ಕಾರ್ಕಳ : ಊರಿಗೆ ತೆರಳಿದ 461 ಮಂದಿ ವಲಸಿ ಕಾರ್ಮಿಕರು
Team Udayavani, May 3, 2020, 7:22 PM IST
ಕಾರ್ಕಳ: ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ವಿವಿಧೆಡೆಯಿದ್ದ ಸುಮಾರು 461 ಮಂದಿ ವಲಸಿ ಕಾರ್ಮಿಕರು ರವಿವಾರ ಸಂಜೆ 6ರ ವೇಳೆಗೆ ಕೆಎಸ್ಆರ್ಟಿಸಿ ಬಸ್ ಮೂಲಕ ತಮ್ಮ ತಮ್ಮ ಊರಿನತ್ತ ತೆರಳಿದರು. ಕಟ್ಟಡ, ಕೂಲಿ, ಹೊಟೇಲ್ ಕಾರ್ಮಿಕರಾಗಿ ದುಡಿಯುತ್ತಿದ್ದ ಗದಗ, ಗಂಗಾವತಿ, ಹಾವೇರಿ, ಬಾಗಲಕೋಟೆ, ಕೊಪ್ಪಳ, ಹುಬ್ಬಳ್ಳಿ, ಯಾದಗಿರಿ, ಗುಲ್ಪರ್ಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಶಿವಮೊಗ್ಗ, ಚಿತ್ರದುರ್ಗ, ಬಿಜಾಪುರ ಭಾಗದ ಸುಮಾರು 461ಮಂದಿ 11 ಬಸ್ನಲ್ಲಿ ಊರಿನತ್ತ ಸಾಗಿದರು.
ಕಳೆಕಟ್ಟಿದ ಸಂಭ್ರಮ
ರವಿವಾರ ಸಂಜೆ 3 ಗಂಟೆಗೆ ಕಾರ್ಕಳ ಬಂಡಿಮಠ ಬಸ್ ನಿಲ್ದಾಣದಿಂದ ವಿವಿಧ ಜಿಲ್ಲೆಗಳಿಗೆ ಬಸ್ ಸೌಲಭ್ಯವಿದೆ ಎಂದು ತಿಳಿದ ಉಭಯ ತಾಲೂಕಿನಲ್ಲಿದ್ದ ಹೊರ ಜಿಲ್ಲೆಯ ಕೂಲಿ ಕಾರ್ಮಿಕರು ಮಧ್ಯಾಹ್ನವೇ ನಗರದತ್ತ ಧಾವಿಸಿದರು. ಆಟೋ, ಟ್ಯಾಕ್ಸಿ ಸೇವೆ ಇಲ್ಲದ ಪರಿಣಾಮ ದೂರದೂರಿನಿಂದಲೂ ನಡೆದುಕೊಂಡೇ ಬಂಡಿಮಠ ಬಸ್ ನಿಲ್ದಾಣದತ್ತ ಸಾಗಿದ ಹೊರ ಜಿಲ್ಲೆಯ ವಲಸಿ ಕಾರ್ಮಿಕರ ಮುಖದಲ್ಲಿ ಸಂಭ್ರಮ ಕಳೆಕಟ್ಟಿತ್ತು. ಅದೆಷ್ಟೋ ದಿನಗಳಿಂದ ಈ ಸಮಯಕ್ಕಾಗಿ ಕಾಯುತ್ತಿದ್ದ ಅವರು ಊರಿನತ್ತ ತೆರಳುವ ಖುಷಿ ಒಂದೆಡೆಯಾದರೆ, ಕೆಎಸ್ಆರ್ಟಿಸಿ ಉಚಿತ ಬಸ್ ಸೌಲಭ್ಯ ಕಲ್ಪಿಸಿರುವುದು ಖುಷಿಯನ್ನು ಇಮ್ಮಡಿಗೊಳಿಸಿತು.
ಶಾಸಕ ವಿ. ಸುನಿಲ್ ಕುಮಾರ್, ತಹಶೀಲ್ದಾರ್ಗಳಾದ ಪುರಂದರ ಹೆಗ್ಡೆ, ಮಹೇಶ್ಚಂದ್ರ, ತಾಲೂಕು ಆರೋಗ್ಯಾಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿ, ಕಂದಾಯ ಸೇರಿದಂತೆ ವಿವಿಧ ಇಲಾಖೆ ಸಿಬ್ಬಂದಿ ವಲಸೆ ಕಾರ್ಮಿಕರನ್ನು ಬೀಳ್ಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
MUST WATCH
ಹೊಸ ಸೇರ್ಪಡೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು