ಕೋವಿಡ್ ಲಕ್ಷಣ ಮುಚ್ಚಿಡುವುದು ಅಪಾಯಕಾರಿ: ಮುರುಘಾಶ್ರೀ
Team Udayavani, May 3, 2020, 5:43 PM IST
ಚಿತ್ರದುರ್ಗ: ಸಾಮಾಜಿಕ ಅಂತರದ ಮಹತ್ವದ ಕುರಿತು ಮಾಧ್ಯಮಗಳು, ಪೊಲೀಸರು, ಅಧಿಕಾರಿಗಳು ಎಷ್ಟು ಹೇಳಿದರೂ ಜನ ಅರ್ಥ ಮಾಡಿಕೊಳ್ಳುತ್ತಿಲ್ಲ ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಬೇಸರ ವ್ಯಕ್ತಪಡಿಸಿದರು.
ಮುರುಘರಾಜೇಂದ್ರ ಮಠದಲ್ಲಿ ಗರ್ಭಿಣಿಯರಿಗೆ, ಗೃಹರಕ್ಷಕದಳ ಸಿಬ್ಬಂದಿ ಮತ್ತಿತರೆ ಸುಮಾರು 330 ಕುಟುಂಬಗಳಿಗೆ ದವಸ-ಧಾನ್ಯ ವಿತರಿಸಿ ಶರಣರು ಮಾತನಾಡಿದರು. ಕೋವಿಡ್
ಹಿನ್ನೆಲೆಯಲ್ಲಿ ಹಲವು ಕಡೆ ಸರ್ಕಾರ, ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು, ಧಾರ್ಮಿಕ ಕೇಂದ್ರಗಳು ಹಸಿದವರಿಗೆ ಅನ್ನ ನೀಡುವ ಸಂಸ್ಕೃತಿಯನ್ನು ಬೆಳೆಸಿಕೊಂಡು ಬಂದಿರುವುದು ಉತ್ತಮ ಬೆಳವಣಿಗೆ. ಅತಿವೃಷ್ಟಿ, ಅನಾವೃಷ್ಟಿ ಇನ್ನಿತರೆ ರಾಷ್ಟ್ರವನ್ನು ಕಾಡುವ ಯಾವ ಸಮಸ್ಯೆಗಳು ಬಂದರೂ ಮಾನವೀಯತೆಯನ್ನು ಮೆರೆಯುವ ರಾಷ್ಟ್ರವೆಂದರೆ ಭಾರತ. ಆದರೆ ಜನರು ಸಮಸ್ಯೆಗಳ ಅರಿವಿಲ್ಲದೆ ಗುಂಪುಗೂಡಿ ಕಾನೂನು ಉಲ್ಲಂಘನೆ ಮಾಡಿ ರೋಗ ಮತ್ತೆ ಉಲ್ಬಣವಾಗುವಂತೆ ಮಾಡುತ್ತಿರುವುದು ಅನಾರೋಗ್ಯಕರ ಬೆಳವಣಿಗೆ. ಹೀಗಾಗಿಯೆ ಮತ್ತೆ ಲಾಕ್ಡೌನ್ ಮುಂದುವರಿಸಿದ್ದಾರೆ. ಸಾರ್ವಜನಿಕರ ಪ್ರಾಣ ಉಳಿಸಲು ವೈದ್ಯರು, ನರ್ಸ್ಗಳು, ಪೊಲೀಸ್ ಇಲಾಖೆಯವರು ಶ್ರಮಿಸುತ್ತಿದ್ದಾರೆ. ಕೆಲವರು ಕೋವಿಡ್ ಲಕ್ಷಣಗಳಿದ್ದರೂ ಮುಚ್ಚಿಡುತ್ತಾರೆ. ಇದು ಅತ್ಯಂತ ಅಪಾಯಕಾರಿ ಎಂದರು. ಗೃಹರಕ್ಷಕದಳದ ಲೋಕೇಶ್, ಸಿಡಿಪಿಒ ಸುಧಾ, ಎ.ಜೆ. ಪರಮಶಿವಯ್ಯ, ಮಲ್ಲಿಕಾರ್ಜುನಯ್ಯ, ಪೈಲ್ವಾನ್ ತಿಪ್ಪೇಸ್ವಾಮಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ
Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
MUST WATCH
ಹೊಸ ಸೇರ್ಪಡೆ
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ