ಯರಗೋಳ ಚೆಕ್ಪೋಸ್ಟ್ ಸ್ಥಳಾಂತರಕ್ಕೆ ಸೂಚನೆ
Team Udayavani, May 3, 2020, 12:29 PM IST
ಯಾದಗಿರಿ: ಕೋವಿಡ್-19 ಸಂಬಂಧ ಯಾದಗಿರಿ ತಾಲೂಕಿನ ಯರಗೋಳ ಸಮೀಪ ಸ್ಥಾಪಿಸಿರುವ ಚೆಕ್ಪೋಸ್ಟ್ ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸಿ ಸುಸಜ್ಜಿತ ಚೆಕ್ಪೋಸ್ಟ್ ನಿರ್ಮಾಣ ಮಾಡುವಂತೆ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಸೂಚಿಸಿದರು.
ತಾಲೂಕಿನ ಯರಗೋಳ ಚೆಕ್ಪೋಸ್ಟ್ಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದ ಅವರು, ಪಕ್ಕದ ಕಲಬುರಗಿ ಜಿಲ್ಲೆಯಲ್ಲಿ ಕೋವಿಡ್-19 ಸಾಕಷ್ಟು ಪ್ರಕರಣಗಳು ಕಂಡುಬಂದಿವೆ. ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಪ್ರಕರಣಗಳು ಕಂಡು ಬಂದಿಲ್ಲ. ಪ್ರಯುಕ್ತ ಚೆಕ್ ಪೋಸ್ಟ್ನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸರಕು ಸಾಗಾಟ ವಾಹನ ಮತ್ತು ಮೆಡಿಕಲ್ ಎಮರ್ಜೆನ್ಸಿ ಅನುಮತಿ ಪಡೆದವರಿಗೆ ಮಾತ್ರ ಚೆಕ್ಪೋಸ್ಟ್ ಮೂಲಕ ಪ್ರಯಾಣಿಸಲು ಅವಕಾಶ ನೀಡಿ ಎಂದು ನಿರ್ದೇಶಿಸಿದರು.
ಪ್ರಯಾಣಿಕರ ಮೇಲೆ ನಿಗಾವಹಿಸಲು ಚೆಕ್ಪೋಸ್ಟ್ನಲ್ಲಿ ಸಿಸಿ ಕ್ಯಾಮೈರಾ ಅಳವಡಿಸಬೇಕು. ಇಲ್ಲಿ ಕಾರ್ಯನಿರ್ವಹಿಸುವ ಪೊಲೀಸ್, ಆರೋಗ್ಯ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಅನುಕೂಲಕ್ಕಾಗಿ ಶೆಡ್ ನಿರ್ಮಾಣ ಮಾಡಬೇಕು. ಜತೆಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಪಾಡುವುದು ಮತ್ತು ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಸಹಾಯಕ ಆಯುಕ್ತ ಶಂಕರಗೌಡ ಎಸ್. ಸೋಮನಾಳ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ