ಸ್ಥಳೀಯ ಈರುಳ್ಳಿ ಮಾರಾಟಕ್ಕೆ ಆದ್ಯತೆ ನೀಡಿ: ಹಿರೇಮಠ
Team Udayavani, May 3, 2020, 3:54 PM IST
ಗದಗ: ಜಿಲ್ಲೆಯ ಎಪಿಎಂಸಿಯಲ್ಲಿ ಹೊರ ರಾಜ್ಯಗಳಿಂದ ಬರುತ್ತಿರುವ ಈರುಳ್ಳಿಯಿಂದಾಗಿ ಸ್ಥಳೀಯ ರೈತರು ಬೆಳೆದ ಈರುಳ್ಳಿಗೆ ಯೋಗ್ಯ ದರ ದೊರೆಯುತ್ತಿಲ್ಲ. ಈಗಾಗಲೇ ಜಿಲ್ಲೆಯ ಲಾಕ್ಡೌನ್ನಿಂದಾಗಿ ಸಂಕಷ್ಟದಲ್ಲಿದ್ದಾರೆ. ವರ್ತಕರು ಜಿಲ್ಲೆಯ ರೈತರು ಬೆಳೆದ ಈರುಳ್ಳಿಯನ್ನು ಯೋಗ್ಯ ಬೆಲೆಗೆ ಖರೀದಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚಿಸಿದರು.
ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಶನಿವಾರ ಅಧಿಕಾರಿಗಳು ಹಾಗೂ ವರ್ತಕರೊಂದಿಗೆ ಸಭೆ ನಡೆಸಿದ ಅವರು, ನಾನಾ ಕಾರಣಗಳಿಂದಾಗಿ ಜಿಲ್ಲೆಗೆ ಹೊರ ರಾಜ್ಯದಿಂದ ಈರುಳ್ಳಿ ಬರುತ್ತಿದೆ. ಸ್ಥಳೀಯವಾಗಿ ಈರುಳ್ಳಿ ಬೆಳೆದ ರೈತರಿಗೆ ಸೂಕ್ತವಾದ ಬೆಲೆ ದೊರೆಯದಂತಾಗಿದೆ. ಯಾವುದೇ ಕಾರಣಕ್ಕೂ ವ್ಯಾಪಾರಸ್ಥರು ಹೊರ ರಾಜ್ಯದ ಈರುಳ್ಳಿ ಖರೀದಿಸದೇ, ಸ್ಥಳೀಯ ರೈತರ ಬೆಳೆಯನ್ನು ಯೋಗ್ಯ ಬೆಲೆ ದೊರಕಿಸಿಕೊಡಬೇಕು ಎಂದು ಮನವಿ ಮಾಡಿದರು.
ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶಶಿಕಾಂತ ಕೋಟಿಮನಿ ಮಾತನಾಡಿ, ಜಿಲ್ಲೆಯಲ್ಲಿ 600 ಹೆಕ್ಟೇರ್ನಲ್ಲಿ ಅಂದಾಜು 10ಸಾವಿರ ಮೆಟ್ರಿಕ್ ಟನ್ ಈರುಳ್ಳಿ ಉತ್ಪಾದನೆ ಆಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕ ಎಸ್.ಎಲ್. ಲಮಾಣಿ, ಗದಗ ಎಪಿಎಂಸಿಯ ಸಹಾಯಕ ಕಾರ್ಯದರ್ಶಿ ಎಂ.ಆರ್. ನದಾಫ್ ಹಾಗೂ ಎಪಿಎಂಸಿ ವ್ಯಾಪಾರಸ್ಥರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ