ನರೇಗಾ ಸದ್ಬಳಕೆ ಮಾಡಿಕೊಳ್ಳಿ
Team Udayavani, May 2, 2020, 1:56 PM IST
ಭಾಲ್ಕಿ: ಜೋಳದಾಪಕಾ ಗ್ರಾಮದಲ್ಲಿ ನಡೆದ ನರೇಗಾ ಕಾಮಗಾರಿಯನ್ನು ಶಾಸಕ ಈಶ್ವರ ಖಂಡ್ರೆ ವೀಕ್ಷಿಸಿದರು.
ಭಾಲ್ಕಿ: ಲಾಕ್ಡೌನ್ ನಂತಹ ಸಂಕಷ್ಟದ ಸಮಯದಲ್ಲಿ ಆರ್ಥಿಕವಾಗಿ ಸಮಸ್ಯೆ ಎದುರಿಸುತ್ತಿರುವ ಕೂಲಿ ಕಾರ್ಮಿಕರಿಗೆ ನರೇಗಾದಡಿ ಕೆಲಸ ನೀಡಲಾಗುತ್ತಿದೆ. ಎಲ್ಲರೂ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.
ತಾಲೂಕಿನ ಜೋಳದಾಪಕಾ, ಜ್ಯಾಂತಿ, ರುದನೂರ, ಹಾಲಹಳ್ಳಿ(ಕೆ), ತೇಗಂಪುರ ಗ್ರಾಮಗಳಿಗೆ ಭೇಟಿ ನೀಡಿ ನರೇಗಾದಡಿ ನಡೆಯುತ್ತಿರುವ ನಾಲಾ ಟರ್ನಿಂಗ್, ಕ್ಷೇತ್ರಬದು ನಿರ್ಮಾಣ, ಕೆರೆ ಸೇರಿ ವಿವಿಧ ಕಾಮಗಾರಿ ವೀಕ್ಷಿಸಿದ ಬಳಿಕ ಮಾತನಾಡಿದ ಅವರು, ಕೋವಿಡ್ 19 ಸೋಂಕು ಹರಡುವಿಕೆ ಭೀತಿಯಿಂದ ವಿಶ್ವವೇ ತಲ್ಲಣಗೊಂಡಿದೆ. ಈ ಸಾಂಕ್ರಾಮಿಕ ರೋಗ ನಿಯಂತ್ರಿಸಲು ಇಡೀ ದೇಶವೇ ಲಾಕ್ಡೌನ್ ಆಗಿದೆ. ಇಂತಹ ತುರ್ತು ಸಂದರ್ಭದಲ್ಲಿ ಕೂಲಿ ಕಾರ್ಮಿಕರು, ಬಡ ಜನರು ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ. ಯಾರೊಬ್ಬರು ಧೈರ್ಯ ಕಳೆದು ಕೊಳ್ಳಬಾರದು ನಿಮ್ಮೊಂದಿಗೆ ನಾನಿದ್ದೇನೆ. ಕೋವಿಡ್ ರೋಗದ ಬಗ್ಗೆ ಭಯ ಬೇಡ. ಆದರೆ ಎಚ್ಚರದಿಂದ ಇರಬೇಕು. ಈಗಾಗಲೇ ಅಗತ್ಯ ಇರುವ ಕಡೆಗಳಲ್ಲಿ ಆಹಾರದ ಪೊಟ್ಟಣ, ತರಕಾರಿ ಕಿಟ್, ಮಾಸ್ಕ್ ಸೇರಿ ಪ್ರತಿಯೊಬ್ಬರಿಗೂ ಎರಡು ತಿಂಗಳ ಮುಂಗಡ ಪಡಿತರ ನೀಡುವುದು, ಕುಡಿಯುವ ನೀರು ಪೂರೈಕೆ ಸೇರಿದಂತೆ ಅಗತ್ಯ ಕ್ರಮ ಕೈಗೊಂಡಿದ್ದು, ಸಮಾರೋಪಾದಿಯಲ್ಲಿ ಎಲ್ಲ ಕಾರ್ಯಗಳು ನಡೆಯುತ್ತಿವೆ ಎಂದು ಹೇಳಿದರು.
ನರೇಗಾದಡಿ ಒಬ್ಬರಿಗೆ ದಿನವೊಂದಕ್ಕೆ 275 ರೂ. ಯಂತೆ ಒಂದು ಪರಿವಾರಕ್ಕೆ ಕನಿಷ್ಠ 50 ದಿನ ಕೆಲಸ ನೀಡುವಂತೆ ಸೂಚನೆ ನೀಡಲಾಗಿದೆ. ಅದರಂತೆ ಎಲ್ಲ ಪಂಚಾಯಿತಿ ವ್ಯಾಪ್ತಿಗಳಲ್ಲಿ ನರೇಗಾದಡಿ ಕೆಲಸ ಪ್ರಾರಂಭವಾಗಿದೆ. ವಾರಕ್ಕೊಮ್ಮೆ ಕೂಲಿ ಕಾರ್ಮಿಕರ ಖಾತೆಗೆ ನೇರವಾಗಿ ಹಣ ಜಮಾ ಆಗಲಿದೆ. ಯಾರು ಭಯ ಪಡಬೇಕಿಲ್ಲ ಎಂದು ಹೇಳಿದರು. ತಹಶೀಲ್ದಾರ್ ಅಣ್ಣಾರಾವ ಪಾಟೀಲ, ತಾಪಂ ಕಾರ್ಯನಿರ್ವಾಹಕ ಅ ಧಿಕಾರಿ ಬಸವರಾಜ ನಾಯಕರ್, ಡಿವೈಎಸ್ಪಿ ಡಾ| ದೇವರಾಜ ಬಿ., ಗ್ರಾಪಂ ಅಧ್ಯಕ್ಷ ರವೀಂದ್ರ ಪಾಟೀಲ, ಶಶಿಧರ ಕೋಸಂಬೆ, ಪಿಕೆಪಿಎಸ್ ಅಧ್ಯಕ್ಷ ರಾಜಕುಮಾರ ಬಿರಾದಾರ, ವೈಜಿನಾಥ ಪಾಟೀಲ, ಬಸವರಾಜ ಪಾಟೀಲ, ಚಂದ್ರಕಾಂತ ಜ್ಯೊತೇಪ್ಪ, ಸಂಜು ಡೋಳಿ, ಶಿವ ಸದಾಶಿವ, ಸಂತೋಷ ಪಾಟೀಲ, ಮಲ್ಲಿಕಾರ್ಜುನ ಪ್ರಭಾ, ರಮೇಶ ಪ್ರಭಾ, ಧನರಾಜ ಪಾಟೀಲ, ಸಂಜು ಪ್ರಭಾ, ರಾಜು ಕುಂಬಾರ, ಸತೀಶ ಮಡಿವಾಳ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ