ಮನೌಸ್‌ ಶವ ಪೆಟ್ಟಿಗೆಗೂ ಸಂಕಷ್ಟ


Team Udayavani, May 3, 2020, 11:01 AM IST

Coffin

ಜೇಮ್‌ಶೆಹರ್‌: ಇರಾನ್‌ನ ಉತ್ತರ ಭಾಗದ ಜೆಮ್‌ಶೆಹರ್‌ನಲ್ಲಿ ಕೋವಿಡ್‌ -19 ಗೆ ಬಲಿಯಾದವರ ಅಂತಿಮ ಸಂಸ್ಕಾರದಲ್ಲಿ ಭಾಗಿಯಾದವರು ರಕ್ಷಣಾ ಕವಚ ಧರಿಸಿದ್ದರು.

ಮನೌಸ್‌: ಬ್ರೆಜಿಲ್‌ನಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಾವಿನ ಸಂಖ್ಯೆ ಏರಿಕೆಯಾಗುತ್ತಿದ್ದು , ದೇಶದ ಪ್ರಮುಖ ನಗರ ಅಮೆಜಾನ್‌ನ ರಾಜಧಾನಿ ಮನೌಸ್‌ನ ಸ್ಥಿತಿ ಚಿಂತಾಜನಕವಾಗಿದೆ. ಸೋಂಕಿನಿಂದ ಮೃತಪಡುತ್ತಿರುವವರ ಸಂಖ್ಯೆ ನಗರದಲ್ಲಿಯೂ ದಿನಕಳೆದಂತೆ ಏರುತ್ತಿದ್ದು, ಅಂತ್ಯ ಸಂಸ್ಕಾರ ವಿಧಿ ವಿಧಾನಗಳನ್ನು ನೆರವೇರಿಸಲು ಸ್ಥಳದ ಅಭಾವ ಕಾಡುತ್ತಿದೆ. ಜತೆಗೆ ಶವ ಪೆಟ್ಟಿಗೆಯ ಕೊರತೆಯೂ ಕಾಡತೊಡಗಿದೆ.

ಒಮ್ಮೆಲೇ ದುಪ್ಪಟ್ಟು
ಈ ಹಿಂದೆ ದಿನಕ್ಕೆ ಸರಾಸರಿ 20 ರಿಂದ 35 ಸಾವು ಪ್ರಕರಣಗಳನ್ನು ದಾಖಲಿಸುತ್ತಿದ್ದ ನಗರದಲ್ಲಿ ಒಂದು ವಾರದಿಂದ ದಿನಕ್ಕೆ ಕನಿಷ್ಠ 130 ಮರಣ ಪ್ರಕರಣಗಳು ದಾಖಲಾಗುತ್ತಿದೆ ಎಂದು ರಾಜ್ಯದ ಆರೋಗ್ಯ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ. ಬ್ರೆಜಿಲ್‌ ಆರೋಗ್ಯ ಸಚಿವಾಲಯದ ವರದಿ ಪ್ರಕಾರ ಎಪ್ರಿಲ್‌ 30ರ ಹೊತ್ತಿಗೆ ಅಮೆಜಾನ್‌ ರಾಜ್ಯದ್ಲಲಿ 5,200 ಕ್ಕೂ ಹೆಚ್ಚು ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 425 ಮಂದಿ ಅಸುನೀಗಿದ್ದಾರೆ.

ಶವಪೆಟ್ಟಿಗೆ ಆಮದು
ಮನೌಸ್‌ನಲ್ಲಿ ಶವಪೆಟ್ಟಿಗೆಗಳ ಸಂಗ್ರಹ ಇಲ್ಲದ ಕಾರಣ 2,700 ಕಿ.ಮೀ. ದೂರ ಇರುವ ಸಾವೋ ಪೌಲೋನಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಮನೌಸ್‌ ಹಾಗೂ ಸಾವೋ ಪೌಲೋ ಸಂಪರ್ಕಿಸಲು ರಸ್ತೆಗಳೂ ಸರಿಯಾಗಿಲ್ಲದ ಕಾರಣ ಶವಪೆಟ್ಟಿಗೆಗಳನ್ನು ಏರ್‌ಲಿಫ್ಟ್‌ ಮಾಡಲಾಗುತ್ತಿದೆ.  ಸುಮಾರು 20ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಈ ನಗರ ಅಮೆಜಾನ್‌ ಅರಣ್ಯ ಪ್ರದೇಶದಿಂದ ಸುತ್ತವರೆದಿದೆ. ಅಲ್ಲಿನ ಸಮದಾಯಗಳಿಗೂ ಮನೌಸ್‌ನ ಆರೋಗ್ಯ ವ್ಯವಸ್ಥೆಯೇ ಆಧಾರ. ಪರಿಣಾಮ ಮುಂದಿನ ದಿನಗಳಲ್ಲಿ ಸೋಂಕು ಪ್ರಸರಣ ಮತ್ತಷ್ಟು ಹೆಚ್ಚುವ ಭೀತಿ ಆವರಿಸಿದೆ. ಇದರ ಮಧ್ಯೆಯೇ ಇಲ್ಲಿನ ಜನರು ಲಾಕ್‌ಡೌನ್‌ ನಿಯಮಗಳನ್ನು ತೆರವುಗೊಳಿಸುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ. ಐಸೋಲೇಷನ್‌ ಪದ್ಧತಿಯೇ ಬೇಡ ಎಂದೂ ಆಗ್ರಹಿಸುತ್ತಿದ್ದಾರೆ. ಇದು ಸ್ಥಳೀಯ ಆಡಳಿತವನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ.

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.