ದಾವಣಗೆರೆ ಸಂಪರ್ಕ ರಸ್ತೆಗೆ ಮುಳ್ಳಿನ ಬೇಲಿ

ಹೊಸ ಮೂರು ಚೆಕ್‌ಪೋಸ್ಟ್‌ ಕಾರ್ಯಾರಂಭ ರಸ್ತೆಯಲ್ಲಿ ಟ್ರಂಚ್‌ ಅಗೆದು ಸಂಚಾರಕ್ಕೆ ತಡೆ

Team Udayavani, May 3, 2020, 1:17 PM IST

3-may-09

ಸಾಂಧರ್ಭಿಕ ಚಿತ್ರ

ಹರಪನಹಳ್ಳಿ: ದಾವಣಗೆರೆಯಲ್ಲಿ ಕೊರೊನಾ ಪಾಸಿಟಿವ್‌ ಕೇಸ್‌ ಸಂಖ್ಯೆ ಹೆಚ್ಚಾಳವಾದ ಹಿನ್ನೆಲೆ ಯಲ್ಲಿ ದಾವಣಗೆರೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಹೊಸ ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ. ಅಲ್ಲದೇ ಪಟ್ಟಣ ದಲ್ಲಿಯೂ ಬಹುತೇಕ ವಾರ್ಡ್‌ಗಳಲ್ಲಿ ಬೇರೆ ಯಾರು ಬಾರದಂತೆ ಮುಳ್ಳಿನ ಬೇಲಿ ಹಾಕಿದ್ದಾರೆ. ದಾವಣಗೆರೆ ಸೀಲ್‌ಡೌನ್‌ ಪ್ರದೇಶದಿಂದ ವ್ಯಕ್ತಿಯೊಬ್ಬ ಹರಪನಹಳ್ಳಿ ಪಟ್ಟಣದ ಮಗಳ ಮನೆಗೆ ಏ.29ರಂದು ಬಂದಿದ್ದರು.

ಅವರನ್ನು ಅಧಿಕಾರಿಗಳು ಗುರುವಾರ ವಾಪಸ್‌ ದಾವಣಗೆರೆಗೆ ಕಳುಹಿಸಿದ್ದಾರೆ. ಅವರು ದಾವಣಗೆರೆಯಿಂದ ಬೈಕ್‌ ಮೂಲಕ ಬಂದಿದ್ದ ರಾಗಿಮಸಲವಾಡ ಮತ್ತು ಶಿಂಗ್ರಿಹಳ್ಳಿ ಒಳಮಾರ್ಗದ ರಸ್ತೆಗೆ ಟ್ರಂಚ್‌ ಅಗೆದು, ಮುಳ್ಳಿನ ಬೇಲಿ ಹಾಕಲಾಗಿದೆ. ತಾಲೂಕಿನ ಕುಂಚೂರು ಗ್ರಾಮದ ವ್ಯಕ್ತಿಯೊಬ್ಬ ದಾವಣಗೆರೆಗೆ ಕೂಲಿ ಕೆಲಸಕ್ಕೆಂದು ತೆರಳಿ ಏ.29ರಂದು ಗ್ರಾಮಕ್ಕೆ ಮರಳಿದ್ದರು. ಏ.30ರಂದು ಅವರನ್ನು ಪರೀಕ್ಷೆಗೆ ಒಳಪಡಿಸಿದ್ದು, ಕೊರೊನಾ ಲಕ್ಷಣಗಳು ಕಂಡು ಬಂದಿಲ್ಲ. ಸದ್ಯ ಅವರನ್ನು ಹೋಮ್‌ ಕ್ವಾರಂಟೈನ್‌ ಮಾಡಲಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ| ಇನಾಯತವುಲ್ಲಾ ತಿಳಿಸಿದ್ದಾರೆ.

ಮೂರು ಹೊಸ ಚೆಕ್‌ಪೋಸ್ಟ್‌: ಕೊರೊನಾ ವೈರಸ್‌ ಸೋಂಕಿತರ ಸಂಖ್ಯೆ ದಾವಣಗೆರೆಯಲ್ಲಿ ಹೆಚ್ಚಳವಾದ ಹಿನ್ನೆಲೆಯಲ್ಲಿ ದಾವಣಗೆರೆಗೆ ಸಂಪರ್ಕ ಕಲ್ಪಿಸುವ ಹರಪನಹಳ್ಳಿ ಗಡಿ ಭಾಗಗಳಲ್ಲಿ ಮೂರು ಹೊಸ ಚೆಕ್‌ಪೋಸ್ಟ್‌ ಗಳನ್ನು ತೆರೆದು ಬಿಗಿ ಬಂದೋಬಸ್ತ್ ಮಾಡಲಾಗಿದೆ. ಹರಪನಹಳ್ಳಿ ಠಾಣೆ ವ್ಯಾಪ್ತಿಯ ಹರಪನಹಳ್ಳಿ-ಅರಸೀಕೆರೆ ಮಾರ್ಗದ ಮಧ್ಯೆ ದೇವರ ತಿಮ್ಮಲಾಪುರ, ಹರಪನಹಳ್ಳಿಯಿಂದ ಕಂಚಿಕೇರಿ-ಬೆಂಡಿಗೇರಿ ಮಾರ್ಗದ ರೈಲ್ವೆ ಬಿಡ್ಜ್ ಹತ್ತಿರ, ಹರಪನಹಳ್ಳಿ-ಹರಿಹರ ರಸ್ತೆಯ ಆಶ್ರಯ ಕ್ಯಾಂಪ್‌ ಬಳಿ ಹೊಸ ಚೆಕ್‌ಪೋಸ್ಟ್‌ ತೆಗೆಯಲಾಗಿದೆ.

ಹೊಸ ಚೆಕ್‌ಪೋಸ್ಟ್‌ಗಳು ಸೇರಿ ಒಟ್ಟು 9 ಚೆಕ್‌ಪೋಸ್ಟ್‌ಗಳಲ್ಲಿ ಸಿಬ್ಬಂದಿ ತೀವ್ರ ತಪಾಸಣೆಗೆ ಒಳಪಡಿಸುತ್ತಿದ್ದಾರೆ. ದಾವಣಗೆರೆಗೆ ಸಂಪರ್ಕ ಕಲ್ಪಿಸುವ ಒಳ ಮಾರ್ಗಗಳನ್ನು ಸಹ ಬಂದ್‌ ಮಾಡಲಾಗಿದೆ. ಸದ್ಯ ಹರಪನಹಳ್ಳಿಯಿಂದ ದಾವಣಗೆರೆಗೆ ಯಾರು ಹೋಗುವಂತಿಲ್ಲ, ಬರುವಂತಿಲ್ಲ, ಕೇವಲ ಪಾಸ್‌ ಇದ್ದರೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಲುವಾಗಲು ಠಾಣೆ ವ್ಯಾಪ್ತಿಯ ಹರಪನಹಳ್ಳಿ ರಾಗಿಮಸಲವಾಡ, ಶಿಂಗ್ರಿಹಳ್ಳಿ ಮಾರ್ಗದ ರಸ್ತೆಗೆ ಟ್ರಂಚ್‌ ಅಗೆದು ಮುಳ್ಳಿನ ಬೇಲಿ ಹಾಕಲಾಗಿದೆ.

ದಾವಣಗೆರೆ-ಹರಪನಹಳ್ಳಿ ಮಧ್ಯೆ ಓಡಾಟ ಮಾಡುವವರನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ. ದಾವಣಗೆರೆ ಸೀಲ್‌ ಡೌನ್‌ ಪ್ರದೇಶದಿಂದ ವ್ಯಕ್ತಿಯೊಬ್ಬ ಪಟ್ಟಣಕ್ಕೆ ಬಂದು ಹೋಗಿರುವುದರಿಂದ ಜನರು ಭಯಭೀತರಾಗಿ ಪಟ್ಟಣದ ಮ್ಯಾಸಗೇರಿ ಮತ್ತು ಬಣಗಾರಗೇರಿ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಮತ್ತು ಶಂಕರ ಮಠದ ಬಳಿ, ಚಿತ್ತಾರಗೇರಿ ಸೇರಿದಂತೆ ನಾಲ್ಕೈದು ಕಡೆ ಮುಳ್ಳಿನ ಬೇಲಿ ಹಾಕಲಾಗಿದೆ.

ಟಾಪ್ ನ್ಯೂಸ್

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.