ಲಾಕ್‌ಡೌನ್‌ ವೇಳೆ ಗುಡ್ಡ ಅಗೆದು ಕೃಷಿ ಮಾಡಿದ ಶಿಕ್ಷಕ


Team Udayavani, May 6, 2020, 6:23 AM IST

ಲಾಕ್‌ಡೌನ್‌ ವೇಳೆ ಗುಡ್ಡ ಅಗೆದು ಕೃಷಿ ಮಾಡಿದ ಶಿಕ್ಷಕ

ಕುಂದಾಪುರ: ಲಾಕ್‌ಡೌನ್‌ ವೇಳೆ ಸಮಯ ಕಳೆಯುವುದು ಹೇಗೆ ಎನ್ನುವುದು ಹಲವರ ಚಿಂತೆಯಾದರೆ ಇಲ್ಲೊಬ್ಬರು ಶಿಕ್ಷಕರು ತಮ್ಮ ಮನೆ ಪಕ್ಕದ ಗುಡ್ಡ ಸಮತಟ್ಟುಗೊಳಿಸಿ ತರಹೇವಾರಿ ತರಕಾರಿ ಕೃಷಿಯನ್ನು ಮಾಡಿದ್ದಾರೆ.

ಹಾಲಾಡಿ ಗ್ರಾಮದ ಮುದೂರಿಯ ನಿವಾಸಿ, ಪ್ರಸ್ತುತ ಮಂಗಳೂರಿನ ಶಾರದಾ ವಿದ್ಯಾಲಯದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ರಾಗಿರುವ ದಿನೇಶ್‌ ಮುದೂರಿ ಅವರೇ ಗುಡ್ಡ ಅಗೆದು, ಕೃಷಿ ಮಾಡಿದ ಶಿಕ್ಷಕ.

12 ವರ್ಷಗಳ ಬಳಿಕ ಕೃಷಿ
ದಿನೇಶ್‌ ಅವರು 12 ವರ್ಷಗಳಿಂದ ದೈ.ಶಿ. ಶಿಕ್ಷಕರಾಗಿದ್ದು ಊರಿಗೆ ಬರುತ್ತಿ ದ್ದರೂ, ಕೃಷಿಯಲ್ಲಿ ಸಕ್ರಿಯರಾಗಿ ತೊಡಗಿ ಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಈಗ ಮನೆ ಸನಿಹ ಅರ್ಧ ಕಿ.ಮೀ. ದೂರದಲ್ಲಿ ಗುಡ್ಡ ಸಮತಟ್ಟುಗೊಳಿಸಿ ತರಕಾರಿ ಕೃಷಿಗೆ ಮುಂದಾಗಿದ್ದಾರೆ. ಇದಕ್ಕೆ ವಾರಾಹಿ ನೀರು ವರವಾಗಿದೆ. ಕಾಡುಪ್ರಾಣಿ ಉಪಟಳ ತಡೆಗೆ ಬೇಲಿ ವ್ಯವಸ್ಥೆ ಮಾಡಿದ್ದಾರೆ.

ಸಾವಯವ ತರಕಾರಿ
ಈ ಕೈತೋಟದಲ್ಲಿ ಸೌತೆ, ಬೆಂಡೆಕಾಯಿ, ಅಲಸಂಡೆ ಬೆಳೆದಿದ್ದಾರೆ. ಸೌತೆ ಬಳ್ಳಿ ಕಾಯಿ ಬಿಟ್ಟಿದ್ದು, ಅಲಸಂಡೆ ಬಳ್ಳಿ, ಬೆಂಡೆ ಗಿಡ ಇನ್ನಷ್ಟು ಬೆಳೆಯಬೇಕಿದೆ. ರಾಸಾಯನಿಕ ಗೊಬ್ಬರ ಹಾಕದೇ, ಹಟ್ಟಿ ಗೊಬ್ಬರ ಬಳಸಿ ಬೆಳೆಯಲಾದ ಸಾವಯವ ಬೆಳೆ ಇದಾಗಿದೆ ಎನ್ನುತ್ತಾರೆ ದಿನೇಶ್‌ ಮುದೂರಿ.

ಖುಷಿ ಕೊಟ್ಟಿದೆ
ಕೃಷಿ ಕಾಯಕ ಮನಸ್ಸಿಗೆ ತುಂಬಾ ಸಂತೃಪ್ತಿ ನೀಡಿದೆ. ಲಾಕ್‌ಡೌನ್‌ ಸಮಯವನ್ನು ಹೇಗೆ ಕಳೆಯುವುದೆಂದು ಯೋಚಿಸುತ್ತಿದ್ದಾಗ ತರಕಾರಿ ಕೃಷಿ ಮಾಡುವ ಯೋಚನೆ ಬಂತು. ಉತ್ತಮ ನೀರು ಕೂಡ ಇರುವುದರಿಂದ ಬೆಂಡೆ, ಅಲಸಂಡೆ, ಸೌತೆ ಬಳ್ಳಿಗಳು ಉತ್ತಮವಾಗಿ ಬೆಳೆಯುತ್ತಿದೆ. ಸಾವಯವ ಗೊಬ್ಬರವೇ ಹಾಕಿರುವುದರಿಂದ ಉತ್ತಮ ಇಳುವರಿಯ ನಿರೀಕ್ಷೆಯಿದೆ.
-ದಿನೇಶ್‌ ಮುದೂರಿ,
ಕೃಷಿಯಲ್ಲಿ ತೊಡಗಿರುವ ಶಿಕ್ಷಕ.

ಟಾಪ್ ನ್ಯೂಸ್

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.