ಕೊಡಗು: ಇಂದಿನಿಂದ ಕೆಎಸ್ಆರ್ಟಿಸಿ ಬಸ್ಗಳ ಸಂಚಾರ ಆರಂಭ
Team Udayavani, May 6, 2020, 6:40 AM IST
ಸಾಂದರ್ಭಿಕ ಚಿತ್ರ.
ಮಡಿಕೇರಿ: ಕೊಡಗು ಜಿಲ್ಲೆಯೊಳಗೆ ಬಸ್ ಸಂಚಾರಕ್ಕೆ ಜಿಲ್ಲಾಡಳಿತ ಹಸುರು ನಿಶಾನೆ ನೀಡಿದ್ದರೂ ಮೇ 18ರ ವರೆಗೆ ಖಾಸಗಿ ಬಸ್ಗಳು ಸಂಚರಿಸುವುದಿಲ್ಲ. ಆದರೆ ಕೆಎಸ್ಆರ್ಟಿಸಿ ಬಸ್ಗಳು ಬುಧವಾರದಿಂದ ಜಿಲ್ಲೆಯ ಕೆಲವು ಭಾಗಗಳಲ್ಲಿ ಸಂಚರಿಸಲಿವೆ.
ಬಸ್ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ನೀಡಿದರೂ ಶೇ. 50ರಷ್ಟು ಪ್ರಯಾಣಿಕರನ್ನು ಕರೆದೊಯ್ಯುವ ನಿಯಮದಿಂದಾಗಿ ನಷ್ಟ ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಬಸ್ ಓಡಿಸದೇ ಇರಲು ಜಿಲ್ಲಾ ಖಾಸಗಿ ಬಸ್ ಮಾಲಕರು ನಿರ್ಧರಿಸಿದ್ದಾರೆ ಎಂದು ಕೊಡಗು ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘದ ಅಧ್ಯಕ್ಷ ಹೊಸೂರು ರಮೇಶ್ ಜೋಯಪ್ಪ ತಿಳಿಸಿದ್ದಾರೆ.
ಬುಧವಾರದಿಂದ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಜಿಲ್ಲೆಯೊಳಗೆ ಮಾತ್ರ ಬಸ್ ಸಂಚಾರ ಇರುತ್ತದೆ ಎಂದು ಕೆಎಸ್ಆರ್ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕಿ ಎಚ್. ಗೀತಾ ಹೇಳಿದ್ದಾರೆ.
ಮಡಿಕೇರಿ – ಕುಶಾಲನಗರ,ಮಡಿಕೇರಿ – ಗೋಣಿಕೊಪ್ಪ, ಮಡಿಕೇರಿ – ವೀರಾಜಪೇಟೆ, ಮಡಿಕೇರಿ -ಕೊಡ್ಲಿಪೇಟೆ, ಮಡಿಕೇರಿ – ಸೋಮವಾರಪೇಟೆಗಳಿಗೆ ಸರಕಾರಿ ಬಸ್ ಸೌಲಭ್ಯ ಕಲ್ಪಿಸಲಾಗುವುದು. ಬೇಡಿಕೆ ಇದ್ದಲ್ಲಿ ಕುಶಾಲನಗರ -ಕೂಡಿಗೆ – ಶಿರಂಗಾಲದ ನಡುವೆಸರಕಾರಿ ಬಸ್ ಸಂಚಾರ ಕಲ್ಪಿಸಲಾ ಗುವುದು ಎಂದಿದ್ದಾರೆ.
ದರ ಹೆಚ್ಚಳವಿಲ್ಲ
ಬಸ್ನಲ್ಲಿ ಒಟ್ಟು ಸೀಟ್ಗಳ ಶೇ.50ರಷ್ಟು ಸೀಟ್ಗಳಲ್ಲಿ ಮಾತ್ರ ಪ್ರಯಾಣಿಕರು ಸಂಚರಿಸಬಹುದಾಗಿದೆ. ಆದರೆ ಪ್ರಯಾಣ ದರದಲ್ಲಿ ಹೆಚ್ಚಳವಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ