ತೊಕ್ಕೊಟ್ಟು: ಸೀಲ್ಡೌನ್ ಮುಕ್ತ
Team Udayavani, May 3, 2020, 5:30 AM IST
ಉಳ್ಳಾಲ: ತೊಕ್ಕೊಟ್ಟು ಸ್ಮಾರ್ಟ್ ಸಿಟಿ ನಿವಾಸಿಗೆ ಕೋವಿಡ್-19 ಸೋಂಕು ತಗಲಿದ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಸೀಲ್ಡೌನ್ ಆಗಿದ್ದ ತೊಕ್ಕೊಟ್ಟು ಜಂಕ್ಷನ್ನನ್ನು ಶನಿವಾರ ಸೀಲ್ಡೌನ್ ಮುಕ್ತ ಪ್ರದೇಶವಾಗಿ ಘೋಷಿಸಿದ ಹಿನ್ನೆಲೆಯಲ್ಲಿ ತೊಕ್ಕೊಟ್ಟು ಜಂಕ್ಷನ್ಗೆ ಶಾಸಕ ಯು.ಟಿ. ಖಾದರ್ ಅವರು ಪೊಲೀಸರು ಆರೋಗ್ಯ ಇಲಾಖೆಯ ಅಧಿಕಾರಿಗಳು, ಮತ್ತು ಉಳ್ಳಾಲ ನಗರಸಭೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಬ್ಯಾರಿಕೇಡ್ಗಳನ್ನು ತೆಗೆಸಿ ಸೀಲ್ಡೌನ್ ಮುಕ್ತ ಮಾಡಿಸಿದರು.
ಸೀಲ್ಡೌನ್ನಿಂದ ತೊಕ್ಕೊಟ್ಟು ಜಂಕ್ಷನ್ನಿಂದ ತೊಕ್ಕೊಟ್ಟು ಬಸ್ ನಿಲ್ದಾಣದ ಕ್ರಾಸ್ವರೆಗೆ ಪೊಲೀಸರು ಬ್ಯಾರಿಕೇಡ್ ಅಳವಡಿಸಿ ಸಂಚಾರ ಸ್ಥಗಿತಗೊಳಿಸಿದ್ದರು.
ಇದೀಗ ಸೀಲ್ಡೌನ್ ಮುಕ್ತದಿಂದ ಜಂಕ್ಷನ್ ಮೂಲಕವೇ ಸಂಚಾರ ಸುಗಮವಾಗಲಿದೆ.ಈ ಸಂದರ್ಭದಲ್ಲಿ ಶಾಸಕ ಯು.ಟಿ. ಖಾದರ್ ಅವರು ಮಾತನಾಡಿ, ಕೋವಿಡ್-19 ಸೋಂಕು ತಡೆಯುವ ನಿಟ್ಟಿನಲ್ಲಿ ಈ ವ್ಯಾಪ್ತಿಯ ಜನರು ಉತ್ತಮ ಸಹಕಾರ ನೀಡಿದ್ದಾರೆ.
ಕಳೆದ ಒಂದು ತಿಂಗಳ ಕಾಲ ಸಮಸ್ಯೆಯನ್ನು ಎದುರಿಸಿದರೂ ಆರೋಗ್ಯಕ್ಕೆ ಬೇಕಾದ ಸಹಕಾರ ನೀಡಿದ್ದು, ಸರಕಾರದ ಆದೇಶವನ್ನು ಪಾಲಿಸಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಜಿಲ್ಲಾಡಳಿತ ಕೈಗೊಳ್ಳುವ ಲಾಕ್ಡೌನ್ ಸಡಿಲಿಕೆಯನ್ನು ದುರುಪಯೋಗಪಡಿಸದೆ ಸಾಮಾಜಿಕ ಅಂತರವನ್ನು ಕಾಪಾಡಿ ಕೊಳ್ಳಬೇಕು. ಕೋವಿಡ್-19 ಸೋಂಕು ನಿರ್ಮೂಲನೆಗೆ ಕೈಜೋಡಿಸಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ