ಲಾಕ್‌ಡೌನ್‌ ಸಡಿಲಿಕೆ ದುರ್ಬಳಕೆಯಾದ್ರೆ ಬಿಗಿ ಕ್ರಮ


Team Udayavani, May 6, 2020, 2:19 PM IST

ಲಾಕ್‌ಡೌನ್‌ ಸಡಿಲಿಕೆ ದುರ್ಬಳಕೆಯಾದ್ರೆ ಬಿಗಿ ಕ್ರಮ

ಸಾಂದರ್ಭಿಕ ಚಿತ್ರ

ಬಾಗಲಕೋಟೆ: ಕೋವಿಡ್ 19 ವೈರಸ್‌ ನಿಯಂತ್ರಣಕ್ಕಾಗಿ ಹೇರಲಾಗಿರುವ ಲಾಕ್‌ ಡೌನ್‌ದಿಂದ ಸದ್ಯ ಕೆಲವು ಸಡಿಲಿಕೆ ನೀಡಲಾಗಿದೆ. ಈ ಸಡಿಲಿಕೆ ದುರ್ಬಳಕೆ ಮಾಡಿಕೊಂಡರೆ ಮತ್ತೆ ಬಿಗಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಬೆಳಗಾವಿ ವಲಯದ ಐಜಿಪಿ ರಾಘವೇಂದ್ರ ಸುಹಾಸ್‌ ಎಚ್ಚರಿಕೆ ನೀಡಿದರು.

ಜಿಲ್ಲಾ ಕೋವಿಡ್‌-19 ಆಸ್ಪತ್ರೆ ಆವರಣದಲ್ಲಿ ಕೋವಿಡ್ 19 ಸೋಂಕಿನಿಂದ ಗುಣಮುಖರಾಗಿ ಹೊರಬಂದ ಇಬ್ಬರು ಪೊಲೀಸ್‌ ಸಿಬ್ಬಂದಿಯನ್ನು ಸ್ವಾಗತಿಸಿ, ಕ್ವಾರಂಟೈನ್‌ಗೆ ಕಳುಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಧೋಳದ ನಾಲ್ವರು ಪೊಲೀಸ್‌ ಸಿಬ್ಬಂದಿಗೆ ಈ ಸೋಂಕು ತಗುಲಿದ್ದು, ಅದರಲ್ಲಿ ಮೂವರು ಗುಣಮುಖರಾಗಿದ್ದಾರೆ. ಇಂದು ಇಬ್ಬರನ್ನು ಬಿಡುಗಡೆಗೊಳಿಸಲಾಗಿದೆ. ಕೋವಿಡ್ 19 ಮುಕ್ತರಾಗಿ ಹೊರಬಂದ ಪೊಲೀಸ್‌ ಸಿಬ್ಬಂದಿಯನ್ನು ನೋಡಿ ಸಂತೋಷವಾಯಿತು. ಗುಣಮುಖರಾಗುವ ಜತೆಗೆ ಫಿಟ್‌ನೆಸ್‌ ಜತೆಗೆ ಹೊರ ಬಂದಿದ್ದಾರೆ ಎಂದರು.

ಸಿಬ್ಬಂದಿಗೆ ಸೋಂಕು ತಗುಲಿದಾಗ ಆಸ್ಪತ್ರೆಗೆ ಹೊರಟಿದ್ದ ಅವರ ಮುಖದಲ್ಲಿ ಭಾವನಾತ್ಮಕವಾಗಿ ದುಃಖಪಟ್ಟಿದ್ದರು. ಅವರಿಗೂ ಪತ್ನಿ, ಚಿಕ್ಕ ಚಿಕ್ಕ ಮಕ್ಕಳಿದ್ದಾರೆ ಎಂಬ ಭಾವುಕತೆಯಲ್ಲಿದ್ದರು. ಬಾಗಲಕೋಟೆಯ ಕೋವಿಡ್‌ ಆಸ್ಪತ್ರೆಯ ಸಿಬ್ಬಂದಿವೈದ್ಯರು ಉತ್ತಮ ಚಿಕಿತ್ಸೆ ನೀಡಿದ್ದು, ಅವರೆಲ್ಲ ಬೇಗ ಗುಣಮುಖರಾಗಿ ಹೊರಬಂದಿದ್ದಾರೆ ಎಂದು ಹೇಳಿದರು.

ನಾವು ಜನಸೇವೆ ಮಾಡಲು ಯಾವಾಗಲೂ ಫಿಟ್‌ನೆಸ್‌ ಜತೆಗೆ ಹುಮ್ಮಸ್ಸಿನೊಂದಿಗೆ ಇರುತ್ತೇವೆ. ನಾವು ಶ್ರದ್ದೆಯಿಂದ ಕೆಲಸ ಮಾಡುತ್ತೇವೆ. ಜನರು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಜನರನ್ನು ನೋಡಿಕೊಳ್ಳಬೇಕಾದ ಪೊಲೀಸರಿಗೆ, ಇಂತಹ ಸ್ಥಿತಿ ಬರುವುದಿಲ್ಲ. ಲಾಕ್‌ಡೌನ್‌ ಈವರೆಗೆ ಕಠಿಣವಾಗಿತ್ತು. ಸದ್ಯ ಸಡಿಲಿಕೆಯಾಗಿದೆ. ಜನರು ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿಯೇ ಹೊರ ಬರಬೇಕು. ಇದನ್ನು ಉಲ್ಲಂಘಿಸಿದರೆ, ಲಾಕ್‌ಡೌನ್‌ ಮತ್ತೆ ಕಠಿಣವಾಗುತ್ತದೆ. ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಆಗಾಗ ಕೈ ತೊಳೆದುಕೊಳ್ಳಬೇಕು ಎಂದು ತಿಳಿಸಿದರು.

ಸಿಬ್ಬಂದಿ ಕುರಿತು ಎಚ್ಚರಿಕೆ: ಕೋವಿಡ್ 19 ನಿಯಂತ್ರಣಕ್ಕಾಗಿ ವಾರಿಯರ್ಸ್‌ ಕೆಲಸ ಮಾಡುತ್ತಿರುವ ಪೊಲೀಸ್‌ ಸಿಬ್ಬಂದಿ ಆರೋಗ್ಯದ ಕುರಿತು ಎಚ್ಚರಿಕೆ ವಹಿಸಲಾಗಿದೆ. ಪ್ರತಿಯೊಬ್ಬರಿಗೂ ಮಾಸ್ಕ್ ನೀಡಿದ್ದು, ಎಲ್ಲ ಠಾಣೆ, ವಸತಿಗೃಹಗಳಿಗೆ ರಾಸಾಯನಿಕ ಸಿಂಪಡಣೆ ಮಾಡಲಾಗುತ್ತಿದೆ. ಅಲ್ಲದೇ ರೆಗ್ಯೂಲರ್‌ ಕೆಲಸ ಕಡಿಮೆ ಮಾಡಿದ್ದು, ಲಾಕ್‌ ಡೌನ್‌ ವೇಳೆ ಜನರ ಸುರಕ್ಷತೆ ಕುರಿತು ಹೆಚ್ಚು ಕಾಳಜಿ ವಹಿಸುವ ಕೆಲಸ ಮಾಡುತ್ತಿದ್ದೇವೆ. ಅಲ್ಲದೇ ಕಂಟೈನ್‌ಮೆಂಟ್‌ ಝೋನ್‌ನಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ರೋಗ ನಿರೋಧಕ ಶಕ್ತಿ ಹೆಚ್ಚಳವಾಗುವ ಊಟದ ವ್ಯವಸ್ಥೆ ಮಾಡಿದ್ದು, ಕೆಲವು ದಿನ ಮನೆಯಿಂದ ಬಂದು ಕೆಲಸ ನಿರ್ವಹಿಸದೇ ಪ್ರತ್ಯೇಕವಾಗಿ ವಾಸಿಸಲು ಸೂಚಿಸಲಾಗಿದೆ ಎಂದು ಐಜಿಪಿ ರಾಘವೇಂದ್ರ ಸುಹಾಸ್‌ ಹೇಳಿದರು.

ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ|ಕೆ.ರಾಜೇಂದ್ರ, ಎಸ್ಪಿ ಲೋಕೇಶ ಜಗಲಾಸರ ಇದ್ದರು.

ಟಾಪ್ ನ್ಯೂಸ್

suicide

Heatstroke; ಬಸವಕಲ್ಯಾಣದಲ್ಲಿ ಬಿಸಿಲಿನ ಝಳಕ್ಕೆ ಕಾರ್ಮಿಕ‌ ಸಾವು‌?

1-ww-ewq

SSLC Result; ಜ್ಞಾನಸುಧಾ ಕಾರ್ಕಳ ಶೇ. 100 ಫ‌ಲಿತಾಂಶ: ಸಹನಾ ರಾಜ್ಯಕ್ಕೆ ತೃತೀಯ

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

JDS: ಸಂಪುಟದಿಂದ ಡಿಕೆಶಿ ಕೈಬಿಡಿ; ರಾಜ್ಯಪಾಲರಿಗೆ ಜೆಡಿಎಸ್‌ ದೂರು

JDS: ಸಂಪುಟದಿಂದ ಡಿಕೆಶಿ ಕೈಬಿಡಿ; ರಾಜ್ಯಪಾಲರಿಗೆ ಜೆಡಿಎಸ್‌ ದೂರು

Compensation: ಮಳೆ ಆಧಾರಿತ ಬೆಳೆಗಳಿಗೂ ಪರಿಹಾರಧನ; ಸಚಿವ ಕೃಷ್ಣ ಬೈರೇಗೌಡ

Compensation: ಮಳೆ ಆಧಾರಿತ ಬೆಳೆಗಳಿಗೂ ಪರಿಹಾರಧನ; ಸಚಿವ ಕೃಷ್ಣ ಬೈರೇಗೌಡ

ಪೆನ್‌ಡ್ರೈವ್‌ ಪ್ರಕರಣ: ಕಲಾಪ ತಾತ್ಕಾಲಿಕ ಸ್ಥಳಾಂತರಕ್ಕೆ ರಿಜಿಸ್ಟ್ರಾರ್‌ಗೆ ಪತ್ರ

ಪೆನ್‌ಡ್ರೈವ್‌ ಪ್ರಕರಣ: ಕಲಾಪ ತಾತ್ಕಾಲಿಕ ಸ್ಥಳಾಂತರಕ್ಕೆ ರಿಜಿಸ್ಟ್ರಾರ್‌ಗೆ ಪತ್ರ

Hasana: “ದೇಶ ಆಳಿದ ಕುಟುಂಬ ಸದಸ್ಯನ ದುಷ್ಕೃತ್ಯ ಬೇಸರ ತರಿಸಿದೆ’: ಕೆ.ಎಂ.ಶಿವಲಿಂಗೇಗೌಡ

Hasana: “ದೇಶ ಆಳಿದ ಕುಟುಂಬ ಸದಸ್ಯನ ದುಷ್ಕೃತ್ಯ ಬೇಸರ ತರಿಸಿದೆ’: ಕೆ.ಎಂ.ಶಿವಲಿಂಗೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ

SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ

IFS ಪರೀಕ್ಷೆಯಲ್ಲಿ ದೇಶಕ್ಕೆ 42 ನೇ ರ‍್ಯಾಂಕ್ ಪಡೆದ ಅಕ್ಕಿಮರಡಿಯ ಪಾಂಡುರಂಗ ಸದಾಶಿವ ಕಂಬಳಿ

IFS ಪರೀಕ್ಷೆಯಲ್ಲಿ ದೇಶಕ್ಕೆ 42 ನೇ ರ‍್ಯಾಂಕ್ ಪಡೆದ ಅಕ್ಕಿಮರಡಿಯ ಪಾಂಡುರಂಗ ಸದಾಶಿವ ಕಂಬಳಿ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

suicide

Heatstroke; ಬಸವಕಲ್ಯಾಣದಲ್ಲಿ ಬಿಸಿಲಿನ ಝಳಕ್ಕೆ ಕಾರ್ಮಿಕ‌ ಸಾವು‌?

1-ww-ewq

SSLC Result; ಜ್ಞಾನಸುಧಾ ಕಾರ್ಕಳ ಶೇ. 100 ಫ‌ಲಿತಾಂಶ: ಸಹನಾ ರಾಜ್ಯಕ್ಕೆ ತೃತೀಯ

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

JDS: ಸಂಪುಟದಿಂದ ಡಿಕೆಶಿ ಕೈಬಿಡಿ; ರಾಜ್ಯಪಾಲರಿಗೆ ಜೆಡಿಎಸ್‌ ದೂರು

JDS: ಸಂಪುಟದಿಂದ ಡಿಕೆಶಿ ಕೈಬಿಡಿ; ರಾಜ್ಯಪಾಲರಿಗೆ ಜೆಡಿಎಸ್‌ ದೂರು

Compensation: ಮಳೆ ಆಧಾರಿತ ಬೆಳೆಗಳಿಗೂ ಪರಿಹಾರಧನ; ಸಚಿವ ಕೃಷ್ಣ ಬೈರೇಗೌಡ

Compensation: ಮಳೆ ಆಧಾರಿತ ಬೆಳೆಗಳಿಗೂ ಪರಿಹಾರಧನ; ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.