ಬಡವರಿಗೆ ಆಹಾರ ಧಾನ್ಯ ಸಂಗ್ರಹ: ಅನ್ನ ದಾಸೋಹವೂ ಮುಂದುವರಿಯುತ್ತೆ: ಶಾಸಕ ತಮ್ಮಣ್ಣ
Team Udayavani, May 2, 2020, 2:56 PM IST
ಸಾಂದರ್ಭಿಕ ಚಿತ್ರ
ಭಾರತೀನಗರ: ಲಾಕ್ಡೌನ್ನಿಂದ ಸಂಕಷ್ಟದಲ್ಲಿರುವ ರೈತರಿಂದ ನೇರವಾಗಿ ತರಕಾರಿ ಖರೀದಿಸಿ ಬಡವರಿಗೆ ಉಚಿತವಾಗಿ ವಿತರಿಸಲಾಗುವುದು ಎಂದು ಶಾಸಕ ಡಿ.ಸಿ.ತಮ್ಮಣ್ಣ ಹೇಳಿದರು.
ಭಾರತೀನಗರದ ತಮ್ಮ ನಿವಾಸದಲ್ಲಿ ಬಡವರಿಗೆ ನೀಡಲು ಅಕ್ಕಿ, ಎಣ್ಣೆ, ಬೇಳೆ, ತರಕಾರಿ ಸೇರಿದಂತೆ ಆಹಾರ ಧಾನ್ಯ ಸಂಗ್ರಹಿಸಿರುವ ಕೊಠಡಿಗಳನ್ನು ವೀಕ್ಷಿಸಿ
ಮಾತನಾಡಿ, ಕ್ಷೇತ್ರದ ರೈತರು ಯಾವ ಆತಂಕಕ್ಕೂ ಒಳಗಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಬೆಳೆಗಳ ಮಾರಾಟಕ್ಕೆ ಸೂಕ್ತ ಕ್ರಮ ಕೈಗೊಂಡಿದ್ದು, ಮಾರಾಟವಾ ಗದೆ ಉಳಿದಿರುವಂತಹ ತರಕಾರಿಗಳನ್ನು ನಾವೇ ಖರೀದಿಸಿ ಬಡವರಿಗೆ ನೀಡಲು ಮುಂದಾಗಿರುವುದಾಗಿ ತಿಳಿಸಿದರು. ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಕ್ಷೇತ್ರದ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವುದು ಮತ್ತು ಸಮರ್ಪಕ ವಿದ್ಯುತ್ ಸರಬ ರಾಜಿಗೆ ತೊಂದರೆಯಾಗ ದಂತೆ ಕ್ರಮ ಕೈಗೊಳ್ಳಲಾಗಿದೆ. ಲಾಕ್ಡೌನ್ ಮುಂದುವರಿದರೆ ನಿರ್ಗತಿಕರಿಗೆ, ಅನ್ನ ದಾನ ವೂ ಮುಂದು ವರಿಸಲಾಗುವುದು ಎಂದು ಹೇಳಿದರು. ಮಳ ವಳ್ಳಿಗೆ ಮಾತ್ರ ಸೀಮಿತವಾಗಿದ್ದ ಕೊರೊನಾ ಸೋಂಕು ಮಂಡ್ಯ, ನಾಗ ಮಂಗಲ, ಪಾಂಡವಪುರ, ಕೆ.ಆರ್. ಪೇಟೆ ತಾಲೂಕುಗಳಿಗೆ ಹರಡಿರು ವುದು ಅಪಾಯಕಾರಿ ಸೂಚನೆ. ಸರ್ಕಾರ ಮತ್ತು ಜಿಲ್ಲಾಡಳಿತ ಮುಂ ಜಾಗೃತಾ ಕ್ರಮ ಕೈಗೊಂಡಿ ದ್ದರೂ ಜನರ ನಿರ್ಲಕ್ಷದಿಂದ ಈ ಸೋಂಕು ಹರಡುತ್ತಿದೆ. ಆರೆಂಜ್ ಜೋನಲ್ಲಿದ್ದ ಮಂಡ್ಯ ಜಿಲ್ಲೆ ರೆಡ್ಜೋನ್ ಸೇರಿದೆ. ಇನ್ನಾದರೂ ತಬ್ಲೀಘಿ, ಮುಂಬೈ ವಲಸಿಗರು ಸ್ವಯಂ ಪ್ರೇರಣೆಯಿಂದ ಚಿಕಿತ್ಸೆಗೆ ಮುಂದಾಗಬೇಕೆಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sugar ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು
Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ
HD ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್ ಶಾಸಕ ಉದಯ್
Protest: ಕೆರಗೋಡು ಹನುಮ ಧ್ವಜ ವಿವಾದ; ಜೆಡಿಎಸ್, ಭಜರಂಗದಳ, ವಿ.ಹಿಂ.ಪ. ಪ್ರತಿಭಟನೆ
Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ
MUST WATCH
ಹೊಸ ಸೇರ್ಪಡೆ
Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ
Anjali case; ಕಾನೂನಿಗೆ ಬೆಲೆಯಿದೆ ಎಂದು ಸರ್ಕಾರ ತೋರಿಸಲಿ: ಮೂರುಸಾವಿರ ಮಠದ ಜಗದ್ಗುರು
Anjali Ambigera case: ಹುಬ್ಬಳ್ಳಿಯಲ್ಲಿ ಎಬಿವಿಪಿ ಪ್ರತಿಭಟನೆ
Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು
Kushtagi: ಪಟ್ಟಣದ ಹೊರವಲಯದಲ್ಲಿ ನಿಲ್ಲಿಸಿದ್ದ ಟಿಪ್ಪರ್ ಕಳವು