ಕೆಎಂಎಫ್‌ನಿಂದ ಮೆಕ್ಕೆ ಜೋಳ ಖರೀದಿ


Team Udayavani, May 2, 2020, 6:57 PM IST

ಕೆಎಂಎಫ್‌ನಿಂದ ಮೆಕ್ಕೆ ಜೋಳ ಖರೀದಿ

ಹಾವೇರಿ: ಸೂಕ್ತ ಮಾರುಕಟ್ಟೆ, ಯೋಗ್ಯ ದರ ಇಲ್ಲದೇ ಕಂಗಾಲಾಗಿರುವ ಮೆಕ್ಕೆಜೋಳ ಬೆಳೆಗಾರರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಕೆಎಂಎಫ್‌ (ಕರ್ನಾಟಕ ಹಾಲು ಮಹಾಮಂಡಳ) ವತಿಯಿಂದ ಮೆಕ್ಕೆಜೋಳ ಖರೀದಿಸಲು ತೀರ್ಮಾನಿಸಿದೆ.

ಇದು ರೈತರಲ್ಲಿ ಮಂದಹಾಸ ಮೂಡಿಸಿದೆ ಅದರೂ ಇದರ ಪ್ರಯೋಜನ ಎಷ್ಟು ರೈತರಿಗೆ ಸಿಗುತ್ತದೆ ಎಂಬ ಲೆಕ್ಕಾಚಾರ ನಿರಾಸೆಗೊಳಿಸಿದೆ. ಹಾವೇರಿ, ದಾವಣಗೆರೆ, ಧಾರವಾಡ, ಗದಗ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮುಖ್ಯ ಬೆಳೆಯಾಗಿ ಮೆಕ್ಕೆಜೋಳವನ್ನೇ ಬೆಳೆಯಲಾಗುತ್ತಿದೆ. ಪ್ರಸ್ತುತ ಅಂದಾಜು 50ಲಕ್ಷ ಮೆಟ್ರಿಕ್‌ ಟನ್‌ನಷ್ಟು ಮೆಕ್ಕೆಜೋಳ ಮಾರಾಟಕ್ಕೆ ಸಿದ್ಧವಾಗಿದೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಸರ್ಕಾರ ಕೆಎಂಎಫ್‌ ಮೂಲಕ ಕೇವಲ 20ಸಾವಿರ ಮೆಟ್ರಿಕ್‌ ಟನ್‌ ಮೆಕ್ಕೆಜೋಳವನ್ನು ಬೆಂಬಲ ಬೆಲೆ ಯಲ್ಲಿ ಖರೀದಿಸಿದರೆ ಅದರಿಂದ ರೈತರಿಗೆ ಅನುಕಲವಾಗಲಿದೆಯೇ? ಇದು “ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ’ ನೀಡಿದಂತಾಗುತ್ತದೆ ಎಂಬ ವಿಮರ್ಶೆ ಶುರುವಾಗಿದೆ.

ಕೆಎಂಎಫ್‌ಗೆ ಪಶು ಆಹಾರ ತಯಾರಿಕೆಗೆ ವಾರ್ಷಿಕ 2.20ಲಕ್ಷ ಮೆ.ಟನ್‌ ಮೆಕ್ಕೆಜೋಳ ಬೇಕಾಗುತ್ತದೆ. ಪ್ರಸ್ತುತ ಕೇವಲ 20,000ಮೆ. ಟನ್‌. ಮೆಕ್ಕೆಜೋಳವನ್ನು 1760ರೂ. ಬೆಂಬಲ ಬೆಲೆಯಲ್ಲಿ ಖರೀಸಲು ತೀರ್ಮಾನಿಸಿದ್ದು ಅಧಿಕ ಬೆಳೆಯುವ ಜಿಲ್ಲೆಗಳಿಗೆ ಆದ್ಯತೆ ಮೇರೆಗೆ ಹೆಚ್ಚು ಪ್ರಮಾಣದ ಖರೀದಿಗೆ ಮುಂದಾದರೂ ಒಂದು ಜಿಲ್ಲೆಯಲ್ಲಿ ಸರಾಸರಿ ಗರಿಷ್ಠ ನಾಲ್ಕೈದು ಸಾವಿರ ಮೆ.ಟನ್‌ ಮಾತ್ರ ಖರೀದಿಸಲು ಸಾಧ್ಯವಾಗುತ್ತದೆ. ಇದು ತೀರಾ ಕಡಿಮೆ ರೈತರಿಗೆ ಅನುಕೂಲವಾಗಲಿದೆ. ಆಗ ಮಾರಾಟವಾಗದ ರೈತರ ಕೆಂಗಣ್ಣಿಗೆ ಸರ್ಕಾರ ಗುರಿಯಾಗುವುದು ಅನಿವಾರ್ಯ.

ಘಟಕಕ್ಕೆ ಒಯ್ಯಬೇಕು: ಕೆಎಂಎಫ್‌ ತನ್ನ ಗೋದಾಮು ಲಭ್ಯವಿರುವ ಹಾಸನ, ಧಾರವಾಡ, ಶಿಕಾರಿಪುರದ ಪಶು ಆಹಾರ ಘಟಕಗಳಿಗೆ ರೈತರು ನೇರವಾಗಿ ತಂದು ಕೊಡಬೇಕು ಎಂದು ಹೇಳಿದೆ. ಆದರೆ, ಇಂದಿನ ಲಾಕ್‌ಡೌನ್‌ ಅವಧಿಯಲ್ಲಿ ಇದು ಎಷ್ಟರ ಮಟ್ಟಿಗೆ ಸಾಧ್ಯ ಎಂಬ ಪ್ರಶ್ನೆ ರೈತರನ್ನು ಕಾಡುತ್ತಿದೆ. ಮೊದಲು ಹತ್ತಿರದ ಕೆಎಂಎಫ್‌ ಪಶು ಆಹಾರ ಘಟಕ ಕಚೇರಿಗೆ ಸ್ಯಾಂಪಲ್‌ ನೊಂದಿಗೆ ಹೋಗಬೇಕು. ಅಲ್ಲಿ ಅವರು ಗುಣಮಟ್ಟ ಪರೀಕ್ಷೆ ಮಾಡುತ್ತಾರೆ. ನಂತರ ಅದನ್ನು ತರಲು ದಿನಾಂಕ ಕೊಡುತ್ತಾರೆ. ಅಂದು ಆ ರೈತ ಪಾಸ್‌ ಪಡೆದು, ವಾಹನ ವ್ಯವಸ್ಥೆ ಮಾಡಿಕೊಂಡು ಮೆಕ್ಕೆಜೋಳ ಮಾರಾಟ ಮಾಡಬೇಕಾಗಿದೆ.

ನುಗ್ಗುವ ಸಾಧ್ಯತೆ: ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಅಪಾರ ಪ್ರಮಾಣದಲ್ಲಿದ್ದು ಖರೀದಿಸುವ ಪ್ರಮಾಣ ತೀರಾ ಕಡಿಮೆ ಇರುವುದರಿಂದ ರೈತರು ಮುಗಿಬೀಳುವ ಸಾಧ್ಯತೆ ಹೆಚ್ಚಾಗಿದೆ. ಹಾವೇರಿ ಜಿಲ್ಲೆಯೊಂದರಲ್ಲೇ 50,000ಮೆ.ಟನ್‌. ಮೆಕ್ಕೆಜೋಳವಿದೆ. ಎಲ್ಲರೂ ಹೇಗಾದರೂ ಮಾಡಿ ಮಾರಾಟ ಮಾಡಬೇಕು ಎಂದು ತುದಿಗಾಲಲ್ಲಿ ನಿಂತಿದ್ದಾರೆ. ಇದರಿಂದ ಲಾಕ್‌ ಡೌನ್‌ ಅವಧಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಗೆ ಓಡಾಡುವುದು ಅಷ್ಟು ಸುಲಭವಲ್ಲ. ಜಿಲ್ಲಾವಾರು ಸ್ಯಾಂಪಲ್‌ ಸ್ವೀಕಾರ ಹಾಗೂ ಪರೀಕ್ಷೆ ಕೇಂದ್ರ ತೆರೆದರೂ ಅಲ್ಲಿ ಕಿಮೀ ಗಟ್ಟಲೆ ಸಾಲು, ಜನದಟ್ಟಣೆ ತಪ್ಪಿಸಿ, ಸಾಮಾಜಿಕ ಅಂತರ ಕಾಯಲು ಜಿಲ್ಲಾಡಳಿತ ಕ್ರಮವಹಿಸುವುದು ಅನಿವಾರ್ಯ. ಇದರಿಂದ ಖರೀದಿ ಪ್ರಕ್ರಿಯೆಯೂ ಸಾಕಷ್ಟು ವಿಳಂಬವಾಗುವ ಸಾಧ್ಯತೆ ಇದೆ.

ರಾಜ್ಯ ಸರ್ಕಾರ ಕೆಎಂಎಫ್‌ ಮೂಲಕ ಮೆಕ್ಕೆಜೋಳ ಖರೀದಿಗೆ ಮುಂದಾಗಿರುವುದು ಸ್ವಾಗತಾರ್ಹ. ಆದರೆ, ಕೆಎಂಎಫ್‌ ಖರೀದಿಸುವ ಪ್ರಮಾಣ ತೀರಾ ಕಡಿಮೆಯಾದ್ದರಿಂದ ಇದರ ಲಾಭ ಎಲ್ಲ ರೈತರಿಗೆ ಸಿಗುವುದಿಲ್ಲ. ಹಾಗಾಗಿ ರಾಜ್ಯ ಸರ್ಕಾರ ಇನ್ನೊಮ್ಮೆ ಕೇಂದ್ರದ ಮೇಲೆ ಒತ್ತಡ ಹೇರಿ ಸರ್ಕಾರದಿಂದಲೇ ಖರೀದಿಸಲು ಮುಂದಾಗುವುದು ಸೂಕ್ತ. ಖರೀದಿ ಪ್ರಕ್ರಿಯೆಗೆ ಈಗಲೇ ಚಾಲನೆ ಕೊಟ್ಟರೆ ಪಾತಾಳಕ್ಕೆ ಕುಸಿಯುತ್ತಿರುವ ಮೆಕ್ಕೆಜೋಳ ದರ ಮಾರುಕಟ್ಟೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳಬಹುದು. ಕೆಎಂಎಫ್‌ ಖರೀದಿಗಾಗಿ ಜಿಲ್ಲಾವಾರು ಸ್ಥಳೀಯವಾಗಿಯೇ ಸ್ಯಾಂಪಲ್‌ ಸ್ವೀಕಾರ, ಪರೀಕ್ಷೆ ಹಾಗೂ ಖರೀದಿ ಪ್ರಕ್ರಿಯೆ ನಡೆಸಿದರೆ ಅನುಕೂಲವಾಗುತ್ತದೆ. -ಬಸವರಾಜ ಅರಬಗೊಂಡ, ಅಧ್ಯಕ್ಷರು, ಧಾರವಾಡ ಹಾಲು ಒಕ್ಕೂಟ.

ಕೆಎಂಎಫ್‌ನಿಂದ ಮೆಕ್ಕೆಜೋಳ ಬೆಂಬಲ ಬೆಲೆಯಲ್ಲಿ ಖರೀದಿಸುತ್ತಿರುವುದು ಒಳ್ಳೆಯ ಕೆಲಸ. ಆದರೆ, ಅದರ ಲಾಭ ಎಲ್ಲ ರೈತರಿಗೆ ಸಿಗಲ್ಲ. ಆದ್ದರಿಂದ ಸರ್ಕಾರವೇ ನೇರವಾಗಿ ಬೆಂಬಲ ಬಲೆಯಲ್ಲಿ ಖರೀದಿಸಲು ಮುಂದಾಗಬೇಕು. ಇನ್ನು ಕೆಎಂಎಫ್‌ ಖರೀದಿಸುವಾಗ ಅರ್ಹ ಬಡ ರೈತರ ಬೆಳೆ ಖರೀದಿಯಾಗುವಂತೆ ನೋಡಿಕೊಳ್ಳುವುದು ಮುಖ್ಯ. ಗೋದಾಮುಗಳಲ್ಲಿನ ಸಂಗ್ರಹ ಖರೀದಿಯಾಗಿ ಉಳ್ಳವರಿಗೆ ಅನುಕೂಲ ಮಾಡಿಕೊಡುವಂತಾದರೆ ಸರ್ಕಾರದ ಉದ್ದೇಶ ಈಡೇರುವುದಿಲ್ಲ. -ರಾಮಣ್ಣ ಕೆಂಚಳ್ಳೇರ, ಜಿಲ್ಲಾಧ್ಯಕ್ಷರು, ರೈತ ಸಂಘ.

 

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.