ಕೋವಿಡ್ ನಿಯಂತ್ರಣಕ್ಕೆ ಕೇಂದ್ರ- ರಾಜ್ಯ ಸರ್ಕಾರ ಕ್ರಮ: ಭೂಸನೂರ


Team Udayavani, May 7, 2020, 5:18 PM IST

5-May-05

ಸಿಂದಗಿ: ಕೋವಿಡ್ ನಿಯಂತ್ರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿವೆ. ಲಾಕ್‌ಡೌನ್‌ನಿಂದ ನಿರಾಶ್ರಿತರಾದ ಅನೇಕ ಕುಟುಂಬಗಳಿಗೆ ನೆರವು ನೀಡಿ ಧೈರ್ಯ ತುಂಬುವ ಕೆಲಸ ಮಾಡಲಾಗುತ್ತಿದೆ ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು.

ಇತ್ತೀಚೆಗೆ ಪಟ್ಟಣದ ತಹಶೀಲ್ದಾರ್‌ ಕಚೇರಿಗೆ ಆಗಮಿಸಿದ ನಿರಾಶ್ರಿತರಿಗಾಗಿ ತಾಲೂಕಾ ಆಡಳಿತ ಹಮ್ಮಿಕೊಂಡ ಅನ್ನ ದಾಸೋಹ ಕೇಂದ್ರಕ್ಕೆ ಆಹಾರ ಧಾನ್ಯ ದೇಣಿಗೆ ನೀಡಿ ಅವರು ಮಾತನಾಡಿದರು. ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾದ ನಿರ್ಗತಿಕರು, ಕಡು ಬಡವರಿಗೆ ತಾಲೂಕು ಆಡಳಿತದಿಂದ ತಹಶೀಲ್ದಾರ್‌ ಸಂಜೀವಕುಮಾರ ದಾಸರ ನೇತೃತ್ವದಲ್ಲಿ ದಾಸೋಹ ಕಾರ್ಯ ನಡೆಯುತ್ತಿರುವುದು ಶ್ಲಾಘನೀಯ. ಈ ದಾಸೋಹ ಕೇಂದ್ರಕ್ಕೆ ಆಹಾರ ದಾನ್ಯಗಳನ್ನು ನೀಡುವ ಜೊತೆಗೆ ಆಲಮೇಲ ತಾಲೂಕಿನಲ್ಲಿನ ಕ್ಷೌರಿಕ ವೃತ್ತಿಯನ್ನೇ ನಂಬಿ ಜೀವನ ನಡೆಸುತ್ತಿರುವ ಹಡಪದ ಸಮಾಜದ 50 ಕುಟುಂಬಗಳಿಗೆ ಆಹಾರದ ಕಿಟ್‌ ನೀಡಲಾಗಿದೆ ಎಂದು ಹೇಳಿದರು.

ಶಾಸಕ ರಮೇಶ ಭೂಸನೂರ ಅವರು ತಾಲೂಕು ಆಡಳಿತದ ಅನ್ನದಾಸೋಹ ಕೇಂದ್ರಕ್ಕೆ 10 ಕ್ವಿಂಟಲ್‌ ಅಕ್ಕಿ, 5 ಕ್ವಿಂಟಲ್‌ ಸಕ್ಕರೆ, 5 ಕ್ವಿಂಟಲ್‌ ರವೆ ಹಾಗೂ 30 ಕೆಜಿ ಡಾಲ್ಡಾ ನೀಡಿದರು. ಬಿಜೆಪಿ ಮಂಡಳ ಅಧ್ಯಕ್ಷ ಈರಣ್ಣ ರಾವೂರ, ಸಂತೋಷ ಪಾಟೀಲ ಡಂಬಳ ಮಾತನಾಡಿದರು. ತಹಶೀಲ್ದಾರ್‌ ಸಂಜೀವಕುಮಾರ ದಾಸರ ಮಾತನಾಡಿ, ತಾಲೂಕು ಆಡಳಿತದಿಂದ ಅನೇಕ ದಿನಗಳಿಂದ ಅನ್ನ ದಾಸೋಹ ನಡೆಯುತ್ತಿದೆ. ಪ್ರತಿ ನಿತ್ಯ ಅನೇಕ ಬಡ ಹಾಗೂ ನಿರಾಶ್ರಿತರು ಇಲ್ಲಿ ಊಟ ಮಾಡುತ್ತಿದ್ದಾರೆ. ಇದೊಂದು ಮಾನವೀಯ ಕಾರ್ಯ. ದಾನಿಗಳು ನಿತ್ಯವು ಇದಕ್ಕೆ ಸಹಾಯ ಹಸ್ತ ನೀಡುತ್ತಿದ್ದಾರೆ. ನಾವು ದಿನಾಲು 2 ಹೊತ್ತು ಊಟದ ವ್ಯವಸ್ಥೆ ಮಾಡುತ್ತಿದ್ದೇವೆ. ಆದರೆ ಇನ್ನು ಮುಂದೆ ದಾನಿಗಳು ಆಹಾರ ಧಾನ್ಯ ಕೊಡಲು ಮುಂದಾದಲ್ಲಿ ದಿನಕ್ಕೆ 3 ಬಾರಿ ಊಟದ ವ್ಯವಸ್ಥೆ ಮಾಡಲಾಗುವುದು ಎಂದರು.

ಇದೇ ಸಂದಭದಲ್ಲಿ ಮಾಜಿ ಶಾಸಕ ರಮೇಶ ಭೂಸನೂರ ಅವರು ಪತ್ರಕರ್ತರಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್‌ ವಿತರಿಸಿದರು. ಪುರಸಭೆ ಸದಸ್ಯ ಮಹಾಂತಗೌಡ ಬಿರಾದಾರ, ಸಿದ್ದು ಬುಳ್ಳಾ, ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ಸುನಂದಾ ಯಂಪುರೆ, ಅನಸುಬಾಯಿ ಪರಗೊಂಡ, ರವಿ ನಾಯ್ಕೋಡಿ, ಸಿದ್ರಾಯ ಪೂಜಾರಿ, ಶಿವು ಆಲಮೇಲ, ಗುರು ತಳವಾರ, ಸಾಯಬಣ್ಣ ದೇವರಮನಿ ಇತರರು ಇದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.