ಭತ್ತ ಬೆಳೆಗಾರರಿಗೆ ವರುಣಾಘಾತ
Team Udayavani, May 2, 2020, 7:28 PM IST
ಸಿದ್ದಾಪುರ: ಗ್ರಾಮದಲ್ಲಿ ಶುಕ್ರವಾರ ಬಿರುಗಾಳಿ ಸಹಿತ ಮಳೆಯಾದ ಪರಿಣಾಮ ಕೋಟ್ಯಂತರ ರೂ. ಮೌಲ್ಯದ ಭತ್ತ ನೀರಲ್ಲಿ ನೆನೆದು ನಷ್ಟ ಸಂಭವಿಸಿದೆ. ಶುಕ್ರವಾರ ಸಂಜೆ 5 ಗಂಟೆಗೆ ಆರಂಭವಾದ ಮಳೆ 6:30 ರವರೆಗೂ ಭಾರಿ ಪ್ರಮಾಣದಲ್ಲಿ ಮಳೆ ಸುರಿಯಿತು.
ಇದರಿಂದಾಗಿ ಗ್ರಾಮದ ಎಪಿಎಂಸಿ ಆವರಣದಲ್ಲಿ ಒಣಗಿಸಲು ಹಾಕಿದ್ದ ಭತ್ತ ನೀರಲ್ಲಿ ನೆನೆಯಿತು. ಇನ್ನೂ ಕೆಲ ರೈತರ ಭತ್ತ ನೀರಲ್ಲಿ ಕೊಚ್ಚಿಕೊಂಡು ಹೋಗಿದೆ. ಮೊನ್ನೆ ಮೊನ್ನೆ ಅಕಾಲಿಕ ಬಿರುಗಾಳಿ ಸಹಿತ ಮಳೆಯಿಂದಾಗಿ ಭತ್ತ ನೆಲಕ್ಕೆ ಬಿದ್ದು ನಷ್ಟ ಸಂಭವಿಸಿತ್ತು. ಶುಕ್ರವಾರ ಸುರಿದ ಮಳೆಯಿಂದಾಗಿ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಸರಕಾರ ಕೂಡಲೇ ರೈತರ ನೆರವಿಗೆ ಧಾವಿಸಬೇಕು ಎಂದು ರೈತರಾದ ವೀರೇಶ ಬಪ್ಪೂರ, ನಾಗರಾಜ ಸಂಕನಾಳ ಒತ್ತಾಯಿಸಿದರು.
ಪಟ್ಟಣದಲ್ಲಿ ಶುಕ್ರವಾರ ಸುರಿದ ಮಳೆಗೆ ಎಪಿಎಂಸಿ ಯಾರ್ಡ್ನಲ್ಲಿ ರೈತರು ಒಣಗಿಸಲು ಹಾಕಿದ ಭತ್ತದ ರಾಶಿಗಳು ಜಲಾವೃತಗೊಂಡಿವೆ. 8-10 ದಿನಗಳ ಹಿಂದೆ ಕಟಾವು ಮಾಡಿ ಎಪಿಎಂಸಿ ಯಾರ್ಡ್ನಲ್ಲಿ ಒಣಗಿಸಲು ಹಾಕಿದ್ದರು. ಯಾರ್ಡ್ ನಲ್ಲಿ ಹಾಕಿದ್ದ ಸುಮಾರು 150ರಿಂದ 200 ಎಕರೆಯಲ್ಲಿ ಬೆಳೆ ಭತ್ತ ಹಾನಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ