ಈಗಲಾದರೂ ಮನೆಯಿಂದ ಹೊರಗೆ ಬರಬೇಡಿ..

ಪರಿಸ್ಥಿತಿಯ ಗಂಭೀರತೆ ಅರ್ಥ ಮಾಡಿಕೊಳ್ಳಿ ದಾವಣಗೆರೆ ಜನತೆಗೆ ಸಂಸದ ಸಿದ್ದೇಶ್ವರ್‌ ಮನವಿ

Team Udayavani, May 4, 2020, 11:23 AM IST

04-May-04

ದಾವಣಗೆರೆ: ಸಿಬ್ಬಂದಿಯೊಬ್ಬರು ಗ್ಯಾಸ್‌ ಸಿಲಿಂಡರ್‌ಗಳಿಗೆ ರಾಸಾಯನಿಕ ಸಿಂಪಡಣೆ ಮಾಡಿದರು.

ದಾವಣಗೆರೆ: ದಾವಣಗೆರೆಯಲ್ಲಿ ಭಾನುವಾರ ಒಂದೇ ದಿನ 21 ಜನರಲ್ಲಿ ಕೋವಿಡ್ ಪಾಸಿಟಿವ್‌(ಪ್ರಾಥಮಿಕ ವರದಿ) ಪತ್ತೆಯಾಗಿರುವುದು ಅತ್ಯಂತ ನೋವಿನ ವಿಚಾರ. ಜನರು ಈಗಲಾದರೂ ಪರಿಸ್ಥಿತಿಯ ಗಂಭೀರತೆ ಅರ್ಥ ಮಾಡಿಕೊಂಡು ಮನೆಯಿಂದ ಹೊರ ಬರಬಾರದು ಎಂದು ಸಂಸದ ಜಿ.ಎಂ. ಸಿದ್ದೇಶ್ವರ್‌ ಕಳಕಳಿಯ ಮನವಿ ಮಾಡಿದ್ದಾರೆ.

ದಾವಣಗೆರೆಯಲ್ಲಿ ಒಟ್ಟಾರೆ 7 ಸಕ್ರಿಯ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಹೊಸದಾಗಿ ಯಾವುದೇ ಪ್ರಕರಣಗಳು ಆಗದಂತೆ ನಡೆಸಿದ ತುರ್ತುಸಭೆಯ ಮುಕ್ತಾಯ ಹಂತದಲ್ಲಿ 21 ಜನರಿಗೆ ಕೋವಿಡ್ ಪಾಸಿಟಿವ್‌ ಎಂಬ ಪ್ರಾಥಮಿಕ ವರದಿ ಬಂದಿತು. ನಿಜಕ್ಕೂ ಅತೀ ನೋವಿನ ವಿಚಾರ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು. ಕಳೆದ ಭಾನುವಾರ ದಾವಣಗೆರೆ ಜಿಲ್ಲೆ ಹಸಿರು ವಲಯದಲ್ಲಿತ್ತು. ಹಾಗಾಗಿ ವಾಣಿಜ್ಯ ಚಟುವಟಿಕೆಗೆ ಅನುಮತಿ ನೀಡಲಾಗಿತ್ತು. ಕೆಲವೇ ಗಂಟೆಯಲ್ಲೇ ಒಬ್ಬರಲ್ಲಿ ಕೊರೊನಾ ಪಾಸಿಟಿವ್‌ ಎಂಬ ವರದಿ ಬಂದ ನಂತರ ಎಲ್ಲವನ್ನೂ ಮುಚ್ಚಬೇಕಾಯಿತು ಎಂದು ತಿಳಿಸಿದರು.

ಈಗ ಪ್ರಾಥಮಿಕ ವರದಿ ಪ್ರಕಾರ 21 ಜನರಲ್ಲಿ ಕೋವಿಡ್ ಪಾಸಿಟಿವ್‌ ಬಂದಿದೆ. ಇನ್ನೂ ಹೆಚ್ಚಾಗದಂತೆ ಪ್ರತಿಯೊಬ್ಬರೂ ಜಾಗೃತರಾಗಿರಬೇಕು. ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಕರೆ ನೀಡಿರುವಂತೆ ಕೋವಿಡ್ ವಿರುದ್ಧ ಯುದ್ಧವನ್ನೇ ಮಾಡಬೇಕಾಗಿದೆ. ಅದರಂತೆ ಎಲ್ಲರೂ ಕೆಲಸ ಮಾಡೋಣ ಎಂದು ಮನವಿ ಮಾಡಿದರು. ಒಂದೇ ದಿನ 21ಪ್ರಕರಣಗಳ ವರದಿ ಬಂದಿರವುದರಿಂದ ಸರ್ಕಾರ ದಾವಣಗೆರೆಯನ್ನ ಕಂಟೈನ್‌ಮೆಂಟ್‌ ಮಾಡಬಹುದು. ಇಲ್ಲವೇ ರೆಡ್‌ ಝೋನ್‌ ಎಂದು ಪರಿಗಣಿಸಬಹುದು. ಮುಂದೆ ಪರಿಸ್ಥಿತಿ ಗಂಭೀರವಾಗಬಹುದು. ಇಡೀ ದಾವಣಗೆರೆಯನ್ನೇ ಸೀಲ್‌ಡೌನ್‌ ಮಾಡಿದರೂ ಮಾಡಬಹುದು ಎಂದು ಆತಂಕ ವ್ಯಕ್ತಪಡಿಸಿದರು. ಜನರು ಪರಿಸ್ಥಿತಿಯ ಗಂಭೀರತೆಯ ಅರ್ಥ ಮಾಡಿಕೊಂಡು ಯಾವುದೇ ಕಾರಣಕ್ಕೂ ಮನೆಯಿಂದ ಹೊರ ಬರಲೇಕೂಡದು.

ಅಗತ್ಯ ವಸ್ತುಗಳನ್ನು ಮನೆಯ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು. ಜನರು ಆನ್‌ಲೈನ್‌ ಮೂಲಕ ಇಲ್ಲವೇ ಜಿಲ್ಲಾಡಳಿತ ಪ್ರಾರಂಭಿಸಿರುವ ಹೆಲ್ಪ್ಲೈನ್‌ (ಸಹಾಯವಾಣಿ) ಸಂಪರ್ಕಿಸಿ ಹಾಲು, ಔಷಧಿ, ದಿನಸಿ ಪಡೆದುಕೊಳ್ಳಬೇಕು. ಜಿಲ್ಲಾಡಳಿತ, ಮಹಾನಗರ ಪಾಲಿಕೆ ಎಲ್ಲಾ ವ್ಯವಸ್ಥೆ ಮಾಡಲಿದೆ ಎಂದು ತಿಳಿಸಿದರು. ವಿಧಾನ ಪರಿಷತ್‌ ಸದಸ್ಯ ಕೆ. ಅಬ್ದುಲ್‌ ಜಬ್ಟಾರ್‌
ಮಾತನಾಡಿ, ಕೋವಿಡ್‌-19 ಹರಡದಂತೆ ಪ್ರತಿಯೊಬ್ಬರು ಜಾಗ್ರತೆಯಿಂದ ಇರಬೇಕು. ಅನಗತ್ಯವಾಗಿ ಮನೆಯಿಂದ ಹೊರಗೆ ಬರಬಾರದು ಎಂದು ಕೋರಿದರು.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.