹಾಗಾಗಿ ಇಲ್ಲಿ ಏನನ್ನೂ ಮಾಡಲೇಕೂಡದು ಎಂದು ನೆರೆದಿದ್ದಂತಹ ಜನರು ಪಟ್ಟು ಹಿಡಿದರು.
ಅಧಿಕಾರಿಗಳು ಎಷ್ಟೇ ಮನವರಿಕೆ ಮಾಡಿಕೊಟ್ಟರೂ ಜನರು ಒಪ್ಪಲೇ ಇಲ್ಲ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು, ಹಾಸ್ಟೆಲ್ನಲ್ಲಿ ಅಡುಗೆ ಮಾತ್ರವೇ ಮಾಡಲಾಗುತ್ತದೆ. ಯಾರನ್ನೂ ಕ್ವಾರಂಟೈನ್ ಮಾಡಲಾಗುತ್ತಿಲ್ಲ ಎಂದು ಹಲವಾರು ಬಾರಿ ಮನವರಿಕೆ ಮಾಡಿಕೊಟ್ಟರೂ ಜನರು ಪಟ್ಟು ಸಡಿಲಿಸಲೇ ಇಲ್ಲ. ಕೊನೆಗೆ ಪೊಲೀಸರು ಲಾಠಿ ರುಚಿ ತೋರಿಸಿ ಜನರನ್ನ ಚದುರಿಸಿದರು. ಈ ಸಂದರ್ಭದಲ್ಲಿ ಲಕ್ಷ್ಮಣ ಎಂಬಾತನ ಕೈಗೆ ಗಾಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ
Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು
Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ
MUST WATCH
ಹೊಸ ಸೇರ್ಪಡೆ
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!