ಮಲೇಷ್ಯಾದಲ್ಲಿ ಸೋಂಕು ಇಳಿಮುಖ

ಉಡುಪಿ ಮೂಲದ ರಾಮಕೃಷ್ಣ ಪ್ರಭು

Team Udayavani, May 3, 2020, 6:15 AM IST

ಮಲೇಷ್ಯಾದಲ್ಲಿ ಸೋಂಕು ಇಳಿಮುಖ

ಉಡುಪಿ: ಆಗ್ನೇಯ ಏಷ್ಯಾದಲ್ಲಿ ನೆಲೆಗೊಂಡ ಫೆಡರಲ್‌ ಸಾಂವಿಧಾನಿಕ ರಾಜಪ್ರಭುತ್ವ ಹೊಂದಿರುವ ಮಲೇಷ್ಯಾಕ್ಕೂ ಕೋವಿಡ್‌ 19 ಸೋಂಕು ಹರಡಿದೆ. ಇಲ್ಲಿನ ವೈದ್ಯಕೀಯ ರಂಗ ಕ್ಷಿಪ್ರಗತಿಯ ಕಾರ್ಯಾಚರಣೆಯಿಂದ ನಿಯಂತ್ರಣದಲ್ಲಿದೆ. ಕಳೆದೊಂದು ವಾರದಿಂದ ಸೋಂಕು ಪ್ರಕರಣಗಳು ಇಳಿಮುಖಗೊಳ್ಳುತ್ತಿವೆ ಎಂದು ಕೌಲಾಲಂಪುರದಲ್ಲಿ ಐಟಿ ಉದ್ಯಮಿಯಾಗಿರುವ ಉಡುಪಿ ಮೂಲದ ರಾಮಕೃಷ್ಣ ಪ್ರಭು ಹೇಳುತ್ತಾರೆ.

ಮನೆಯ ಯಜಮಾನನಿಗೆ ಅವಕಾಶ
ದೂರವಾಣಿ ಮೂಲಕ ಅವರು ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಸಾರ್ವಜನಿಕ ನಿರ್ಬಂಧ, ಹೊರಗಡೆ ಚಲಿಸದಂತೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪಿಎಂಒ ಮಲೇಷ್ಯಾ ಲಾಕ್‌ಡೌನ್‌ ಆದೇಶ ಹೊರಡಿಸಿದೆ. ಲಾಕ್‌ಡೌನ್‌ ಅವಧಿ ಬೆಳಗ್ಗೆ 8ರಿಂದ ರಾತ್ರಿ 8ರ ವರೆಗೆ ಇರುತ್ತದೆ. ಈ ಅವಧಿಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮನೆಯ ಯಜಮಾನ ಒಬ್ಬರಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಗತ್ಯ ವಸ್ತುಗಳಿಗೆ ಯಾವುದೇ ಸಮಸ್ಯೆಗಳಿಲ್ಲ. ಆದರೆ ಕಚೇರಿಗಳು, ಕೈಗಾರಿಕೆ ಇತ್ಯಾದಿಗಳು ಮುಚ್ಚಿವೆ.

ನಿಯಂತ್ರಣ ಉಲ್ಲಂಘಿಸುವಂತಿಲ್ಲ
ವಿದೇಶಿಯರಿಗೂ ಮನೆಯೊಳಗೆ ಇರುವಂತೆ ಷರತ್ತು ವಿಧಿಸಿದೆ. ಹೊರಗೆ ಬಂದವರಿಗೆ ದಂಡ ವಿಧಿಸಲಾಗುತ್ತದೆ. ಅಗತ್ಯ ವಸ್ತುಗಳನ್ನು ಖರೀದಿಸುವುದನ್ನು ಬಿಟ್ಟು ಬೇರೆ ಯಾವುದಕ್ಕೂ ನಾವು ಹೊರಗೆ ಹೋಗಲು ಸಾಧ್ಯವಿಲ್ಲ. ಯಾರಾದರೂ ಆದೇಶವನ್ನು ಉಲ್ಲಂಘಿಸಿದರೆ ಪೊಲೀಸರು ಬಂಧಿಸಿ ದಂಡ ವಿಧಿಸುತ್ತಾರೆ.

ಸೋಂಕು ಇಳಿಮುಖ
ಜನರು ಸ್ವಯಂ ಜಾಗೃತಿ ಮೂಲಕ ಜನರು ಆರೋಗ್ಯ ಇಲಾಖೆ ಜತೆ ಕೈ ಜೋಡಿಸುತ್ತಿದ್ದಾರೆ. ಆರಂಭದಲ್ಲಿ ದಿನವೊಂದಕ್ಕೆ 500-600 ಪ್ರಕರಣಗಳು ಕಂಡುಬರುತ್ತಿದ್ದರೆ ವಾರದಿಂದ 200ರ ಆಸುಪಾಸಿಗೆ ಇಳಿದಿದೆ.

ಸಮಾವೇಶ ಇಲ್ಲಿಯೂ ನಡೆದಿತ್ತು
ದಿಲ್ಲಿ ನಿಜಾಮುದ್ದೀನ್‌ ಪ್ರದೇಶದಲ್ಲಿ ನಡೆದಿದ್ದ ತಬ್ಲಿ ಜಮಾಅತ್‌ ಸಮಾವೇಶ ಮಾದರಿಯಲ್ಲೇ ಮಲೇಷ್ಯಾ ರಾಜಧಾನಿ ಕೌಲಾಲಂಪುರದಲ್ಲಿಯೂ ಫೆ. 27ರಿಂದ ಮಾರ್ಚ್‌1ರ ವರೆಗೆ ತಬ್ಲಿ ಜಮಾತ್‌ ಸಮಾವೇಶ ನಡೆದಿತ್ತು. 1,500 ವಿದೇಶಿಯರ ಸಹಿತ 16,000 ಅನುಯಾಯಿಗಳು ಭಾಗವಹಿಸಿದ್ದರು. ಅನಂತರ ದೇಶದಲ್ಲಿ ಕೋವಿಡ್‌ 19 ಹೆಚ್ಚಳವಾಗಿದೆ ಅನ್ನುವುದನ್ನು ಜನ ಆಡಿಕೊಳ್ಳುತ್ತಿದ್ದರು. ಆದರೇ ಅದಕ್ಕೆ ಯಾವುದೇ ಪುರಾವೆಗಳಿಲ್ಲ.

ಕೆಟ್ಟ ಮೇಲೆ ಬುದ್ಧಿ
ಭಾರತದ ಬೃಹತ್‌ ಭೌಗೋಳಿಕ ಪ್ರದೇಶವನ್ನು ಗಮನಿಸಿದರೆ ನಾವು ಈ ಯುದ್ಧದಲ್ಲಿ ಉಳಿಯಲು ಭಾರೀ ಹೋರಾಟ ನಡೆಸಬೇಕಾಗುತ್ತದೆ. ಸೋಂಕು ಅಥವಾ ಸಾವು-ನೋವುಗಳ ವಿಷಯದಲ್ಲಿ ನಮ್ಮ ದೇಶದ ಮೇಲೆ ಇತರ ದೇಶಗಳಂತೆ ಪರಿಣಾಮ ಬೀರದ ಕಾರಣ ನಾವು ಅದೃಷ್ಟವಂತರು. ಜನಸಂಖ್ಯೆಗೆ ಅನುಗುಣವಾಗಿ ವೈದ್ಯಕೀಯ ವ್ಯವಸ್ಥೆಗೊಳಿಸುವುದು ಕಷ್ಟ. ಜನರೇ ಸ್ವಯಂ ಜಾಗೃತರಾಗಬೇಕು. ಅರಿವು ಮೂಡಿಲ್ಲ ಎಂದಾದರೆ “ಕೆಟ್ಟ ಮೇಲೆ ಬುದ್ಧಿ’ ಅನ್ನುತ್ತಾರಲ್ಲ. ಹಾಗಾಗಲಿದೆ ನಮ್ಮ ಜನರ ಸ್ಥಿತಿ.
– ರಾಮಕೃಷ್ಣ ಪ್ರಭು,
ಮಲೇಷ್ಯಾ ಉದ್ಯೋಗಿ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.